ಸರ್ಕಾರಕ್ಕೆ ತಿರುಗೇಟು ನೀಡಲು ಬರುವುದಿಲ್ಲ: ರಾಹುಲ್ ಗಾಂಧಿ
ನವದೆಹಲಿ, ನವೆಂಬರ್ 23: ಭೂತಾನ್ ಪ್ರದೇಶದ ಗಡಿಭಾಗದೊಳಗೆ ಹಳ್ಳಿಯನ್ನು ನಿರ್ಮಿಸುವ ಮೂಲಕ ದೋಕ್ಲಾಂನಲ್ಲಿ ಚೀನಾದಿಂದ ಭಾರತಕ್ಕೆ ಮತ್ತೆ ಅಪಾಯದ ಬೆದರಿಕೆ ಎದುರಾಗಿದೆ ಎಂಬ ವರದಿಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, 'ಚೀನಾದ ಭೂರಾಜಕೀಯ ತಂತ್ರಗಳಿಗೆ ಭಾರತದ ಸಾರ್ವಜನಿಕ ಸಂಪರ್ಕ ಚಾಲಿತ ಮಾಧ್ಯಮ ತಂತ್ರಗಳಿಂದ ಎದುರೇಟು ನೀಡಲು ಸಾಧ್ಯವಿಲ್ಲ. ಈ ಸರಳ ಸಂಗತಿಯು ಭಾರತ ಸರ್ಕಾರವನ್ನು ನಡೆಸುತ್ತಿರುವವರ ಮನಸಿನೊಳಗೆ ಇದೆಲ್ಲ ಮೂಡುವುದಿಲ್ಲ' ಎಂದು ಟೀಕಿಸಿದ್ದಾರೆ.
ಭೂತಾನ್ನ ಎರಡು ಕಿಮೀ ಗಡಿಯೊಳಗೆ ಚೀನಾವು ಹಳ್ಳಿಯನ್ನು ನಿರ್ಮಿಸಿದ್ದು, ಅಲ್ಲಿ ಕಾರ್ಯಚಟುವಟಿಕೆ ನಡೆಸುತ್ತಿದೆ ಎಂದು ವರದಿಯಾಗಿತ್ತು. ಈ ಪ್ರದೇಶವು ಈ ಹಿಂದೆ ದೋಕ್ಲಂನಲ್ಲಿ ಬಿಕ್ಕಟ್ಟು ತಲೆದೋರಿದ್ದ ಸ್ಥಳದಿಂದ ಕೇವಲ 9 ಕಿಮೀ ದೂರವಿದ್ದು, ಭಾರತಕ್ಕೆ ಅಪಾಯ ತಂದೊಡ್ಡಲಿದೆ ಎಂದು ಹೇಳಲಾಗಿತ್ತು. ಆದರೆ ಇದನ್ನು ಭೂತಾನ್ ನಿರಾಕರಿಸಿತ್ತು. ಭೂತಾನ್ ಒಳಗೆ ಚೀನಾದ ಯಾವುದೇ ಹಳ್ಳಿ ಇಲ್ಲ ಎಂದು ರಾಯಭಾರ ಕಚೇರಿ ಸ್ಪಷ್ಟಪಡಿಸಿತ್ತು. ಈ ವರದಿ ಬಂದ ಕೆಲವು ದಿನಗಳ ಬಳಿಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

2017ರಲ್ಲಿ ಭಾರತ ಮತ್ತು ಚೀನಾ ನಡುವೆ 73 ದಿನಗಳ ಕಾಲ ದೋಕ್ಲಾಂ ಬಿಕ್ಕಟ್ಟು ತಲೆದೋರಿತ್ತು. ಪ್ರಸ್ತುತ ಭಾರತ-ಚೀನಾ ಪಡೆಗಳ ಪೂರ್ವ ಲಡಾಖ್ನ ಗಡಿ ವಾಸ್ತವ ನಿಯಂತ್ರಣ ರೇಖೆಯಲ್ಲಿ ಮೇ ತಿಂಗಳಿನಿಂದ ಪರಸ್ಪರ ಕಾದಾಟ ನಡೆಸುತ್ತಿವೆ. ತಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಿದ್ದರೆ, ಕೆಲವೇ ಗಂಟೆಗಳಲ್ಲಿ ಚೀನಾ ಪಡೆಗಳನ್ನು ನೂರು ಕಿಮೀ ಗಡಿಯೊಳಗೆ ಓಡಿಸುತ್ತಿತ್ತು ಎಂದು ಈ ಹಿಂದೆ ರಾಹುಲ್ ಗಾಂಧಿ ಹೇಳಿದ್ದರು.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ












Click it and Unblock the Notifications