ದೀಪಾವಳಿ ಸಮಯದಲ್ಲೂ ಭಕ್ತಾದಿಗಳಿಗೆ ಜಗನ್ನಾಥನ ದರ್ಶನ ಭಾಗ್ಯವಿಲ್ಲ
ಪುರಿ, ಅಕ್ಟೋಬರ್ 14: ಹಿಂದುಗಳ ಪವಿತ್ರ ಯಾತ್ರಾಸ್ಥಳ ಪುರಿಯಲ್ಲಿ ಇನ್ನೂ ಕೋವಿಡ್ 19 ಮಾರ್ಗಸೂಚಿಗಳು ಬಿಗಿಯಾಗಿವೆ. ದಸರಾ ಸಂದರ್ಭದಲ್ಲಿ ಪುರಿ ಜಗನ್ನಾಥ ದೇಗುಲ ಸಾರ್ವಜನಿಕರ ದರ್ಶನಕ್ಕೆ ಮುಕ್ತವಾಗಿಲ್ಲ.
ಶ್ರೀ ಜಗನ್ನಾಥ ದೇವಸ್ಥಾನದ ಆಡಳಿತ (ಎಸ್ಜೆಟಿಎ) ಗುರುವಾರ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಪುರಿಯಲ್ಲಿರುವ ಪ್ರಸಿದ್ಧ ದೇಗುಲವು ಭಕ್ತಾದಿಗಳಿಗಾಗಿ ಕ್ರಮವಾಗಿ ದಸರಾ (ಅಕ್ಟೋಬರ್ 15) ಮತ್ತು ದೀಪಾವಳಿ (ನವೆಂಬರ್ 4) ಹಬ್ಬದ ದಿನಗಳಲ್ಲಿ ಮುಚ್ಚಿರುತ್ತದೆ ಎಂದು ತಿಳಿಸಲಾಗಿದೆ.
ಹಬ್ಬ ಹಾಗೂ ಮುಂತಾದ ಶುಭ ಸಂದರ್ಭಗಳಲ್ಲಿ ಹೆಚ್ಚಿನ ಜನ ಸಂದಣಿ ಇರುವೆಡೆಗಳಲ್ಲಿ ಕಠಿಣ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ.

ಹೊಸ ಮಾರ್ಗಸೂಚಿ ಅಕ್ಟೋಬರ್ 15ರಿಂದ ಜಾರಿಗೆ ಬರಲಿದೆ. ಅ.15ರ ಮಧ್ಯಾಹ್ನ 12ರಿಂದ ಅಕ್ಟೋಬರ್ 16(ಭಾಸನಿ) ತನಕ ಹಾಗೂ ನವೆಂಅಬ್ರ್ 4( ದೀಪಾವಳಿ) ಹಾಗೂ ನವೆಂಬರ್ 15 (ಮಹಾ ಏಕಾದಶಿ) ಮತ್ತು ನವೆಂಬರ್ 19 (ಕಾರ್ತಿಕ ಹುಣ್ಣಿಮೆ) ದಿನಗಳಂದು ದೇಗುಲದ ಬಾಗಿಲುಗಳು ಬಂದ್ ಆಗಿರಲಿವೆ.
ಅಕ್ಟೋಬರ್ 20ರಂದು ಕುಮಾರ ಪೂರ್ಣಿಯಾ ದಿನದಂದು ದೇಗುಲದ ಬಾಗಿಲು ತೆರೆಯಲಿದ್ದು, ಸಾರ್ವಜನಿಕರಿಗೆ ದರ್ಶನಕ್ಕೆ ಮುಕ್ತವಾಗಿರಲಿದೆ.
ಮಿಕ್ಕಂತೆ, ಎಲ್ಲಾ ಭಾನುವಾರ ಹಾಗೂ ರಜಾದಿನಗಳಂದು ದೇಗುಲವು ಬಂದ್ ಆಗಿರಲಿದೆ. ದೇಗುಲದ ಆವರಣವನ್ನು ಸೋಂಕು ಮುಕ್ತಗೊಳಿಸಲು ಸೂಕ್ತ ಕ್ರಮ ಜರುಗಿಸಲಾಗಿದೆ. ಭಕ್ತಾದಿಗಳು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕೊರೊನಾ ಲಸಿಕೆ ಪಡೆದುಕೊಳ್ಳುವುದು, ಕೋವಿಡ್ 19 ನೆಗಟಿವ್ ಪ್ರಮಾಣ ಪತ್ರ ಹೊಂದಿರುವುದು ಮುಂತಾದ ಅಗತ್ಯ ಕ್ರಮಗಳನ್ನು ತಪ್ಪದೇ ಪಾಲಿಸುವಂತೆ ದೇಗುಲ ನಿರ್ವಹಣಾ ಮಂಡಳಿ ಮನವಿ ಮಾಡಿಕೊಂಡಿದೆ.
ದರ್ಶನ ಸಮಯ: ಬೆಳಗ್ಗೆ 7 ರಿಂದ 9 ಗಂಟೆ ಮಾತ್ರ. ಕೋವಿಡ್ 19 ನಿಯಮ ಅನುಸರಿಸಿ ಭಕ್ತಾದಿಗಳು ಜಗನ್ನಾಥ ಸ್ವಾಮಿಯ ದರ್ಶನ ಪಡೆದುಕೊಳ್ಳಬಹುದು.
ಹಿರಿಯ ನಾಗರಿಕರು, ಮಕ್ಕಳು, ಅನಾರೋಗ್ಯ ಪೀಡಿತರು, ಗರ್ಭಿಣಿಯರು, , ಕೊರೊನಾ ಲಸಿಕೆ ಪಡೆಯದಿರುವವರು ದೇಗುಲದಿಂದ ದೂರ ಉಳಿದರೆ ಒಳ್ಳೆಯದು ಎಂದು ಸೂಚಿಸಲಾಗಿದೆ.
ಇನ್ನು ದೇಗುಲ ಭೇಟಿಗೂ ಮುನ್ನ 72 ಗಂಟೆಗಳ ಅವಧಿಯ ಆರ್ ಟಿ ಪಿಸಿಆರ್ ಪರೀಕ್ಷೆ ನಡೆಸಿ ಫಲಿತಾಂಶ ವರದಿ ಹೊಂದಿರಬೇಕು ಎಂಬ ನಿಯಮವನ್ನು ಬದಲಿಸಲಾಗಿದ್ದು, 96 ಗಂಟೆಗಳಿಗೂ ಮುಂಚಿನ ಪ್ರಮಾಣ ಪತ್ರ ಹೊಂದಿರಬೇಕು. ಕೊರೊನಾ ಲಸಿಕೆ ಎರಡು ಡೋಸ್ ಪಡೆದವರು ದೇಗುಲ ದರ್ಶನ ಸಂದರ್ಭದಲ್ಲಿ ಪ್ರಮಾಣ ಪತ್ರ ತೋರಿಸಬೇಕಾಗುತ್ತದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications