ರಫೇಲ್ ಯುದ್ಧ ವಿಮಾನ ಖರೀದಿ ಸಿಎಜಿ ವರದಿ ಮಂಗಳವಾರ ಸಂಸತ್ ಮುಂದೆ ಮಂಡನೆ
ನವದೆಹಲಿ, ಫೆಬ್ರವರಿ 11: ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಧಿಸಿದಂತೆ ಕಂಟ್ರೋಲರ್ ಅಂಡ್ ಆಡಿಟರ್ ಜನರಲ್ (ಸಿಎಜಿ) ಜನರಲ್ ತಮ್ಮ ವರದಿಯನ್ನು ಮಂಗಳವಾರದಂದು ಸಂಸತ್ ಮುಂದೆ ಮಂಡಿಸಲಿದ್ದಾರೆ. ಆದರೆ ಮೂಲಗಳ ಪ್ರಕಾರ, ಬೆಲೆಯ ವಿಚಾರವನ್ನು ಅದು ತಿಳಿಸುವುದಿಲ್ಲ. ಅಂದಹಾಗೆ ಕೇಂದ್ರ ಸರಕಾರವು ಖರೀದಿ ವಿಚಾರದಲ್ಲೇ ವಿರೋಧ ಪಕ್ಷಗಳಿಂದ ಭ್ರಷ್ಟಾಚಾರದ ಆರೋಪ ಎದುರಿಸುತ್ತಿದೆ.
ಸಿಎಜಿ ವರದಿಯನ್ನು ಅಧಿಕೃತವಾಗಿ ಕ್ಯಾಪಿಟಲ್ ಅಕ್ವಿಸಿಷನ್ಸ್ ಫಾರ್ ಏರ್ ಪೋರ್ಸ್ ಎಂದು ಕರೆಯಲಾಗುತ್ತದೆ. ಸದ್ಯಕ್ಕೆ ನಡೆಯುತ್ತಿರುವ ಸಂಸತ್ ಅಧಿವೇಶನ ಸಮಾಪ್ತಿಗೊಳ್ಳುವ ಒಂದು ದಿನಕ್ಕೆ ಮೊದಲು, ಲೋಕಸಭಾ ಚುನಾವಣೆ ಮುನ್ನ ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ಮಂಡಿಸಲಾಗುತ್ತಿದೆ.
ರಾಷ್ಟ್ರೀಯ ಭದ್ರತಾ ವಿಚಾರಕ್ಕೆ ಸಂಬಂಧಿಸಿರುವುದರಿಂದ ವಿಮಾನ ಖರೀದಿಯ ಮೊತ್ತ ತಿಳಿಸಲು ಸಾಧ್ಯವಿಲ್ಲ ಎಂದು ಆಡಿಟರ್ ಗೆ ರಕ್ಷಣಾ ಸಚಿವಾಲಯವು ತಿಳಿಸಿರುವುದಾಗಿ ಮೂಲಗಳು ಮಾಹಿತಿ ನೀಡಿವೆ. ಖರೀದಿ ಮೊತ್ತದ ಮಾಹಿತಿಯನ್ನು ವರದಿಯಿಂದ ಹೊರಗಿಡಲು ಮತ್ತು ಪರ್ಸಂಟೇಜ್ ಆಧಾರದಲ್ಲಿ ಲೆಕ್ಕ ಪರಿಶೋಧನೆ ಮಾಡಲು ಆಡಿಟರ್ ಒಪ್ಪಿದ್ದಾರೆ.

2007 ಹಾಗೂ 2015ರಲ್ಲಿ ರಫೇಲ್ ಯುದ್ಧ ವಿಮಾನದ ಬಿಡ್ ನ ವರದಿಯಲ್ಲಿ ಹೋಲಿಕೆ ಮಾಡಲಾಗಿದೆ. ಹೆಚ್ಚಿನ ಮೊತ್ತಕ್ಕೆ 36 ವಿಮಾನ ಖರೀದಿ ಮಾಡಲು ತೆಗೆದುಕೊಂಡ ನಿರ್ಧಾರ ಹಾಗೂ ಯುಪಿಎ ಸರಕಾರದ ಅವಧಿಯಲ್ಲಿ ಹಾರಾಟಕ್ಕೆ ಸಿದ್ಧವಾದ 18 ವಿಮಾನ 2007ರಲ್ಲಿ ಜಾಗತಿಕ ಟೆಂಡರ್ ಮೂಲಕ ಖರೀದಿ ಮಾಡಬೇಕು ಅಂದುಕೊಂಡಿದ್ದನ್ನು ಹೋಲಿಕೆ ಮಾಡಲಾಗಿದೆ.
ಮೂಲಗಳ ಪ್ರಕಾರ, ಸಿಎಜಿಯಿಂದ ಅಧಿಕೃತವಲ್ಲದ ಪತ್ರಿಕಾ ಹೇಳಿಕೆ ಮಂಗಳವಾರ ಬಿಡುಗಡೆ ಆಗಲಿದೆ. ಆರ್ಥಿಕ ಸಚಿವಾಲಯವು ಆಡಿಟ್ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡುವ ಬದಲಿಗೆ ವರದಿಯನ್ನು ವಿವರಿಸುವ ಪತ್ರಿಕಾ ಹೇಳಿಕೆ ಸಿಎಜಿ ಬಿಡುಗಡೆ ಮಾಡಲಿದೆ.
ರಫೇಲ್ ವ್ಯವಹಾರ ನಡೆದಾಗ ಆರ್ಥಿಕ ಕಾರ್ಯದರ್ಶಿ ಆಗಿದ್ದ ರಾಜೀವ್ ಮೆಹ್ರಿಷಿ ಸದ್ಯಕ್ಕೆ ಸಿಎಜಿ ಆಗಿದ್ದಾರೆ. ರಾಜೀವ್ ಅವರು ಬಿಜೆಪಿ ನೇತೃತ್ವದ ಎನ್ ಡಿಎ ಸರಕಾರವನ್ನು ರಕ್ಷಿಸುವ ಕೆಲಸ ಮಾಡಬಹುದು. ತಮ್ಮದೇ ವಿರುದ್ಧ ಸಿಎಜಿ ನಡೆದುಕೊಳ್ಳಲು ಹೇಗೆ ಸಾಧ್ಯ? ತನಿಖೆ ಮಾಡಲು ಹೇಗೆ ಸಾಧ್ಯ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ರಫೇಲ್ ಯುದ್ಧ ವಿಮಾನಕ್ಕೆ ಎಷ್ಟು ಮೊತ್ತ ನೀಡಲಾಗುತ್ತಿದೆ? ಎಷ್ಟಕ್ಕೆ ಫ್ರಾನ್ಸ್ ಸರಕಾರದ ಜತೆಗೆ ವ್ಯವಹಾರ ಆಗಿದೆ ಎಂದು ಬಹಿರಂಗ ಮಾಡಬೇಕು ಎಂಬುದು ಕಾಂಗ್ರೆಸ್ ನ ಆಗ್ರಹವಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications