Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ
Raghav Chadha: ಸಂಸದ ರಾಘವ್ ಚಡ್ಡಾ ಮೇಲೆ ಅವರದೇ ಪಕ್ಷವಾದ ಆಮ್ ಆದ್ಮಿ ಪಕ್ಷ (ಎಎಪಿ)ದ ಕೆಂಗಣ್ಣು ಬಿದ್ದಂತಿದೆ. ದೇಶದ ಬಡವರು ಹಾಗೂ ಮಧ್ಯಮ ವರ್ಗದವರ ಸಮಸ್ಯೆಗಳನ್ನು ಲೋಕಸಭೆಯಲ್ಲಿ ಚರ್ಚೆ ಮಾಡಿ, ಆ ಸಮಸ್ಯೆಗಳಿಗೆ ತಾರ್ಕಿಕ ಅಂತ್ಯವನ್ನು ಸಹ ಕಾಣಿಸುತ್ತಿದ್ದ ಸಂಸದ ರಾಘವ್ ಚಡ್ಡಾ ಅವರ ಅಧಿಕಾರವನ್ನು ಕಸಿದುಕೊಳ್ಳಲಾಗಿದೆ. ಇದು ಅವರ ಅಭಿಮಾನಿಗಳಲ್ಲಿ ಹಾಗೂ ದೇಶದಾದ್ಯಂತ ಇವರ ರಾಜಕೀಯ ಕಾರ್ಯವೈಖರಿಯನ್ನು ಮೆಚ್ಚಿಕೊಂಡವರಿಗೆ ಭಾರೀ ನಿರಾಸೆಯನ್ನುಂಟು ಮಾಡಿದೆ.
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (ಎಎಪಿ)ವು ಸಂಸದ ರಾಘವ್ ಚಡ್ಡಾ ಅವರಿಗೆ ದೊಡ್ಡ ಶಾಕ್ ನೀಡಿದೆ. ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕ ರಾಘವ್ ಚಡ್ಡಾ ಅವರನ್ನು ತೆಗೆದುಹಾಕಲಾಗಿದ್ದು, ಈ ಸ್ಥಾನಕ್ಕೆ ಪಂಜಾಬ್ ಸಂಸದ ಅಶೋಕ್ ಮಿತ್ತಲ್ ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.

ಸಂಸತ್ತಿನ ಮೇಲ್ಮನೆಯಲ್ಲಿ / ರಾಜ್ಯಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಉಪ ನಾಯಕರಾಗಿ ಚಾಡ್ಡಾ ಅವರ ಸ್ಥಾನಕ್ಕೆ ನೇಮಕ ಮಾಡಲಾಗಿರುವ ಮಿತ್ತಲ್ ಅವರು ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದಾರೆ. ಎಎಪಿ ಸಂಸದ ಸಂಜಯ್ ಸಿಂಗ್ ಸದನದಲ್ಲಿ ಪಕ್ಷದ ನಾಯಕರಾಗಿದ್ದಾರೆ. ಎಎಪಿ ಈಗ ರಾಜ್ಯಸಭೆಯಲ್ಲಿ 10 ಸದಸ್ಯರನ್ನು ಹೊಂದಿದೆ. ಪಂಜಾಬ್ನಿಂದ ಏಳು ಮತ್ತು ದೆಹಲಿಯಿಂದ ಮೂವರು ಇದರಲ್ಲಿ ಇದ್ದಾರೆ. ಬಿಜೆಪಿ, ಕಾಂಗ್ರೆಸ್ ಮತ್ತು ತೃಣಮೂಲ ಕಾಂಗ್ರೆಸ್ ನಂತರ ಪಕ್ಷವು ಸದನದಲ್ಲಿ ನಾಲ್ಕನೇ ಅತಿದೊಡ್ಡ ಸದಸ್ಯರನ್ನು ಹೊಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಸಂಸದ ರಾಘವ್ ಚಡ್ಡಾ ಅವರು ದೇಶದಾದ್ಯಂತ ಗಮನ ಸೆಳೆಯುವ ಪ್ರಶ್ನೆಗಳನ್ನು ಕೇಳುತ್ತಿದ್ದರು.
ಇನ್ನು ಸಂಸದ ರಾಘವ್ ಚಡ್ಡಾ ಅವರಿಗೆ ನೀಡಲಾಗಿದ್ದ ಪ್ರಮುಖ ಜವಾಬ್ದಾರಿಯನ್ನು ಆಮ್ ಆದ್ಮಿ ಪಕ್ಷವು ಹಿಂದಕ್ಕೆ ತೆಗೆದುಕೊಂಡಿರುವುದು ಹಲವು ಕಾರಣಗಳಿಗೆ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಸಂಸದ ರಾಘವ್ ಚಡ್ಡಾ ಅವರು ಬಿಜೆಪಿಗೆ ಸೇರ್ಪಡೆ ಆಗುವ ಸಾಧ್ಯತೆ ಇದೆ ಎಂದೂ ಹೇಳುತ್ತಿದ್ದಾರೆ. ಎಎಪಿಯ ಪ್ರಮುಖ ನಾಯಕ ಮತ್ತು ಕೇಜ್ರಿವಾಲ್ ಅವರ ಆಂತರಿಕ ವಲಯದಲ್ಲಿ ಚಡ್ಡಾ ಅವರು ಗುರುತಿಸಿಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ಅರವಿಂದ್ ಕ್ರೇಜಿವಾಲ್ ಅಥವಾ ಆಮ್ ಆದ್ಮಿ ಪಕ್ಷದ ಪರವಾಗಿ ಮಾತನಾಡಿದ್ದು ಅಥವಾ ಪ್ರಚಾರ ಮಾಡಿದ್ದು ಸಹ ಕಡಿಮೆಯೇ ಆಗಿತ್ತು.
ಮೂವತ್ತೇಳು ವರ್ಷದ ರಾಘವ್ ಚಡ್ಡಾ ಅವರು, ಆಮ್ ಆದ್ಮಿ ಪಕ್ಷ ಸ್ಥಾಪನೆಯಾದಾಗಿನಿಂದಲೂ ಪಕ್ಷದ ಭಾಗವಾಗಿದ್ದಾರೆ. ದೆಹಲಿಯ ಮಾಡರ್ನ್ ಶಾಲೆಯ ವಿದ್ಯಾರ್ಥಿ ಆಗಿರುವ ಅವರು ಚಾರ್ಟರ್ಡ್ ಅಕೌಂಟೆಂಟ್. ಭ್ರಷ್ಟಾಚಾರ ವಿರೋಧಿ ಭಾರತ ಚಳವಳಿಯ ಕೊನೆಯ ಹಂತದಲ್ಲಿ ಕೇಜ್ರಿವಾಲ್ ಮತ್ತು ಇತರರು ಪಕ್ಷವನ್ನು ಪ್ರಾರಂಭಿಸಬೇಕೆ ಅಥವಾ ಬೇಡವೇ ಎಂಬ ಬಗ್ಗೆ ಗಂಭೀರವಾದ ಚರ್ಚೆ ಮಾಡುವ ಸಂದರ್ಭದಲ್ಲಿ ಚಡ್ಡಾ ಅವರು ಕೇಜ್ರಿವಾಲ್ ಅವರನ್ನು ಭೇಟಿಯಾಗಿದ್ದರು. ನಂತರ 23 ನೇ ವಯಸ್ಸಿನಲ್ಲಿ, ಎಎಪಿ ರಚನೆಯಾದಾಗ ಚಡ್ಡಾ ಅವರು ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
Raghav Chadha: ಬಿಜೆಪಿ ಸೇರಲಿದ್ದಾರೆಯೇ ರಾಘವ್ ಚಡ್ಡಾ
ಇನ್ನು ಕಳೆದ ಕೆಲವು ದಿನಗಳಿಂದಲೂ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು ಬಿಜೆಪಿ ಸೇರಲಿದ್ದಾರೆ ಎನ್ನುವ ಚರ್ಚೆಯು ಜೋರಾಗಿದೆ. ಆಮ್ ಆದ್ಮಿ ಪಕ್ಷದಿಂದ ಕಳೆದ ಕೆಲವು ದಿನಗಳಿಂದ ಅವರು ಅಂತರ ಕಾಯ್ದುಕೊಳ್ಳುತ್ತಿದ್ದಾರೆ ಎನ್ನುವ ಚರ್ಚೆಯು ಸಹ ಜೋರಾಗಿತ್ತು. ಅಲ್ಲದೆ ಆಮ್ ಆದ್ಮಿ ಪಕ್ಷದಿಂದ ಅವರ ಹೆಸರು ಮಾತ್ರ ಮುಂಚೂಣಿಯಲ್ಲಿರುವುದು ಹಿರಿಯ ನಾಯಕರ ಕಣ್ಣು ಕೆಂಪಗಾಗಿಸಿದೆ ಎನ್ನುವ ಮಾತೂ ಇದೆ. ಆದರೆ ಈ ಬಗ್ಗೆ ರಾಘವ್ ಚಡ್ಡಾ ಅವರು ಇನ್ನಷ್ಟೇ ಸ್ಪಷ್ಟವಾದ ಮಾಹಿತಿ ಹಂಚಿಕೊಳ್ಳಬೇಕಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications