ಋಷಿಕೇಶದಲ್ಲಿ ರಾಫ್ಟಿಂಗ್ ಸ್ಥಗಿತ: ಅಪಾಯದಮಟ್ಟ ಮೀರಿದ ಗಂಗಾನದಿ
ಋಷಿಕೇಶ ಜೂನ್ 26: ಭಾರೀ ಮಳೆಯಿಂದಾಗಿ ಹರಿದ್ವಾರದಲ್ಲಿ ಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ ಅಧಿಕಾರಿಗಳು ರಾಫ್ಟಿಂಗ್ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಎಲ್ಲಾ ಪ್ರವಾಹ ನಿಯಂತ್ರಣ ಚೆಕ್ ಪೋಸ್ಟ್ಗಳು ಮತ್ತು ವಿಪತ್ತು ನಿರ್ವಹಣಾ ತಂಡಗಳು ಅಲರ್ಟ್ ಆಗಿದ್ದು, ಜಿಲ್ಲಾಡಳಿತದ ಅಧಿಕಾರಿಗಳು ರಾತ್ರಿಯಿಡೀ ಪರಿಸ್ಥಿತಿಯ ಮೇಲೆ ನಿಗಾ ಇಡುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಋಷಿಕೇಶ ಸಮೀಪದ ಪೌರಿ, ತೆಹ್ರಿ ಮತ್ತು ಡೆಹ್ರಾಡೂನ್ ಜಿಲ್ಲೆಗಳ ಗಂಗಾನದಿಯಲ್ಲಿ ಮುಂದಿನ ನಿರ್ದೇಶನದವರೆಗೆ ರಾಫ್ಟಿಂಗ್ ಅನ್ನು ಬಂದ್ ಮಾಡಲಾಗಿದೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ನರೇಂದ್ರನಗರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ದೇವೇಂದ್ರ ನೇಗಿ ಅವರು ಗರ್ವಾಲ್ ವಿಭಾಗದಲ್ಲಿ ನಿರಂತರ ಮಳೆಯ ಕಾರಣ ರಾಫ್ಟಿಂಗ್ ಮುಂದುವರಿಸುವುದು ಅಪಾಯಕಾರಿ, ಗಂಗಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರಿವರ್ ರಾಫ್ಟಿಂಗ್ ಮತ್ತು ಸಂಬಂಧಿತ ಸಾಹಸಗಳನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.
ಭೀಮಗೋಡ ಬ್ಯಾರೇಜ್ ನದಿ ನೀರಿನ ಮಟ್ಟದ ಅಂಕಿಅಂಶಗಳ ಪ್ರಕಾರ, ಸೋಮವಾರ ಬೆಳಿಗ್ಗೆ 291.80 ಮೀಟರ್ಗಳಷ್ಟು ಗಂಗಾನದಿ ಹರಿಯುತ್ತಿದೆ. ಇದು ಎಚ್ಚರಿಕೆಯ ಮಟ್ಟಕ್ಕಿಂತ (293 ಮೀ) ಕೇವಲ 1.20 ಮೀ ಕಡಿಮೆಯಾಗಿದೆ.
ಶನಿವಾರ ತಡರಾತ್ರಿಯಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಹರಿದ್ವಾರ ನಗರದ ಕೆಲವು ಭಾಗಗಳು ಜಲಾವೃತಗೊಂಡಿವೆ. ನಗರದ ಜ್ವಾಲಾಪುರ, ಕಂಖಾಲ್, ರಾಣಿಪುರ ಮೌದ್, ರೋಶನಾಬಾದ್ ಮುಂತಾದ ಪ್ರದೇಶಗಳು ಹಾನಿಗೀಡಾಗಿವೆ. ಮಳೆಯಿಂದ ಆಗಿರುವ ಹಾನಿಯ ಬಗ್ಗೆ ಜಿಲ್ಲಾಡಳಿತ ಪರಿಶೀಲನೆ ನಡೆಸುತ್ತಿದೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್ಡಿಎಂ) ಪುರಾನ್ ಸಿಂಗ್ ರಾಣಾ ಹೇಳಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ಜಿಲ್ಲಾ ವಿಪತ್ತು ನಿರ್ವಹಣಾ ತಂಡಕ್ಕೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದರು.
''ಇಂದು ಬೆಳಿಗ್ಗೆಯಿಂದ ಭಾರೀ ಮಳೆಯಾಗಿದೆ. ಇದರಿಂದ ಹಲವೆಡೆ ಜಲಾವೃತವಾಗಿದೆ. ಒಳಚರಂಡಿ ವ್ಯವಸ್ಥೆಯನ್ನು ಸ್ವಚ್ಛಗೊಳಿಸದಿರುವುದು ಇದಕ್ಕೆ ಕಾರಣ. ಅಂಗಡಿಯೊಂದರ ಗಡಿ ಗೋಡೆ ಒಡೆದು ಬಿದ್ದಿದೆ. ನಾವು ಹರಿದ್ವಾರ ನಗರದ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದೇವೆ ಮತ್ತು ಕೆಲವರ ಮನೆಗಳಿಗೆ ನೀರು ನುಗ್ಗಿದೆ. ನಾವು ಅವರಿಗೆ ಅನಪೇಕ್ಷಿತ ಪರಿಹಾರವನ್ನು ಒದಗಿಸುತ್ತೇವೆ. ಜಿಲ್ಲಾ ವಿಪತ್ತು ನಿರ್ವಹಣಾ ತಂಡ ಎಚ್ಚರಿಕೆ ನೀಡಿದೆ. ಹಾನಿಯನ್ನು ಅಂದಾಜಿಸಲಾಗುತ್ತಿದೆ' ಎಂದು ಎಸ್ಡಿಎಂ ತಿಳಿಸಿದೆ.
ಈ ಬಗ್ಗೆ ಮಾತನಾಡಿದ ನಿವಾಸಿಗಳು, ಮಳೆಯಿಂದಾಗಿ ಗಂಗಾ ನದಿ ಉಕ್ಕಿ ಹರಿಯುತ್ತಿದೆ ಎಂದು ಮನೆ ಕುಸಿದು ಬಿದ್ದ ನಿವಾಸಿಗಳಲ್ಲಿ ಒಬ್ಬರಾದ ಕುಲಭೂಷಣ್ ಭಾರದ್ವಾಜ್ ಬೇಸರ ವ್ಯಕ್ತಪಡಿಸಿದರು. ಚರಂಡಿ ಕಟ್ಟಿಕೊಂಡಿದ್ದರಿಂದ ನೀರು ನಿಂತಿತ್ತು. ನಮ್ಮ ಮನೆಗಳಿಗೆ ನೀರು ನುಗ್ಗಿದೆ. ನಾವು ನಮ್ಮ ಪ್ರವೇಶದ್ವಾರದಲ್ಲಿ ನೀರು ಬಾರದಂತೆ ಹಾಸಿಗೆಗಳನ್ನು ಹಾಕಿದ್ದೇವೆ. ಆದರೆ ಇದು ನಮ್ಮ ಮನೆಗಳಿಗೆ ನೀರು ಪ್ರವೇಶಿಸುವುದನ್ನು ತಡೆಯಲು ಸಾಧ್ಯವಾಗಲಿಲ್ಲ ಎಂದರು.
ಜಲಾವೃತ ಕುರಿತು ಮಾತನಾಡಿದ ಭಾರದ್ವಾಜ್, "ಬೆಳಿಗ್ಗೆ 6 ರಿಂದ 10 ರವರೆಗೆ ಎಲ್ಲಾ ಜನರು ತಮ್ಮ ಮನೆಗಳಿಂದ ನೀರು ತೆಗೆಯುವಲ್ಲಿ ತೊಡಗಿದ್ದರು. ಈಗ ನೀರಿನ ಮಟ್ಟ ಕುಸಿದಿರುವುದರಿಂದ ಜನರು ನಿರಾಳರಾಗಿದ್ದಾರೆ'' ಎಂದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications