ಭಾರತೀಯರನ್ನು ಅವಮಾನಿಸಿ, ದೇಶದ್ರೋಹ ಎಸಗಿರುವ ಮೋಹನ್ ಭಾಗವತ್: ಆರ್ಎಸ್ಎಸ್ ಮುಖ್ಯಸ್ಥರ ವಿರುದ್ಧ ರಾಹುಲ್ ಗಾಂಧಿ ಕೆಂಡಾಮಂಡಲ
ನವದೆಹಲಿ, ಜನವರಿ 15: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಭಾರತೀಯರನ್ನು ಅವಮಾನಿಸುವ ಮೂಲಕ ದೇಶದ್ರೋಹವನ್ನು ಎಸಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೆಂಡ ಕಾರಿದ್ದಾರೆ. ನಿಜವಾದ ಸ್ವಾತಂತ್ರ್ಯವೆಂಬುದು ಭಾರತಕ್ಕೆ ಸಿಕ್ಕಿದ್ದು ರಾಮ ಮಂದಿರ ಪ್ರತಿಷ್ಠಾಪನಾ ದಿನದಂದು ಎಂಬುದಾಗಿ ಮೋಹನ್ ಭಾಗವತ್ ಹೇಳಿಕೆ ನೀಡಿದ್ದರು. ಈ ಕುರಿತಾಗಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಮೋಹನ್ ಭಾಗವತ್ ವಿರುದ್ಧ ವ್ಯಾಪಕ ವಾಗ್ದಾಳಿ ನಡೆಸಿದ್ದಾರೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆಗಳು ಭಾರತೀಯರಿಗೆ ಮಾಡಿದ ಅವಮಾನ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಸ್ವಾತಂತ್ರ್ಯ ಚಳುವಳಿ ಹಾಗೂ ಸಂವಿಧಾನದ ಬಗ್ಗೆ ತಾವು ಹೊಂದಿರುವ ಅಭಿಪ್ರಾಯವನ್ನು ದೇಶಕ್ಕೆ ತಿಳಿಸುವ ಧೈರ್ಯವನ್ನು ಮೋಹನ್ ಭಾಗವತ್ ಮಾಡಿದ್ದಾರೆ. ಎಲ್ಲ ಭಾರತೀಯರಿಗೆ ಅವಮಾನ ಮಾಡುವ ಮೂಲಕ ದೇಶದ್ರೋಹದ ಕೆಲಸವನ್ನು ಭಾಗವತ್ ಮಾಡಿದ್ದಾರೆ' ಎಂದು ರಾಹುಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂವಿಧಾನದ ಪರಿಕಲ್ಪನೆ ಹಾಗೂ ಬ್ರಿಟಿಷರ ವಿರುದ್ಧದ ಭಾರತೀಯರ ಹೋರಾಟದಂತಹ ವಿಚಾರಗಳು ಮೋಹನ್ ಭಾಗವತ್ ಅವರಿಗೆ ನಗಣ್ಯವಾಗಿ ಗೋಚರಿಸುತ್ತಿವೆ. ಇದನ್ನು ಸಾರ್ವಜನಿಕವಾಗಿ ಹೇಳುವ ಧೈರ್ಯ ಅವರಿಗೆ ಇದೆ. ಈ ರೀತಿಯಾಗಿ ಬೇರೆ ಯಾವುದೇ ದೇಶದಲ್ಲಿ ಹೇಳಿಕೆ ನೀಡಿದ್ದರೆ, ಅಂತವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು ರಾಹುಲ್ ಹರಿಹಾಯ್ದಿದ್ದಾರೆ.
ಹೊಸ ಕಾಂಗ್ರೆಸ್ ಪ್ರಧಾನ ಕಚೇರಿ ( ಇಂದಿರಾ ಗಾಂಧಿ ಭವನ ) ಉದ್ಘಾಟನೆಯ ಬಳಿಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, 'ಭಾರತವು ಹಲವು ರಾಜ್ಯಗಳ ಒಕ್ಕೂಟ ಎಂದು ಒಂದು ಪರಿಕಲ್ಪನೆ ಹೇಳುತ್ತದೆ. ಇಲ್ಲಿರುವ ಎಲ್ಲಾ ಭಾಷೆಗಳೂ ರಾಷ್ಟ್ರೀಯ ಭಾಷೆಗಳೇ ಆಗಿವೆ. ಇವನ್ನು ಸಮಾನವಾಗಿ ನೋಡುತ್ತಿರುವುದು ನಮ್ಮ ಸಂವಿಧಾನ. ಇಲ್ಲಿನ ಯಾವು ಭಾಷೆಯೂ ಶ್ರೇಷ್ಠ ಭಾಷೆ ಇಲ್ಲ, ಯಾವುದೇ ಭಾಷೆಯೂ ಕನಿಷ್ಠವಲ್ಲ. ಇಲ್ಲಿನ ಯಾವುದೇ ಸಂಸ್ಕೃತಿ ಶ್ರೇಷ್ಠ ಇಲ್ಲ, ಯಾವುದೇ ಸಂಸ್ಕೃತಿ ಕೀಳಲ್ಲ. ಯಾವುದೇ ಸಮುಧಾಯ ಶ್ರೇಷ್ಠವಲ್ಲ, ಯಾವುದೇ ಸಮುದಾಯ ಕೀಳಲ್ಲ. ಇಲ್ಲಿರುವ ಎಲ್ಲವೂ ಒಂದೇ ಆಗಿದೆ. ಅದು ಸಂವಿಧಾನದಲ್ಲಿ ಬರೆಯಲ್ಪಟ್ಟಿದೆ' ಎಂದು ರಾಹುಲ್ ಹೇಳಿದ್ದಾರೆ.

ಇಂತಹ ಭಾರತದ ಪರಿಕಲ್ಪನೆ ಬಗ್ಗೆ ಬಿಜೆಪಿ ನೇತೃತ್ವದ ಸರ್ಕಾರವು ವಿಭಿನ್ನವಾದ ಆಲೋಚನೆಯನ್ನೇ ಹೊಂದಿದೆ. ಭಾರತದ ಬಗ್ಗೆ ಕಾಂಗ್ರೆಸ್ಸಿಗೆ ಇರುವ ಕಲ್ಪನೆಗೆ ಸಂಪೂರ್ಣವಾಗಿ ಭಿನ್ನವಾಗಿರುವುದು ಬಿಜೆಪಿ ಕಲ್ಪನೆ. ಬಿಜೆಪಿಯು ಭಾರತದ ಬಗ್ಗೆ ಭಿನ್ನವಾದ ದೃಷ್ಟಿಕೋನವನ್ನು ಹೊಂದಿದೆ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.
ಮುಕ್ತವಲ್ಲದ ಗುಪ್ತ ಸಮೂದಾಯವೊಂದು ಭಾರತವನ್ನು ಮುನ್ನಡೆಸಬೇಕೆಂದು ಬಿಜೆಪಿ ಹಾಗೂ ಆರ್ಎಸ್ಎಸ್ನ ಜನರು ಬಯಸುತ್ತಾರೆ. ರಾಷ್ಟ್ರವನ್ನು ವ್ಯಕ್ತಿ ಕೇಂದ್ರಿತವನ್ನಾಗಿ ಮಾಡಲು ಅವರು ಮುಂದಾಗಿದ್ದಾರೆ. ಈ ಮೂಲಕ ದಲಿತರ, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ಜನಾಂಗದವರ ಧ್ವನಿಯನ್ನು ಹತ್ತಿಕ್ಕಲು ಅವರು ಬಯಸುತ್ತಾರೆ ಎಂದು ರಾಹುಲ್ ಹರಿಹಾಯ್ದಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications