ಆರೆಸ್ಸೆಸ್ ವಸ್ತ್ರ ಸಂಹಿತೆ ಬದಲಾಗಲು ರಾಬ್ಡಿ ದೇವಿ ಕಾರಣವಂತೆ!
ಪಾಟ್ನ, ಮಾರ್ಚ್ 14: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಗಣವೇಷ ಬದಲಾವಣೆಯಾಗಿರುವುದು ಎಲ್ಲರಿಗೂ ತಿಳಿದಿರಬಹುದು. ಖಾಕಿ ಚಡ್ಡಿ ಬದಲು ಪ್ಯಾಂಟ್ ಧರಿಸಲು ಸಂಘ ಪರಿವಾರದ ಪ್ರಮುಖ ನಿರ್ಧರಿಸಿದ್ದಾರೆ. ಈ ಬದಲಾವಣೆಗೆ ಆರ್ ಜೆಡಿ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಅವರ ಪತ್ನಿ ರಾಬ್ಡಿ ದೇವಿ ಕಾರಣವಂತೆ!.
ಆರೆಸ್ಸೆಸ್ ಡ್ರೆಸ್ ಕೋಡ್ ಬದಲಾವಣೆಯಾಗಲು ನನ್ನ ಪತ್ನಿ ರಾಬ್ಡಿ ದೇವಿ ಕಾರಣ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಅವರು ಸೋಮವಾರ ಘೋಷಿಸಿದ್ದಾರೆ.

ಆದರೆ, ಅವರು ಫುಲ್ ಪ್ಯಾಂಟಿಗೆ ಬದಲಾಗಿರಬಹುದು. ಅವರನ್ನು ಮತ್ತೆ ಹಾಫ್ ಪ್ಯಾಂಟಿಗೆ ಇಳಿಸುತ್ತೇನೆ ಎಂದು ಲಾಲೂ ಹೇಳಿದ್ದಾರೆ.
ಲಾಲೂ ಅವರ ಪತ್ನಿ ರಾಬ್ಡಿ ದೇವಿ ಅವರು ಎರಡು ತಿಂಗಳ ಹಿಂದೆ ಆರೆಸ್ಸೆಸ್ ನ ವಸ್ತ್ರ ಸಂಹಿತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಮುಜುಗರಕ್ಕೀಡಾದ ಆರೆಸ್ಸೆಸ್ ಡ್ರೆಸ್ ಕೋಡ್ ಬದಲಾಯಿಸಿದೆಯಂತೆ.
राबड़ीदेवी जी के एक तर्कपूर्ण आक्रमक बयान ने मात्र 2 महीने में RSS को "हाफ पैंट" से "फुल पैंट" करने पर मजबूर कर दिया https://t.co/e9jkvwwekN
— Lalu Prasad Yadav (@laluprasadrjd) March 14, 2016
'ಸಾರ್ವಜನಿಕವಾಗಿ ಆರೆಸ್ಸೆಸ್ ನ ಹಿರಿಯರು ಅರ್ಧ ಚಡ್ಡಿ ಹಾಕಿಕೊಂಡು ಅಡ್ಡಾಡಲು ನಾಚಿಕೆಯಾಗುವುದಿಲ್ಲವೇ?' ಎಂದು ರಾಬ್ಡಿ ದೇವಿ ಪ್ರಶ್ನಿಸಿದ್ದರು. ಈ ಹೇಳಿಕೆಯನ್ನು ಆರೆಸ್ಸೆಸ್ ಹಾಗೂ ಭಾರತೀಯ ಜನತಾ ಪಕ್ಷದ ನಾಯಕರು ತೀವ್ರವಾಗಿ ಖಂಡಿಸಿದ್ದರು.
ರಾಜಸ್ಥಾನದ ಜೈಪುರ ಬಳಿಯ ನಾಗೌರ್ ನಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರತಿನಿಧಿಗಳ ನೀತಿ ನಿರ್ಧಾರಕ ಸಭೆಯಲ್ಲಿ (ಮಾ 13) ಈ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲಾಯಿತು. ಹೊಸ ಡ್ರೆಸ್ ಕೋಡ್ ಇದೇ ವಿಜಯದಶಮಿಯ ದಿನದಿಂದ ಜಾರಿಗೆ ಬರಲಿದೆ. [ಹೆಚ್ಚಿನ ಮಾಹಿತಿಗೆ ಇಲ್ಲಿ ಓದಿ]
(ಐಎಎನ್ಎಸ್)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications