ಗಲಭೆ ಪೀಡಿತ ಮಂದಸೌರ್ ಗೆ ಆರ್ ಎಎಫ್ ರವಾನೆ
ಗಲಭೆ ಪೀಡಿತ ಮಧ್ಯಪ್ರದೇಶದ ಮಂದಸೌರ್ ನಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಕ್ಷಿಪ್ರ ಕಾರ್ಯಾಚರಣೆ ಪಡೆ ರವಾನೆ. ರೈತರ ಪ್ರತಿಭಟನೆಯಿಂದಾಗಿ ಹೈರಾಣಾಗಿರುವ ಮಂದಸೌರ್. ಜೂನ್ 7ರಂದು ನಡೆದ ಪೊಲೀಸ್ ಗೋಲಿಬಾರ್ ನಲ್ಲಿ ಐವರು ರೈತರು ಸಾವಿಗೀಡಾಗಿದ್ದರು.
ನವದೆಹಲಿ/ಮಂದಸೌರ್, ಜೂನ್ 8: ಗಲಭೆ ಪೀಡಿತ ಮಂದಸೌರ್ ಜಿಲ್ಲೆಯಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್ ಎಎಫ್) ನಿಯೋಜಿಸಲಾಗಿದೆ.
ಜೂ. 7ರಂದು ನಡೆದಿದ್ದ ರೈತರ ಪ್ರತಿಭಟನೆ ಹಿಂಸಾರೂಪಕ್ಕೆ ತಾಳಿದ್ದ ಹಿನ್ನೆಲೆಯಲ್ಲಿ ಪೊಲೀಸರು ಗೋಲೀಬಾರ್ ನಡೆಸಿದ್ದರು. ಆ ಗೋಲಿಬಾರ್ ನಲ್ಲಿ ಐವರು ರೈತರು ಮೃತಪಟ್ಟಿದ್ದರು.[ರಾಹುಲ್ ಗಾಂಧಿ ಮಂಡಸೌರ್ ಪ್ರವೇಶಕ್ಕೆ ಪೊಲೀಸ್ ನಕಾರ]

ಈ ಹಿನ್ನೆಲೆಯಲ್ಲಿ, ಅಲ್ಲಿನ ಪರಿಸ್ಥಿತಿ ಮತ್ತಷ್ಟು ಪ್ರಕ್ಷುಬ್ಧವಾಗಿದೆ. ಹಾಗಾಗಿ, ಅಲ್ಲಿನ ಪರಿಸ್ಥಿತಿಯನ್ನು ನಿಭಾಯಿಸಲು 100 ಸೈನಿಕರುಳ್ಳ ಆರ್ ಎಎಫ್, ಜಿಲ್ಲಾ ಕೇಂದ್ರಕ್ಕೆ ರವಾನಿಸಲಾಗಿದೆ. ಅಲ್ಲಿಂದ ಸೈನಿಕರು, ಗಲಭೆ ಪೀಡಿತವಾಗಿರುವ ಪಿಪ್ಲಿಯಾಮಂಡಿ ಪ್ರಾಂತ್ಯಕ್ಕೂ ಹೋಗಲಿದ್ದಾರೆ.
ಆರ್ ಎಎಫ್ ಜತೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಗಲಭೆ ಪೀಡಿತ ಸ್ಥಳದಲ್ಲಿ ಮೊಕ್ಕಾಂ ಹೂಡಿ, ಪರಿಸ್ಥಿತಿ ನಿಯಂತ್ರಣಕ್ಕೆ ಪ್ರಯತ್ನಿಸಲಿದ್ದಾರೆ.
ಗೋಲಿಬಾರ್ ನಡೆದ ಹಿನ್ನೆಲೆಯಲ್ಲಿ ಗುರುವಾರ ಮಂದಸೌರ್ ಜಿಲ್ಲೆಯ ಜಿಲ್ಲಾಧಿಕಾರಿ ಸ್ವತಂತ್ರ ಕುಮಾರ್ ಸಿಂಗ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಒ.ಪಿ. ತ್ರಿಪಾಠಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications