ಇಂದು ನಾಲ್ಕು ದೇಶಗಳ ಮೊದಲ 'ಕ್ವಾಡ್' ಸಮ್ಮೇಳನ: ಅಮೆರಿಕದ ಲಸಿಕೆ ಭಾರತದಲ್ಲಿ ಉತ್ಪಾದನೆ
ನವದೆಹಲಿ, ಮಾರ್ಚ್ 10: ಭಾರತ, ಜಪಾನ್, ಅಮೆರಿಕ ಮತ್ತು ಆಸ್ಟ್ರೇಲಿಯಾ- ನಾಲ್ಕು ದೇಶಗಳ ನಾಯಕರ ಮೊದಲ ಆನ್ಲೈನ್ ಸಮ್ಮೇಳನ ಇಂದು ನಡೆಯಲಿದ್ದು, ಜಗತ್ತಿನ ಗಮನ ಸೆಳೆದಿದೆ. ಈ ಸಭೆಯಲ್ಲಿ ಮುಖ್ಯವಾಗಿ ಕೋವಿಡ್ ನಿಯಂತ್ರಣ ಹಾಗೂ ಕೋವಿಡ್ ಲಸಿಕೆಯ ಕುರಿತು ಚರ್ಚೆ ನಡೆಯಲಿದೆ.
ನಾಲ್ಕು ದೇಶಗಳ ಕಾರ್ಯಯೋಜನೆ ಚೌಕಟ್ಟಿನ ಕುರಿತಾದ ನಾಯಕರ ಮೊದಲ ಸಭೆ (ಕ್ವಾಡ್) ಮಾರ್ಚ್ 12ರಂದು ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್, ಜಪಾನ್ ಪ್ರಧಾನಿ ಯೋಶಿಹಿಡೆ ಸುಗಾ ಮತ್ತು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಈ ಅನ್ಲೈನ್ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಅಮೆರಿಕದಲ್ಲಿ ಅಭಿವೃದ್ಧಿಯಾಗುವ ಲಸಿಕೆಗಳನ್ನು ಭಾರತದಲ್ಲಿ ಉತ್ಪಾದಿಸಲಾಗುವುದು. ಇದಕ್ಕೆ ಜಪಾನ್ ಮತ್ತು ಅಮೆರಿಕಗಳು ಆರ್ಥಿಕ ನೆರವು ನೀಡಲಿದ್ದು, ಆಸ್ಟ್ರೇಲಿಯಾ ಸಹಾಯ ಮಾಡಲಿದೆ. ಲಸಿಕೆ ಯೋಜನೆಯು ಭಾರತದ ಲಸಿಕೆ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಲಿದ್ದು, ಇಂಡೋ-ಪೆಸಿಫಿಕ್ ಪ್ರದೇಶಕ್ಕೆ ರಫ್ತು ಮಾಡಲಾಗುತ್ತದೆ. ಇದು ಈ ಪ್ರದೇಶದಲ್ಲಿ ಚೀನಾವನ್ನು ಎದುರಿಸುವ ಗುರಿ ಹೊಂದಿದೆ.

ಇದೇ ವೇಳೆ ಈ ನಾಲ್ಕು ದೇಶಗಳ ನಾಯಕರು ಹಂಚಿಕೆಯಾದ ಹಿತಾಸಕ್ತಿಗಳ ಜಾಗತಿಕ ಹಾಗೂ ಪ್ರಾದೇಶಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲಿದ್ದಾರೆ. ಜತೆಗೆ ಮುಕ್ತ, ತೆರೆದ ಹಾಗೂ ಒಳಗೊಳ್ಳುವಿಕೆಯ ಇಂಡೋ-ಪೆಸಿಫಿಕ್ ಪ್ರದೇಶವನ್ನು ನಿಭಾಯಿಸುವತ್ತ ಸಹಕಾರದ ಕುರಿತಾದ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ.
ಪೂರೈಕೆ ಸರಪಳಿಯ ಚೇತರಿಕೆ, ಹೊಸ ಸೃಷ್ಟಿ ಹಾಗೂ ಮಹತ್ವದ ತಂತ್ರಜ್ಞಾನಗಳು, ಸಮುದ್ರತೀರ ಭದ್ರತೆ ಮತ್ತು ಹವಾಮಾನ ವೈಪರೀತ್ಯ ಸೇರಿದಂತೆ ಸಮಕಾಲೀನ ಸವಾಲುಗಳ ಕುರಿತು ಸಹ ಅಭಿಪ್ರಾಯಗಳ ವಿನಿಮಯಕ್ಕೆ ಸಮಾವೇಶದಲ್ಲಿ ಅವಕಾಶ ಸಿಗಲಿದೆ.
ಇದಕ್ಕೂ ಮುನ್ನ ಜಪಾನ್ ಪ್ರಧಾನಿ ಯೊಶಿಹಿಡೆ ಅವರ ಜತೆಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮಾತುಕತೆ ನಡೆಸಿದರು. ಇಂಡೋ ಪೆಸಿಫಿಕ್ ಪ್ರದೇಶದಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸುವ ಸಂಬಂಧ ಕ್ವಾಡ್ ಚೌಕಟ್ಟಿನಲ್ಲಿ ಹಾಗೂ ದ್ವಿಪಕ್ಷೀಯವಾಗಿ ಸಹಭಾಗಿತ್ವವನ್ನು ತೀವ್ರಗೊಳಿಸುವುದರ ಬಗ್ಗೆ ಸಮಾಲೋಚನೆ ನಡೆಸಿದರು.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications