ಇಂದು ನಾಲ್ಕು ದೇಶಗಳ ಮೊದಲ 'ಕ್ವಾಡ್' ಸಮ್ಮೇಳನ: ಅಮೆರಿಕದ ಲಸಿಕೆ ಭಾರತದಲ್ಲಿ ಉತ್ಪಾದನೆ
ನವದೆಹಲಿ, ಮಾರ್ಚ್ 10: ಭಾರತ, ಜಪಾನ್, ಅಮೆರಿಕ ಮತ್ತು ಆಸ್ಟ್ರೇಲಿಯಾ- ನಾಲ್ಕು ದೇಶಗಳ ನಾಯಕರ ಮೊದಲ ಆನ್ಲೈನ್ ಸಮ್ಮೇಳನ ಇಂದು ನಡೆಯಲಿದ್ದು, ಜಗತ್ತಿನ ಗಮನ ಸೆಳೆದಿದೆ. ಈ ಸಭೆಯಲ್ಲಿ ಮುಖ್ಯವಾಗಿ ಕೋವಿಡ್ ನಿಯಂತ್ರಣ ಹಾಗೂ ಕೋವಿಡ್ ಲಸಿಕೆಯ ಕುರಿತು ಚರ್ಚೆ ನಡೆಯಲಿದೆ.
ನಾಲ್ಕು ದೇಶಗಳ ಕಾರ್ಯಯೋಜನೆ ಚೌಕಟ್ಟಿನ ಕುರಿತಾದ ನಾಯಕರ ಮೊದಲ ಸಭೆ (ಕ್ವಾಡ್) ಮಾರ್ಚ್ 12ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್, ಜಪಾನ್ ಪ್ರಧಾನಿ ಯೋಶಿಹಿಡೆ ಸುಗಾ ಮತ್ತು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಈ ಅನ್ಲೈನ್ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಅಮೆರಿಕದಲ್ಲಿ ಅಭಿವೃದ್ಧಿಯಾಗುವ ಲಸಿಕೆಗಳನ್ನು ಭಾರತದಲ್ಲಿ ಉತ್ಪಾದಿಸಲಾಗುವುದು. ಇದಕ್ಕೆ ಜಪಾನ್ ಮತ್ತು ಅಮೆರಿಕಗಳು ಆರ್ಥಿಕ ನೆರವು ನೀಡಲಿದ್ದು, ಆಸ್ಟ್ರೇಲಿಯಾ ಸಹಾಯ ಮಾಡಲಿದೆ. ಲಸಿಕೆ ಯೋಜನೆಯು ಭಾರತದ ಲಸಿಕೆ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲಿದ್ದು, ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ರಫ್ತು ಮಾಡಲಾಗುತ್ತದೆ. ಇದು ಈ ಪ್ರದೇಶದಲ್ಲಿ ಚೀನಾವನ್ನು ಎದುರಿಸುವ ಗುರಿ ಹೊಂದಿದೆ.

ಇದೇ ವೇಳೆ ಈ ನಾಲ್ಕು ದೇಶಗಳ ನಾಯಕರು ಹಂಚಿಕೆಯಾದ ಹಿತಾಸಕ್ತಿಗಳ ಜಾಗತಿಕ ಹಾಗೂ ಪ್ರಾದೇಶಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ. ಜತೆಗೆ ಮುಕ್ತ, ತೆರೆದ ಹಾಗೂ ಒಳಗೊಳ್ಳುವಿಕೆಯ ಇಂಡೋ-ಪೆಸಿಫಿಕ್ ಪ್ರದೇಶವನ್ನು ನಿಭಾಯಿಸುವತ್ತ ಸಹಕಾರದ ಕುರಿತಾದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.
ಪೂರೈಕೆ ಸರಪಳಿಯ ಚೇತರಿಕೆ, ಹೊಸ ಸೃಷ್ಟಿ ಹಾಗೂ ಮಹತ್ವದ ತಂತ್ರಜ್ಞಾನಗಳು, ಸಮುದ್ರತೀರ ಭದ್ರತೆ ಮತ್ತು ಹವಾಮಾನ ವೈಪರೀತ್ಯ ಸೇರಿದಂತೆ ಸಮಕಾಲೀನ ಸವಾಲುಗಳ ಕುರಿತು ಸಹ ಅಭಿಪ್ರಾಯಗಳ ವಿನಿಮಯಕ್ಕೆ ಸಮಾವೇಶದಲ್ಲಿ ಅವಕಾಶ ಸಿಗಲಿದೆ.
ಇದಕ್ಕೂ ಮುನ್ನ ಜಪಾನ್ ಪ್ರಧಾನಿ ಯೊಶಿಹಿಡೆ ಅವರ ಜತೆಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮಾತುಕತೆ ನಡೆಸಿದರು. ಇಂಡೋ ಪೆಸಿಫಿಕ್ ಪ್ರದೇಶದಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಸಂಬಂಧ ಕ್ವಾಡ್ ಚೌಕಟ್ಟಿನಲ್ಲಿ ಹಾಗೂ ದ್ವಿಪಕ್ಷೀಯವಾಗಿ ಸಹಭಾಗಿತ್ವವನ್ನು ತೀವ್ರಗೊಳಿಸುವುದರ ಬಗ್ಗೆ ಸಮಾಲೋಚನೆ ನಡೆಸಿದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications