ಅಡ್ವಾಣಿಯನ್ನು ಬಂಧಿಸಿದ್ದ ಆರ್ ಕೆ ಸಿಂಗ್ ಈಗ ಕೇಂದ್ರ ಸಚಿವ
Recommended Video

ಖಡಕ್ ಅಧಿಕಾರಿ ಎಂದೇ ಹೆಸರಾಗಿದ್ದ, ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ ಅವರನ್ನೇ ಬಂಧಿಸಿದ್ದ ನಿವೃತ್ತ ಐಎ ಎಸ್ ಅಧಿಕಾರಿ ಆರ್.ಕೆ.ಸಿಂಗ್ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬಿಹಾರದ ಅರಾ ಕ್ಷೇತ್ರದಿಂದ ಮೊದಲನೇ ಬಾರಿಗೆ ಸಂಸದರಾಗಿ ಆಯ್ಕೆ ಆಗಿದ್ದಾರೆ ಸಿಂಗ್. 1990ರ ಅಕ್ಟೋಬರ್ ನಲ್ಲಿ ಅಯೋಧ್ಯದಿಂದ ಸೋಮನಾಥಕ್ಕೆ ತೆರಳುತ್ತಿದ್ದ ರಾಮ್ ರಥ್ ವನ್ನು ತಡೆಯಲು ಅಡ್ವಾಣಿ ಅವರನ್ನು ಬಂಧಿಸುವ ಜವಾಬ್ದಾರಿ ವಹಿಸಿದ್ದು ಇದೇ ಆರ್.ಕೆ.ಸಿಂಗ್ ಗೆ.
ಆಗ ಬಿಜೆಪಿಯು ವಿ.ಪಿ.ಸಿಂಗ್ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತು. ಆ ಸರಕಾರ ಬಿದ್ದು ಹೋಗಲು ಕಾರಣವಾಯಿತು. ಸರಣಿ ಹಿಂಸಾಚಾರಗಳು ನಡೆದವು. ಆರ್.ಕೆ.ಸಿಂಗ್ ಅವರು ಸಮಷ್ಟಿಪುರ್ ಬಳಿ ರಥ್ ಯಾತ್ರೆ ತಡೆದಿದ್ದರು ಮತ್ತು ಅಡ್ವಾಣಿ ಅವರನ್ನು ಬಂಧಿಸಿದ್ದರು.

ಆ ನಂತರ ಬಿಜೆಪಿಯು ನೀಡಿದ್ದ ಬೆಂಬಲ ಹಿಂಪಡೆದಿದ್ದರಿಂದ ವಿ.ಪಿ.ಸಿಂಗ್ ನೇತೃತ್ವದ ಕೇಂದ್ರ ಸರಕಾರ ಪತನವಾಯಿತು. ಬಿಜೆಪಿಯು ದೇಶದಲ್ಲಿ ಪ್ರಮುಖ ಶಕ್ತಿಯಾಗಿ ರೂಪುಗೊಂಡಿತು. ವಿಚಿತ್ರ ಏನೆಂದರೆ, ಆರ್.ಕೆ.ಸಿಂಗ್ ಆನಂತರ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆದರು. ಆಗ ರಕ್ಷಣಾ ಖಾತೆಯ ಹೊಣೆ ಹೊತ್ತಿದ್ದವರು ಎಲ್.ಕೆ.ಅಡ್ವಾಣಿ.
ನಾಲ್ಕು ದಶಕಗಳ ಕಾಲ ಐಎಎಸ್ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿದ ಆರ್.ಕೆ.ಸಿಂಗ್ 2013ರಲ್ಲಿ ಬಿಜೆಪಿ ಸೇರುವ ತೀರ್ಮಾನ ಮಾಡಿದರು. ಅದರ ಮರುವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ಅರಾ ಕ್ಷೇತ್ರದಿಂದ ಗೆದ್ದರು. ಸಚಿವ ಸ್ಥಾನ ಪ್ರಮಾಣ ವಚನ ಪಡೆದ ನಂತರ ಅವರು ಮಾತನಾಡಿ, ನನಗೆ ಇದು ಸವಾಲಿನ ಜವಾಬ್ದಾರಿ. ಆದರೆ ಸವಾಲುಗಳನ್ನು ಸ್ವೀಕರಿಸಿ ರೂಢಿ ಇದೆ ಎಂದಿದ್ದಾರೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications