ಪದ್ಮಭೂಷಣ ಪ್ರಶಸ್ತಿಗೆ ಶಟ್ಲರ್ ಸಿಂಧು ಹೆಸರು ಶಿಫಾರಸು
ನವದೆಹಲಿ, ಸೆಪ್ಟೆಂಬರ್ 25: ಒಲಿಂಪಿಕ್ಸ್ ಬೆಳ್ಳಿ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರಿಗೆ ಪ್ರತಿಷ್ಠಿತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಪ್ರಶಸ್ತಿ ನೀಡುವಂತೆ ಕೇಂದ್ರ ಕ್ರೀಡಾ ಇಲಾಖೆಯು ಭಾರತ ಸರ್ಕಾರಕ್ಕೆ ಶಿಫಾರಸು ಮಾಡಿದೆ.
2015ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಅವರು ಇದೀಗ ಮತ್ತೊಂದು ನಾಗರಿಕ ಪ್ರಶಸ್ತಿಗೆ ಶಿಫಾರಸುಗೊಂಡಿದ್ದಾರೆ.

ಇತ್ತೀಚೆಗೆ ನಡೆದ ಕೊರಿಯಾ ಓಪನ್ ಸೂಪರ್ ಸೀರಿಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪಿ.ವಿ. ಸಿಂಧು ಅವರು ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಮೂಲಕ, ಈ ಸಾಧನೆ ಮಾಡಿದ ಭಾರತದ ಮೊಟ್ಟ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಈ ಹಿನ್ನೆಲೆಯಲ್ಲಿ, ಸಿಂಧು ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಕೇಂದ್ರ ಕ್ರೀಡಾ ಇಲಾಖೆ ತನ್ನ ಶಿಫಾರಸಿನಲ್ಲಿ ತಿಳಿಸಿದೆ. ಕೊರಿಯಾ ಓಪನ್ ನಲ್ಲಿ ಪ್ರಶಸ್ತಿ ಗೆದ್ದ ಹಿನ್ನೆಲೆಯಲ್ಲಿ, ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಕಳೆದ ವಾರ ಆರಂಭಗೊಂಡ ಜಪಾನ್ ಓಪನ್ ಸೂಪರ್ ಸೀರಿಸ್ ನ ಆರಂಭಿಕ ಸುತ್ತಿನಲ್ಲೇ ಸಿಂಧು ಸೋಲು ಕಂಡರೂ ಅವರ 2ನೇ ಶ್ರೇಯಾಂಕ ಅಬಾಧಿತವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications