ಮೋದಿ ಉಪನಾಮ ಟೀಕೆ ಪ್ರಕರಣದಲ್ಲಿ ದೋಷಿ: ಮಹಾತ್ಮ ಗಾಂಧಿಯವರ ಹೇಳಿಕೆ ಉಲ್ಲೇಖಿಸಿ ಪ್ರತಿಕ್ರಿಯೆ ಕೊಟ್ಟ ರಾಹುಲ್ ಗಾಂಧಿ
ನವದೆಹಲಿ, ಮಾರ್ಚ್. 23: 2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ದೋಷಿ ಎಂದು ತೀರ್ಪು ನೀಡಿದೆ. ತೀರ್ಪಿನ ನಂತರ ತಮ್ಮ ಮೊದಲ ಪ್ರತಿಕ್ರಿಯೆ ನೀಡಿರುವ ಅವರು, ಸತ್ಯವೇ ನನ್ನ ದೇವರು ಎಂದಿದ್ದಾರೆ.
मेरा धर्म सत्य और अहिंसा पर आधारित है। सत्य मेरा भगवान है, अहिंसा उसे पाने का साधन।
— Rahul Gandhi (@RahulGandhi) March 23, 2023
- महात्मा गांधी
2019ರ ಲೋಕಸಭೆ ಚುನಾವಣೆ ವೇಳೆ ಕರ್ನಾಟಕದ ಕೋಲಾರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ರಾಹುಲ್ ಗಾಂಧಿ ಅವರು "ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಹೇಗೆ ಇರುತ್ತದೆ ಎಂಬುದು ಆಶ್ಚರ್ಯ" ಎಂದು ಹೇಳಿಕೆ ನೀಡಿದ್ದರು. ರಾಹುಲ್ ಗಾಂಧಿ ಅವರು ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು.

ರಾಹುಲ್ ಗಾಂಧಿ ಅವರ ಪ್ರಕರಣವನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯವು 2 ವರ್ಷಗಳ ಶಿಕ್ಷೆಯನ್ನು ಘೋಷಿಸಿದೆ. ಬಳಿಕ ಜಾಮೀನು ನೀಡಿ, ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿ ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಲಾಯಿತು. ನ್ಯಾಯಾಲಯದ ಆದೇಶದ ಬಳಿಕ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಮಹಾತ್ಮ ಗಾಂಧಿ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ನನ್ನ ಧರ್ಮವು ಸತ್ಯ ಮತ್ತು ಅಹಿಂಸೆಯ ಮೇಲೆ ಆಧಾರಿತವಾಗಿದೆ. ಸತ್ಯವೇ ನನ್ನ ದೇವರು, ಅಹಿಂಸೆ ಅದನ್ನು ಪಡೆಯುವ ಸಾಧನವಾಗಿದೆ. - ಮಹಾತ್ಮಾ ಗಾಂಧಿ" ಎಂದು ಬರೆದಿದ್ದಾರೆ.
ಬಿಜೆಪಿ ಶಾಸಕ ಮತ್ತು ಗುಜರಾತ್ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ರಾಹುಲ್ ಗಾಂಧಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಸಿಆರ್ಪಿಸಿಯ ಸೆಕ್ಷನ್ 202 ರ ಅಡಿಯಲ್ಲಿ ಕಾನೂನು ಕಾರ್ಯವಿಧಾನವನ್ನು ಅನುಸರಿಸದ ಕಾರಣ ಪ್ರಕ್ರಿಯೆಯು ಮೊದಲಿನಿಂದಲೂ ದೋಷಪೂರಿತವಾಗಿದೆ ಎಂದು ರಾಹುಲ್ ಗಾಂಧಿ ಪರ ವಕೀಲರು ವಾದಿಸಿದ್ದರು. ರಾಹುಲ್ ಗಾಂಧಿಯವರ ಭಾಷಣಕ್ಕೆ ಪೂರ್ಣೇಶ್ ಮೋದಿ ಗುರಿಯಾಗದ ಕಾರಣ ನರೇಂದ್ರ ಮೋದಿ ಅವರೇ ಪ್ರಕರಣದಲ್ಲಿ ದೂರುದಾರರಾಗಬೇಕಿತ್ತು ಎಂದು ರಾಹುಲ್ ಗಾಂಧಿ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದರು.
ಇನ್ನು, ಸೂರತ್ ನ್ಯಾಯಾಲಯದ ತೀರ್ಪಿಗೆ ರಾಹುಲ್ ಗಾಂಧಿಯವರ ಸಹೋದರಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ."ಇಡೀ ಭಯಭೀತ ಆಡಳಿತವು ಶಿಕ್ಷೆ, ತಾರತಮ್ಯವನ್ನು ವಿಧಿಸುವ ಮೂಲಕ ರಾಹುಲ್ ಗಾಂಧಿಯವರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ನನ್ನ ಸಹೋದರ ಎಂದಿಗೂ ಹೆದರಿದಿಲ್ಲ, ಮುಂದೆಯೂ ಎಂದಿಗೂ ಹೆದರುವುದಿಲ್ಲ. ಆತ ಸತ್ಯವನ್ನು ಮಾತನಾಡುತ್ತಾ ಬದುಕಿದ್ದಾನೆ ಮತ್ತು ಸತ್ಯವನ್ನೇ ಮಾತನಾಡುತ್ತಾನೆ. ಅವರು ದೇಶದ ಜನರ ಧ್ವನಿಯಾಗುವುದನ್ನು ಮುಂದುವರಿಸುತ್ತಾರೆ. ಸತ್ಯದ ಶಕ್ತಿ ಮತ್ತು ಕೋಟ್ಯಂತರ ಜನರ ಪ್ರೀತಿ ಅವರೊಂದಿಗಿದೆ" ಎಂದು ಟ್ವೀಟ್ ಮಾಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಿರೋಧ ಪಕ್ಷದ ನಾಯಕರನ್ನು ಮುಗಿಸಲು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. "ವಿರೋಧ ಪಕ್ಷದ ನಾಯಕರು ಮತ್ತು ಪಕ್ಷಗಳನ್ನು ಮುಗಿಸಲು ಷಡ್ಯಂತ್ರ ನಡೆಯುತ್ತಿದೆ. ಬಿಜೆಪಿಯೇತರ ಪಕ್ಷಗಳ ನಾಯಕರ ವಿರುದ್ಧ ಪ್ರಕರಣ ದಾಖಲಿಸಲು ಷಡ್ಯಂತ್ರ ನಡೆಯುತ್ತಿದೆ. ನನಗೆ ರಾಹುಲ್ ಗಾಂಧಿಯೊಂದಿಗೆ ಭಿನ್ನಾಭಿಪ್ರಾಯವಿದೆ. ಆದರೆ ಅವರನ್ನು ಮಾನನಷ್ಟ ಮೊಕದ್ದಮೆಯಲ್ಲಿ ಸಿಲುಕಿಸುವುದು ಸರಿಯಲ್ಲ. ನಾನು ನ್ಯಾಯಾಲಯವನ್ನು ಗೌರವಿಸುತ್ತೇನೆ, ಆದರೆ ತೀರ್ಪನ್ನು ಒಪ್ಪುವುದಿಲ್ಲ" ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications