ಆರೆಸ್ಸೆಸ್ ವಸ್ತ್ರ ಸಂಹಿತೆ ಬದಲಾಗಲು ರಾಬ್ಡಿ ದೇವಿ ಕಾರಣವಂತೆ!
ಪಾಟ್ನ, ಮಾರ್ಚ್ 14: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಗಣವೇಷ ಬದಲಾವಣೆಯಾಗಿರುವುದು ಎಲ್ಲರಿಗೂ ತಿಳಿದಿರಬಹುದು. ಖಾಕಿ ಚಡ್ಡಿ ಬದಲು ಪ್ಯಾಂಟ್ ಧರಿಸಲು ಸಂಘ ಪರಿವಾರದ ಪ್ರಮುಖ ನಿರ್ಧರಿಸಿದ್ದಾರೆ. ಈ ಬದಲಾವಣೆಗೆ ಆರ್ ಜೆಡಿ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಅವರ ಪತ್ನಿ ರಾಬ್ಡಿ ದೇವಿ ಕಾರಣವಂತೆ!.
ಆರೆಸ್ಸೆಸ್ ಡ್ರೆಸ್ ಕೋಡ್ ಬದಲಾವಣೆಯಾಗಲು ನನ್ನ ಪತ್ನಿ ರಾಬ್ಡಿ ದೇವಿ ಕಾರಣ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ ಅವರು ಸೋಮವಾರ ಘೋಷಿಸಿದ್ದಾರೆ.

ಆದರೆ, ಅವರು ಫುಲ್ ಪ್ಯಾಂಟಿಗೆ ಬದಲಾಗಿರಬಹುದು. ಅವರನ್ನು ಮತ್ತೆ ಹಾಫ್ ಪ್ಯಾಂಟಿಗೆ ಇಳಿಸುತ್ತೇನೆ ಎಂದು ಲಾಲೂ ಹೇಳಿದ್ದಾರೆ.
ಲಾಲೂ ಅವರ ಪತ್ನಿ ರಾಬ್ಡಿ ದೇವಿ ಅವರು ಎರಡು ತಿಂಗಳ ಹಿಂದೆ ಆರೆಸ್ಸೆಸ್ ನ ವಸ್ತ್ರ ಸಂಹಿತೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರಿಂದ ಮುಜುಗರಕ್ಕೀಡಾದ ಆರೆಸ್ಸೆಸ್ ಡ್ರೆಸ್ ಕೋಡ್ ಬದಲಾಯಿಸಿದೆಯಂತೆ.
राबड़ीदेवी जी के एक तर्कपूर्ण आक्रमक बयान ने मात्र 2 महीने में RSS को "हाफ पैंट" से "फुल पैंट" करने पर मजबूर कर दिया https://t.co/e9jkvwwekN
— Lalu Prasad Yadav (@laluprasadrjd) March 14, 2016
'ಸಾರ್ವಜನಿಕವಾಗಿ ಆರೆಸ್ಸೆಸ್ ನ ಹಿರಿಯರು ಅರ್ಧ ಚಡ್ಡಿ ಹಾಕಿಕೊಂಡು ಅಡ್ಡಾಡಲು ನಾಚಿಕೆಯಾಗುವುದಿಲ್ಲವೇ?' ಎಂದು ರಾಬ್ಡಿ ದೇವಿ ಪ್ರಶ್ನಿಸಿದ್ದರು. ಈ ಹೇಳಿಕೆಯನ್ನು ಆರೆಸ್ಸೆಸ್ ಹಾಗೂ ಭಾರತೀಯ ಜನತಾ ಪಕ್ಷದ ನಾಯಕರು ತೀವ್ರವಾಗಿ ಖಂಡಿಸಿದ್ದರು.
ರಾಜಸ್ಥಾನದ ಜೈಪುರ ಬಳಿಯ ನಾಗೌರ್ ನಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರತಿನಿಧಿಗಳ ನೀತಿ ನಿರ್ಧಾರಕ ಸಭೆಯಲ್ಲಿ (ಮಾ 13) ಈ ಬಗ್ಗೆ ಅಂತಿಮ ನಿರ್ಧಾರಕ್ಕೆ ಬರಲಾಯಿತು. ಹೊಸ ಡ್ರೆಸ್ ಕೋಡ್ ಇದೇ ವಿಜಯದಶಮಿಯ ದಿನದಿಂದ ಜಾರಿಗೆ ಬರಲಿದೆ. [ಹೆಚ್ಚಿನ ಮಾಹಿತಿಗೆ ಇಲ್ಲಿ ಓದಿ]
(ಐಎಎನ್ಎಸ್)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications