ರಫೇಲ್ ಯುದ್ಧ ವಿಮಾನ ಹಗರಣ: ಜೆಪಿಸಿ ತನಿಖೆಗೆ ಆಗ್ರಹ
ನವದೆಹಲಿ, ಜುಲೈ 03: ರಫೇಲ್ ಯುದ್ಧ ವಿಮಾನ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಜೆಪಿಸಿ ತನಿಖೆಗೆ ಕಾಂಗ್ರೆಸ್ ಆಗ್ರಹಿಸಿದೆ.
ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದ್ದು, ರಫೇಲ್ ಫೈಟರ್ ಜೆಟ್ಗಳ ಖರೀದಿಯಲ್ಲಿ "ಭ್ರಷ್ಟಾಚಾರ" ದ ಬಗ್ಗೆ ಸತ್ಯವನ್ನು ಕಂಡುಹಿಡಿಯಲು ಪ್ರಕರಣದಲ್ಲಿ ಜಂಟಿ ಸಂಸದೀಯ ಸಮಿತಿ ತನಿಖೆಗೆ ಆದೇಶಿಸಬೇಕು.
ಇದು ಸತ್ಯಾಂಶ ಬಯಲಿಗೆಳೆಯಲು ಇರುವ ಏಕೈಕ ಮಾರ್ಗವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮುಂದೆ ಬಂದು ತನಿಖೆಗೆ ಆದೇಶಿಸಬೇಕು ಎಂದು ಕಾಂಗ್ರೆಸ್ ಶನಿವಾರ ಒತ್ತಾಯಿಸಿದೆ.

ಇದೇ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೇವಾಲಾ ಅವರು, ರಫೇಲ್ ಒಪ್ಪಂದದಲ್ಲಿನ ಭ್ರಷ್ಟಾಚಾರವು ಈಗ ಸ್ಪಷ್ಟವಾಗಿ ಹೊರಬಂದಿದೆ. ಫ್ರೆಂಚ್ ಸರ್ಕಾರ ತನಿಖೆಗೆ ಆದೇಶಿಸಿದೆ. ಈ ವಿಷಯವು ರಾಷ್ಟ್ರೀಯ ಭದ್ರತೆ ಮತ್ತು ಗುರುತಿನ ಬಗ್ಗೆ ವ್ಯವಹರಿಸುವುದರಿಂದ, ನ್ಯಾಯಯುತ ಮತ್ತು ಸ್ವತಂತ್ರ ಜೆಪಿಸಿ ತನಿಖೆ ಏಕೈಕ ಮಾರ್ಗವಾಗಿದೆ ಎಂದು ಹೇಳಿದ್ದಾರೆ.
ಅಂತೆಯೇ ಈ ಹಿಂದೆ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರು ಹಗರಣದ ಬಗ್ಗೆ ಧನಿ ಎತ್ತಿದ್ದರು. ಆದರೆ ಅವರ ಮಾತನ್ನು ನಿರ್ಲಕ್ಷಿಸಲಾಗಿತ್ತು. ಇದೀಗ ಸ್ವತಃ ಫ್ರಾನ್ಸ್ ಸರ್ಕಾರವೇ ಈ ಹಗರಣದ ತನಿಖೆ ನಡೆಸಲು ನ್ಯಾಯಾಧೀಶರನ್ನು ನೇಮಕ ಮಾಡಿದೆ. ರಕ್ಷಣಾ ವ್ಯವಹಾರದಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ತನಿಖೆಗೆ ಫ್ರೆಂಚ್ ಪಬ್ಲಿಕ್ ಪ್ರಾಸಿಕ್ಯೂಷನ್ ಸಂಸ್ಥೆ ಆದೇಶಿಸಿದೆ.
ಅಲ್ಲಿಗೆ ಭ್ರಷ್ಟಾಚಾರ ನಡೆದಿರುವುದು ಸಾಬೀತಾಗಿದೆ. ಈ ಒಪ್ಪಂದದಲ್ಲಿ ಭ್ರಷ್ಟಾಚಾರವಿದೆ ಎಂದು ಫ್ರೆಂಚ್ ಸರ್ಕಾರ ಒಪ್ಪಿಕೊಂಡಾಗ, ಹಗರಣದ ಮೂಲ ದೇಶದಲ್ಲಿ ಜೆಪಿಸಿ ತನಿಖೆ ಏಕೆ ನಡೆಸಬಾರದು? ಈ ವಿಷಯವು ಕಾಂಗ್ರೆಸ್ ವಿರುದ್ಧ ಬಿಜೆಪಿಯ ಬಗ್ಗೆ ಅಲ್ಲ, ಆದರೆ ಇದು ದೇಶದ ಭದ್ರತೆ ಮತ್ತು ಅತಿದೊಡ್ಡ ರಕ್ಷಣಾ ಒಪ್ಪಂದದಲ್ಲಿ ಭ್ರಷ್ಟಾಚಾರ ಕ್ಕೆ ಸಂಬಂಧಿಸಿದ ವಿಷಯವಾಗಿದೆ ಎಂದು ಸುರ್ಜೆವಾಲಾ ಹೇಳಿದರು.
ಅಂತೆಯೇ ಜೆಪಿಸಿ ತನಿಖೆಯು ಸಾಕ್ಷಿಗಳನ್ನು ಸಂಗ್ರಹಿಸಲು ಸಾಧ್ಯವಾಗುತ್ತದೆ ಮತ್ತು ಸುಪ್ರೀಂ ಕೋರ್ಟ್ ಅಥವಾ ಕೇಂದ್ರ ವಿಜಿಲೆನ್ಸ್ ಆಯೋಗವು ಯಾರೂ ನೋಡಲಾಗದ ಎಲ್ಲಾ ಸರ್ಕಾರಿ ಕಡತಗಳನ್ನೂ ಪರೀಕ್ಷಿಸಹುದಾಗಿದೆ. ಇದು ತನಿಖಾ ಪ್ರಶ್ನೆಗಳನ್ನು ಕೇಳಲು ಸಾಧ್ಯವಾಗುತ್ತದೆ, ಸುಳ್ಳು ಹೇಳಿದ್ದಕ್ಕಾಗಿ ಯಾರನ್ನಾದರೂ ಶಿಕ್ಷಿಸಲು ಸಾಧ್ಯವಾಗುತ್ತದೆ ಮತ್ತು ಪ್ರಧಾನಿ, ರಕ್ಷಣಾ ಮಂತ್ರಿ ಅಥವಾ ರಕ್ಷಣಾ ಸಚಿವಾಲಯದ ಅಧಿಕಾರಿಗಳನ್ನಲ್ಲದೇ ಮತ್ತು ಬೇರೆಯವರನ್ನು ತನಿಖೆಗೊಳಪಡಿಸಲು ಸಾಧ್ಯವಾಗುತ್ತದೆ.
ರಫೇಲ್ ಹಗರಣದ ಬಗ್ಗೆ ಸಂಪೂರ್ಣ ಜೆಪಿಸಿ ತನಿಖೆಗೆ ಸತ್ಯ ಏನು ಎಂಬುದನ್ನು ಬಯಲಿಗೆಳೆಯುತ್ತದೆ. ಫ್ರಾನ್ಸ್ ನಂತೆ ಪ್ರಧಾನ ಮಂತ್ರಿಯೂ ಈಗ ರಾಷ್ಟ್ರಕ್ಕೆ ಉತ್ತರಿಸಬೇಕಿದೆ.
ಇದು ರಾಷ್ಟ್ರೀಯ ಹಿತಾಸಕ್ತಿಯ ವಿಷಯವಾಗಿದೆ ಮತ್ತು ರಕ್ಷಣಾ ವ್ಯವಹಾರಗಳಲ್ಲಿ ಭ್ರಷ್ಟಾಚಾರದಲ್ಲಿ ತೊಡಗುವ ಮೂಲಕ ತಮ್ಮ ಜೇಬುಗಳನ್ನು ತುಂಬುಸಿಕೊಳ್ಳುತ್ತಿರುವವರ ವಿರುದ್ಧವಾಗಿದೆ ಎಂದು ಅವರು ಹೇಳಿದರು.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications