ರಾಹುಲ್ಗೆ ಪ್ರಣಬ್ ತಿಲಕ, ಸಿದ್ದರಾಮಯ್ಯ ಅಪ್ಪುಗೆಯ ಪುಳಕ!
Recommended Video

ನವದೆಹಲಿ, ಡಿಸೆಂಬರ್ 4: ಕಾಂಗ್ರೆಸ್ ಪಾಲಿನ 'ಡಾರ್ಲಿಂಗ್' ರಾಹುಲ್ ಗಾಂಧಿ ಎಂದು ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರು ಸೋಮವಾರ ಬಣ್ಣಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಆಗುವ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಬೆನ್ನಿಗೆ ಮನಮೋಹನ್ ಸಿಂಗ್, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಪ್ರಮುಖ ನಾಯಕರು ನಿಂತಿದ್ದಾರೆ.
ಇದು ಅದ್ಭುತವಾದ ದಿನ. ಕಾಂಗ್ರೆಸ್ ನ ಪುರುಷರು- ಮಹಿಳೆಯರ ಪಾಲಿನ ಅಚ್ಚುಮೆಚ್ಚಾದ ರಾಹುಲ್ ಗಾಂಧಿ ಅವರ ದೇಶ ಹಾಗೂ ಕಾಂಗ್ರೆಸ್ ಬಗೆಗಿನ ಪ್ರೀತಿ ಕಡೆಗೆ ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ ಎಂದು ಮನಮೋಹನ್ ಸಿಂಗ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ಹೆಸರನ್ನು ಸೂಚಿಸಬೇಕಾದ ನಾಲ್ವರ ಪೈಕಿ ಮನಮೋಹನ್ ಸಿಂಗ್ ಕೂಡ ಒಬ್ಬರು. ಮುಖ್ಯ ಸೂಚಕರಾಗಿ ಹಾಲಿ ಅಧ್ಯಕ್ಷೆಯಾದ ಸೋನಿಯಾ ಗಾಂಧಿ ಇರುತ್ತಾರೆ.
"ಕಳೆದ ಹತ್ತೊಂಬತ್ತು ವರ್ಷದಿಂದ ಸೋನಿಯಾ ಗಾಂಧಿ ಸೇವೆ ಸಲ್ಲಿಸಿದ್ದಾರೆ. ಇದೀಗ ಪಕ್ಷದ ಪಾಲಿಗೆ ಹೊಸ ಅಧ್ಯಾಯ ಆರಂಭವಾಗಿದೆ. ಪಕ್ಷವನ್ನು ಈ ವರೆಗೆ ಸಾಗಿಬಂದಿರುವ ಮೇಲ್ಪಂಕ್ತಿಯಲ್ಲೇ ರಾಹುಲ್ ಗಾಂಧಿ ಕರೆದೊಯ್ಯುತ್ತಾರೆ" ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ.
ಇನ್ನು ನಾಮಪತ್ರ ಸಲ್ಲಿಸುವ ಮುನ್ನ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರಾಹುಲ್ ಗಾಂಧಿ ಹಣೆಗೆ ಶುಭಸೂಚಕವಾಗಿ ತಿಲಕ ಇಟ್ಟು ಆಶೀರ್ವಾದ ಮಾಡಿರುವುದು ಭಾರೀ ಪ್ರಶಂಸೆಗೆ ಪಾತ್ರವಾಗಿದೆ.

ಮನಮೋಹನ್ ಸಿಂಗ್, ಪ್ರಣವ್ ಮುಖರ್ಜಿಗೆ ಕರೆ
ಸೋಮವಾರದಂದು ತಮ್ಮ ನಾಮಪತ್ರ ಸಲ್ಲಿಸುವ ಮುನ್ನ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರಿಗೆ ರಾಹುಲ್ ಗಾಂಧಿ ಕರೆ ಮಾಡಿದ್ದರು. ಇನ್ನೇನು ಅಧಿಕೃತವಾಗಿ ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರಾಗಿ ಘೋಷಣೆ ಮಾಡುವುದೊಂದು ಬಾಕಿ ಇದೆ. ಪಕ್ಷದಲ್ಲಿ ಬೇರೆ ಯಾರೂ ರಾಹುಲ್ ವಿರುದ್ಧ ಸ್ಪರ್ಧೆ ಮಾಡುವುದಿದ್ದರೆ ನಾಮಪತ್ರ ಸಲ್ಲಿಸಲು ಡಿಸೆಂಬರ್ ನಾಲ್ಕು ಕೊನೆ ದಿನವಾಗಿದೆ.

ರಾಹುಲ್ ಉತ್ತಮ ಪ್ರಧಾನಿ ಆಗಬಲ್ಲರು
ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಶೀಲಾ ದೀಕ್ಷಿತ್ ಮತ್ತು ಮೊಹ್ಸೀನಾ ಕಿದ್ವಾಯಿ ಅವರಂಥ ಹಿರಿಯ ಮುಖಂಡರನ್ನು ರಾಹುಲ್ ಗಾಂಧಿ ಅವರು ಆಲಂಗಿಸಿದರು. ಶೀಲಾ ದೀಕ್ಷಿತ್ ಕೂಡ ಅನುಮೋದಕರಲ್ಲಿ ಒಬ್ಬರಾಗಿದ್ದಾರೆ. ಇನ್ನು ಪಂಜಾಬ್ ನ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಆರಂಭದಲ್ಲಿ ಸೋನಿಯಾ ಗಾಂಧಿ ಅವರ ಸ್ಥಾನಕ್ಕೆ ರಾಹುಲ್ ಬರುವುದರ ಬಗ್ಗೆ ಸಣ್ಣ ಮಟ್ಟಿಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಈಗ, ರಾಹುಲ್ ಉತ್ತಮ ಪ್ರಧಾನ ಮಂತ್ರಿ ಆಗಬಲ್ಲರು ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯ
ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ಏರುವ ಬಗ್ಗೆ ಗುಜರಾತ್ ನಲ್ಲಿ ನರೇಂದ್ರ ಮೋದಿ ವ್ಯಂಗ್ಯವಾಡಿದ್ದರು. "ಕೆಲ ದಿನಗಳ ಹಿಂದೆ ನಾನು ಮೂರು ಚುನಾವಣೆಗಳ ಫಲಿತಾಂಶ ಹೀಗೆ ಬರುತ್ತದೆ ಎಂದು ಹೇಳಿದ್ದೆ. ಉತ್ತರ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆ, ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದಿದ್ದೆ. ಇನ್ನೊಂದು ಕಾಂಗ್ರೆಸ್ ನ ಅಧ್ಯಕ್ಷ ಸ್ಥಾನದ ಚುನಾವಣೆ. ಅಲ್ಲಿ ಒಂದೇ ಕುಟುಂಬದವರೇ ಗೆಲ್ಲುತ್ತಾರೆ" ಎಂದಿದ್ದರು.

ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ತಿರುಗೇಟು
ಇನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮೋದಿಗೆ ತಿರುಗೇಟು ನೀಡಿದ್ದಾರೆ. ಯಾರಾದರೂ ಚುನಾವಣೆಗೆ ಸ್ಪರ್ಧಿಸ ಬಯಸಿದರೆ ಧಾರಾಳವಾಗಿ ಸ್ಪರ್ಧೆ ಮಾಡಬಹುದು. ಇದು ಪ್ರಜಾಸತ್ತಾತ್ಮಕವಾಗಿಯೇ ನಡೆಯುತ್ತದೆ. ಕಾಂಗ್ರೆಸ್ ನ ಆಂತರಿಕ ವಿಚಾರವನ್ನು ಮಾತನಾಡುವ ಹಕ್ಕು ಪ್ರಧಾನಿಗಳಿಗಿಲ್ಲ ಎಂದಿದ್ದಾರೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications