ರಫೇಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ಆರೋಪ: 2 ವಾರಗಳಲ್ಲಿ ಹೊಸ ಅರ್ಜಿ ವಿಚಾರಣೆ
ನವದೆಹಲಿ, ಏಪ್ರಿಲ್ 12: ರಫೇಲ್ ಯುದ್ಧ ವಿಮಾನ ಖರೀದಿಗಾಗಿ ಫ್ರಾನ್ಸ್ ಜತೆ ಮಾಡಿಕೊಂಡ ಒಪ್ಪಂದದ ಕುರಿತು ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಕೋರಿ ಹೊಸ ಅರ್ಜಿಯೊಂದು ದಾಖಲಾಗಿದ್ದು, ಅದನ್ನು ಎರಡು ವಾರಗಳಲ್ಲಿ ಸುಪ್ರೀಂಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
2016ರಲ್ಲಿ ಭಾರತ ಮತ್ತು ಫ್ರಾನ್ಸ್ ನಡುವೆ ನಡೆದ ರಫೇಲ್ ಹೊಸ ಒಪ್ಪಂದದಲ್ಲಿ ಡಸಾಲ್ಟ್ ಏವಿಯೇಷನ್ ಸಂಸ್ಥೆಯು ಭಾರತೀಯ ಮಧ್ಯವರ್ತಿಯೊಬ್ಬರಿಗೆ 1.1 ಮಿಲಿಯನ್ ಯುರೋ ಲಂಚ ನೀಡಿದೆ ಎಂದು ಫ್ರಾನ್ಸ್ನ ಮಾಧ್ಯಮ ಸಂಸ್ಥೆಯೊಂದು ವರದಿ ಪ್ರಕಟಿಸಿತ್ತು. ಈ ವರದಿ ತೀವ್ರ ಕೋಲಾಹಲ ಸೃಷ್ಟಿಸಿತ್ತು. ಈ ಸಂಬಂಧ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.
ವಕೀಲ ಮನೋಹರ ಲಾಲ್ ಶರ್ಮಾ ಹೊಸ ಅರ್ಜಿ ಸಲ್ಲಿಸಿದ್ದಾರೆ. ರಫೇಲ್ ಒಪ್ಪಂದದಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ಈ ಹಿಂದೆಯೂ ಮನೋಹರ್ ಲಾಲ್ ಶರ್ಮಾ ಅರ್ಜಿ ಸಲ್ಲಿಸಿದ್ದರು. ಆದರೆ 2018ರ ಡಿಸೆಂಬರ್ನಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. 2019ರ ನವೆಂಬರ್ನಲ್ಲಿ ಪರಾಮರ್ಶನ ಅರ್ಜಿ ಕೂಡ ತಿರಸ್ಕೃತಗೊಂಡಿತ್ತು.

ಆದರೆ ಫ್ರಾನ್ಸ್ನ ಮಾಧ್ಯಮವೊಂದು ಇತ್ತೀಚೆಗೆ ಒಪ್ಪಂದದಲ್ಲಿ ಅವ್ಯವಹಾರ ನಡೆದಿದೆ ಎಂದು ವರದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಅವರು ಹೊಸದಾಗಿ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಈ ಆರೋಪಗಳನ್ನು ಡಸಾಲ್ಟ್ ಏವಿಯೇಷನ್ ಮತ್ತು ಬಿಜೆಪಿ ನಿರಾಕರಿಸಿವೆ.
ದೇಶದ ಭ್ರಷ್ಟಾಚಾರ ನಿಗ್ರಹ ಸಂಸ್ಥೆಯ ತನಿಖೆಯನ್ನು ಉಲ್ಲೇಖಿಸಿ, ಡಸಾಲ್ಟ್ ಕಂಪೆನಿಯು ಭಾರತದ ಡೆಫ್ಸಿಸ್ ಸಲ್ಯೂಷನ್ಸ್ ಎಂಬ ಕಂಪೆನಿಗೆ 50 ಮಾದರಿ ವಿಮಾನಗಳನ್ನು ತಯಾರಿಸುವ ಸಲುವಾಗಿ ಉಡುಗೊರೆಯಾಗಿ 1.1 ಮಿಲಿಯನ್ ಯುರೋ ನೀಡಿರುವುದಾಗಿ ಫ್ರಾನ್ಸ್ನ 'ಮೀಡಿಯಾಪಾರ್ಟ್' ಪತ್ರಿಕೆ ವರದಿ ಮಾಡಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications