ಸರ್ಕಾರಕ್ಕೆ ತಿರುಗೇಟು ನೀಡಲು ಬರುವುದಿಲ್ಲ: ರಾಹುಲ್ ಗಾಂಧಿ
ನವದೆಹಲಿ, ನವೆಂಬರ್ 23: ಭೂತಾನ್ ಪ್ರದೇಶದ ಗಡಿಭಾಗದೊಳಗೆ ಹಳ್ಳಿಯನ್ನು ನಿರ್ಮಿಸುವ ಮೂಲಕ ದೋಕ್ಲಾಂನಲ್ಲಿ ಚೀನಾದಿಂದ ಭಾರತಕ್ಕೆ ಮತ್ತೆ ಅಪಾಯದ ಬೆದರಿಕೆ ಎದುರಾಗಿದೆ ಎಂಬ ವರದಿಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 'ಚೀನಾದ ಭೂರಾಜಕೀಯ ತಂತ್ರಗಳಿಗೆ ಭಾರತದ ಸಾರ್ವಜನಿಕ ಸಂಪರ್ಕ ಚಾಲಿತ ಮಾಧ್ಯಮ ತಂತ್ರಗಳಿಂದ ಎದುರೇಟು ನೀಡಲು ಸಾಧ್ಯವಿಲ್ಲ. ಈ ಸರಳ ಸಂಗತಿಯು ಭಾರತ ಸರ್ಕಾರವನ್ನು ನಡೆಸುತ್ತಿರುವವರ ಮನಸಿನೊಳಗೆ ಇದೆಲ್ಲ ಮೂಡುವುದಿಲ್ಲ' ಎಂದು ಟೀಕಿಸಿದ್ದಾರೆ.
ಭೂತಾನ್ನ ಎರಡು ಕಿಮೀ ಗಡಿಯೊಳಗೆ ಚೀನಾವು ಹಳ್ಳಿಯನ್ನು ನಿರ್ಮಿಸಿದ್ದು, ಅಲ್ಲಿ ಕಾರ್ಯಚಟುವಟಿಕೆ ನಡೆಸುತ್ತಿದೆ ಎಂದು ವರದಿಯಾಗಿತ್ತು. ಈ ಪ್ರದೇಶವು ಈ ಹಿಂದೆ ದೋಕ್ಲಂನಲ್ಲಿ ಬಿಕ್ಕಟ್ಟು ತಲೆದೋರಿದ್ದ ಸ್ಥಳದಿಂದ ಕೇವಲ 9 ಕಿಮೀ ದೂರವಿದ್ದು, ಭಾರತಕ್ಕೆ ಅಪಾಯ ತಂದೊಡ್ಡಲಿದೆ ಎಂದು ಹೇಳಲಾಗಿತ್ತು. ಆದರೆ ಇದನ್ನು ಭೂತಾನ್ ನಿರಾಕರಿಸಿತ್ತು. ಭೂತಾನ್ ಒಳಗೆ ಚೀನಾದ ಯಾವುದೇ ಹಳ್ಳಿ ಇಲ್ಲ ಎಂದು ರಾಯಭಾರ ಕಚೇರಿ ಸ್ಪಷ್ಟಪಡಿಸಿತ್ತು. ಈ ವರದಿ ಬಂದ ಕೆಲವು ದಿನಗಳ ಬಳಿಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

2017ರಲ್ಲಿ ಭಾರತ ಮತ್ತು ಚೀನಾ ನಡುವೆ 73 ದಿನಗಳ ಕಾಲ ದೋಕ್ಲಾಂ ಬಿಕ್ಕಟ್ಟು ತಲೆದೋರಿತ್ತು. ಪ್ರಸ್ತುತ ಭಾರತ-ಚೀನಾ ಪಡೆಗಳ ಪೂರ್ವ ಲಡಾಖ್ನ ಗಡಿ ವಾಸ್ತವ ನಿಯಂತ್ರಣ ರೇಖೆಯಲ್ಲಿ ಮೇ ತಿಂಗಳಿನಿಂದ ಪರಸ್ಪರ ಕಾದಾಟ ನಡೆಸುತ್ತಿವೆ. ತಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರೆ, ಕೆಲವೇ ಗಂಟೆಗಳಲ್ಲಿ ಚೀನಾ ಪಡೆಗಳನ್ನು ನೂರು ಕಿಮೀ ಗಡಿಯೊಳಗೆ ಓಡಿಸುತ್ತಿತ್ತು ಎಂದು ಈ ಹಿಂದೆ ರಾಹುಲ್ ಗಾಂಧಿ ಹೇಳಿದ್ದರು.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications