iPhone hack alert row: ಕೇಂದ್ರ ಸರ್ಕಾರದಿಂದ ವಿಪಕ್ಷ ನಾಯಕರ ಐಫೋನ್ ಹ್ಯಾಕ್- ರಾಹುಲ್ ಗಾಂಧಿ ಗಂಭೀರ ಆರೋಪ
ನವದೆಹಲಿ, ಅಕ್ಟೋಬರ್ 31: ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಿರೋಧ ಪಕ್ಷಗಳ ನಾಯಕರ ಐಫೋನ್ಗಳನ್ನು ಹ್ಯಾಕ್ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಈ ವಿಚಾರವಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾತನಾಡಿರುವ ಅವರು, 'ದೇಶದಲ್ಲಿ ನಂಬರ್ ಒನ್ ಸ್ಥಾನದಲ್ಲಿರುವವರು ಪ್ರಧಾನಿ ಮೋದಿ, ನಂಬರ್ ಟು ಸ್ಥಾನದಲ್ಲಿರುವವರು ಅದಾನಿ ಹಾಗೂ ನಂಬರ್ ಥ್ರೀ ಸ್ಥಾನದಲ್ಲಿರುವವರು ಅಮಿತ್ ಶಾ ಎಂದು ನಾನು ಈ ಮೊದಲು ಭಾವಿಸಿದ್ದೆ.

ಆದರೆ, ಇದು ತಪ್ಪೆಂದು ಈಗ ತಿಳಿದಿದೆ. ನಂಬರ್ ಒನ್ ಸ್ಥಾನದಲ್ಲಿ ಅದಾನಿ ಇದ್ದಾರೆ. ನಂಬರ್ ಟು ಸ್ಥಾನದಲ್ಲಿ ಪಿಎಂ ಮೋದಿ ಇದ್ದಾರೆ. ನಂಬರ್ ಥ್ರೀ ಸ್ಥಾನದಲ್ಲಿ ಅಮಿತ್ ಶಾ ಇದ್ದಾರೆ. ನಾವು ಭಾರತದ ರಾಜಕೀಯವನ್ನು ಅರ್ಥಮಾಡಿಕೊಂಡಿದ್ದೇವೆ. ಈಗ ಅದಾನಿ ಜಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈ ಕಾರಣಕ್ಕಾಗಿಯೇ ಗೊಂದಲದ ರಾಜಕೀಯ ನಡೆಯುತ್ತಿದೆ' ಎಂದು ಹೇಳಿದ್ದಾರೆ.
'ನನ್ನ ಕಚೇರಿಯಲ್ಲಿ ಹಲವಾರು ಜನರಿಗೆ ಈ ಸಂದೇಶ ಬಂದಿದೆ. ಕಾಂಗ್ರೆಸ್ನಲ್ಲಿ ಕೆಸಿ ವೇಣುಗೋಪಾಲ್, ಸುಪ್ರಿಯಾ ಸುಲೆ, ಪವನ್ ಖೇರಾ ಕೂಡ ಹ್ಯಾಕ್ ಸಂದೇಶಗಳನ್ನು ಸ್ವೀಕರಿಸಿದ್ದಾರೆ. ಅವರು (ಬಿಜೆಪಿ) ಯುವಕರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ' ಎಂದು ರಾಹುಲ್ ಆರೋಪಿಸಿದ್ದಾರೆ.
'ಇದರ ವಿರುದ್ಧ ಕೆಲವೇ ಕೆಲವು ಜನರು ಹೋರಾಡುತ್ತಿದ್ದಾರೆ. ಆದರೆ, ನಾವು ಹೆದರುವುದಿಲ್ಲ. ನೀವು ಎಷ್ಟು ಬೇಕಾದರೂ (ಫೋನ್) ಟ್ಯಾಪಿಂಗ್ ಮಾಡಬಹುದು. ನಾನು ಹೆದರುವುದಿಲ್ಲ. ನೀವು ನನ್ನ ಫೋನ್ ತೆಗೆದುಕೊಳ್ಳಲು ಬಯಸಿದರೆ, ನಾನು ಅದನ್ನು ನಿಮಗೆ ಕೊಡುತ್ತೇನೆ' ಎಂದು ವಾಗ್ದಾಳಿ ನಡೆಸಿದ್ದಾರೆ.
'ಇದು ಕ್ರಿಮಿನಲ್ಗಳು ಮತ್ತು ಕಳ್ಳರ ಕೆಲಸ' ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಕೆಲವು ಪ್ರತಿಪಕ್ಷಗಳ ನಾಯಕರು ತಮ್ಮ ಫೋನ್ಗಳ ಮೇಲೆ 'ಕೇಂದ್ರ ಸರ್ಕಾರದ ಪ್ರಾಯೋಜಿತ' ದಾಳಿಯ ಬಗ್ಗೆ ಹಲವು ನಾಯಕರು ಮಾಹಿತಿ ನೀಡಿದ್ದಾರೆ ಎಂದು ಇದೇ ವೇಳೆ ಹೇಳಿದ್ದಾರೆ.
ದೇಶದಿಂದ 'ಅದಾನಿ ಸರ್ಕಾರ'ವನ್ನು ತೆಗೆದುಹಾಕುವ ಕುರಿತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.
'ಇದು ಬಹುದೊಡ್ಡ ಸಮಸ್ಯೆಯಾಗಿದೆ. ನನ್ನಲ್ಲಿ ಕೆಲವು ಆಲೋಚನೆಗಳಿವೆ. ಸಮಯ ಬಂದಾಗ ಅದಾನಿ ಸರ್ಕಾರವನ್ನು ಹೇಗೆ ತೆಗೆದುಹಾಕಬಹುದು ಎಂಬುದನ್ನು ನಾವು ತೋರಿಸುತ್ತೇವೆ. ಸರ್ಕಾರವನ್ನು ತೆಗೆದುಹಾಕಿದ ತಕ್ಷಣ ಅದಾನಿ ತೆಗೆದುಹಾಕಬಹುದು ಎಂದು ನೀವು ಭಾವಿಸಬೇಡಿ. ಅದಾನಿ ಎಂಬುದು ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಏಕಸ್ವಾಮ್ಯದ ಸಂಕೇತವಾಗಿದೆ. ಬಿಜೆಪಿಯ ಹಣಕಾಸು ವ್ಯವಸ್ಥೆಯು ಅವನೊಂದಿಗೆ (ಅದಾನಿ) ನೇರವಾಗಿ ಸಂಬಂಧ ಹೊಂದಿದೆ' ಎಂದು ವಾಗ್ದಾಳಿ ನಡೆಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications