ಲೆಕ್ಕವಿಲ್ಲದಷ್ಟು ಮನೆಗಳನ್ನು ನಾಶಪಡಿಸಿದ ಮೋದಿ ಸರ್ಕಾರ: ರಾಹುಲ್ ಗಾಂಧಿ ಆರೋಪ
ನವದೆಹಲಿ, ನವೆಂಬರ್ 9: ನರೇಂದ್ರ ಮೋದಿ ಸರ್ಕಾರವು 'ಉದ್ದೇಶಪೂರ್ವಕ' ಲಾಕ್ಡೌನ್ ಮತ್ತು ಅಪನಗದೀಕರಣ ಮೂಲಕ ಲೆಕ್ಕವಿಲ್ಲದಷ್ಟು ಮನೆಗಳನ್ನು ನಾಶಪಡಿಸಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಲಾಕ್ಡೌನ್ ಕಾರಣದಿಂದ ಕುಟುಂಬವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದರಿಂದ ಬೇಸೆತ್ತ 19 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ತೆಲಂಗಾಣದ ಘಟನೆಯ ವರದಿಯೊಂದನ್ನು ಟ್ಯಾಗ್ ಮಾಡಿರುವ ರಾಹುಲ್ ಗಾಂಧಿ, ಬಿಜೆಪಿ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ.
'ಈ ಅತ್ಯಂತ ದುಃಖದ ಗಳಿಗೆಯಲ್ಲಿ ಈ ಯುವತಿಯ ಕುಟುಂಬದ ಸದಸ್ಯರಿಗೆ ನನ್ನ ಸಂತಾಪಗಳನ್ನು ಸಲ್ಲಿಸುತ್ತೇನೆ. ಬಿಜೆಪಿ ಸರ್ಕಾರವು ಉದ್ದೇಶಪೂರ್ವಕ ಅಪನಗದೀಕರಣ ಮತ್ತು ದೇಶವ್ಯಾಪಿ ಲಾಕ್ಡೌನ್ನಿಂದ ಅಸಂಖ್ಯಾತ ಮನೆಗಳನ್ನು ನಾಶಪಡಿಸಿದೆ. ಇದು ವಾಸ್ತವ' ಎಂದು ಅವರು ಟ್ವೀಟ್ ಮಾಡಿದ್ದಾರೆ.

ದೆಹಲಿಯ ಲೇಡಿ ಶ್ರೀರಾಮ್ (ಎಲ್ಎಸ್ಆರ್) ಮಹಿಳಾ ಕಾಲೇಜಿನಲ್ಲಿ ಎರಡನೆಯ ವರ್ಷದ ಬಿಎಸ್ಸಿ ಗಣಿತ ಪದವಿ ವಿದ್ಯಾರ್ಥಿನಿಯಾಗಿದ್ದ ಐಶ್ವರ್ಯಾ, ನವೆಂಬರ್ 2ರಂದು ತೆಲಂಗಾಣದ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಮೋಟಾರ್ ಸೈಕಲ್ ಮೆಕ್ಯಾನಿಕ್ ಆಗಿರುವ ಆಕೆಯ ತಂದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರಿಂದ ಆಕೆಯ ಆನ್ಲೈನ್ ತರಗತಿಗಳಿಗೆ ಸೆಕೆಂಡ್ ಹ್ಯಾಂಡ್ ಲ್ಯಾಪ್ ಟಾಪ್ ಕೂಡ ಕೊಡಿಸಲು ಶಕ್ತರಾಗಿರಲಿಲ್ಲ. ತನ್ನ ಶಿಕ್ಷಣ ಮುಂದುವರಿಸಲಾಗುತ್ತಿಲ್ಲ ಎಂದು ನೊಂದಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಳು.
12ನೆಯ ತರಗತಿಯಲ್ಲಿ ಆಕೆ ಶೇ 98.5ರಷ್ಟು ಅಂಕಗಳನ್ನು ಪಡೆದಿದ್ದಳು. 'ನನ್ನಿಂದಾಗಿ ನನ್ನ ಕುಟುಂಬ ಆರ್ಥಿಕ ಸಂಕಷ್ಟಗಳನ್ನು ಎದುರಿಸುತ್ತಿದೆ. ನಾನು ನನ್ನ ಕುಟುಂಬಕ್ಕೆ ಭಾರವಾಗಿದ್ದೇನೆ. ನನ್ನ ಶಿಕ್ಷಣ ಹೊರೆಯಾಗಿದೆ' ಎಂದು ಆಕೆ ಡೆತ್ ನೋಟ್ನಲ್ಲಿ ಬರೆದುಕೊಂಡಿದ್ದಳು.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications