ವಾಯುಪಡೆಗೆ ರಫೇಲ್ ಸೇರ್ಪಡೆ; ಭಾರತಕ್ಕೆ ಬಂದ ಫ್ರಾನ್ಸ್ ಸಚಿವೆ
ನವದೆಹಲಿ, ಸೆಪ್ಟೆಂಬರ್ 10: ರಫೇಲ್ ಯುದ್ಧ ವಿಮಾನಗಳು ಇಂದು ಅಧಿಕೃತವಾಗಿ ಭಾರತದ ವಾಯುಪಡೆಗೆ ಸೇರ್ಪಡೆಗೊಳ್ಳಲಿವೆ. ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಈ ಕಾರ್ಯಕ್ರಮಕ್ಕಾಗಿ ನವದೆಹಲಿಗೆ ಆಗಮಿಸಿದ್ದಾರೆ.
ಅಂಬಾಲ ವಾಯುನೆಲೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 5 ರಫೇಲ್ ಯುದ್ಧ ವಿಮಾನಗಳನ್ನು ವಾಯುಪಡೆಗೆ ಸೇರಿಸಿಕೊಳ್ಳಲಾಗುತ್ತದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮಲ್ಲಿ ಪಾಲ್ಗೊಳ್ಳಲಿದ್ದಾರೆ.

ಭಾರತ ಫ್ರಾನ್ಸ್ನಿಂದ 36 ರಫೇಲ್ ಯುದ್ಧ ವಿಮಾನಗಳನ್ನು ಖರೀದಿ ಮಾಡಲಿದೆ. ಇವುಗಳಲ್ಲಿ 10 ವಿಮಾನಗಳನ್ನು ಡಾಸೋ ಏವಿಯೇಷನ್ ಕಂಪನಿ ಭಾರತಕ್ಕೆ ನೀಡಿದೆ. ಇವುಗಳಲ್ಲಿ 5 ವಿಮಾನಗಳು ಜುಲೈ 29ರಂದು ಭಾರತಕ್ಕೆ ಬಂದಿವೆ.
ಸರ್ವಧರ್ಮ ಪೂಜೆ : ಅಂಬಾಲ ವಾಯುನೆಲೆಯಲ್ಲಿ ರಫೇಲ್ ವಾಯುಪಡೆ ಸೇರ್ಪಡೆ ಕಾರ್ಯಕ್ರಮದಲ್ಲಿ ಸರ್ವಧರ್ಮ ಪೂಜೆಯನ್ನು ಮಾಡಲಾಗುತ್ತದೆ. ಫ್ರಾನ್ಸ್ ಅಧಿಕಾರಿಗಳ ಜೊತೆ ಬಂದಿರುವ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ವಾಯುನೆಲೆಗೆ ಬರುತ್ತಿದ್ದಂತೆ ಗೌರವ ವಂದನೆ ಸಲ್ಲಿಸಲಾಗುತ್ತದೆ.
ಈಗ ಆಗಿರುವ ಒಪ್ಪಂದದ ಜೊತೆಗೆ ಇನ್ನೂ 36 ರಫೇಲ್ ಯುದ್ಧ ವಿಮಾನಗಳನ್ನು ಭಾರತ ಫ್ರಾನ್ಸ್ನಿಂದ ಖರೀದಿ ಮಾಡುವ ನಿರೀಕ್ಷೆ ಇದೆ. ಈ ಕುರಿತ ಮಾತುಕತೆ ಇಂದು ವಿಮಾನಗಳ ಸೇರ್ಪಡೆ ಕಾರ್ಯಕ್ರಮದ ಬಳಿಕ ನಡೆಯಲಿದೆ.
Minister of the Armed Forces of France Florence Parly receives a ceremonial Guard of Honour on her arrival at Delhi.
— ANI (@ANI) September 10, 2020
She will attend the Rafale induction ceremony at Ambala. pic.twitter.com/6XHwxXhbZV
ಭಾರತಕ್ಕೆ ಈಗಾಗಲೇ 5 ರಫೇಲ್ ಯುದ್ಧ ವಿಮಾನಗಳು ಆಗಮಿಸಿವೆ. ನವೆಂಬರ್ ತಿಂಗಳಿನಲ್ಲಿ 5 ರಿಂದ 10 ವಿಮಾನಗಳು ಭಾರತಕ್ಕೆ ಆಗಮಿಸುವ ನಿರೀಕ್ಷೆ ಇದೆ. 5 ವಿಮಾನಗಳನ್ನು ಫ್ರಾನ್ಸ್ನಲ್ಲಿ ಭಾರತೀಯ ವಾಯುಪಡೆ ಪೈಲೆಟ್ಗಳ ತರಬೇತಿಗಾಗಿ ಇಟ್ಟುಕೊಳ್ಳಲಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications