ಸರ್ವರಿಗೂ ಆರೋಗ್ಯ ಸುರಕ್ಷೆ ನೀಡುವ ಕಾಯ್ದೆಯ ಭರವಸೆ ನೀಡಿದ ರಾಹುಲ್
ರಾಯಪುರ(ಚತ್ತೀಸ್ಘಡ), ಮಾರ್ಚ್ 15: ಆಯುಷ್ಮಾನ್ ಭಾರತ್ ಯೋಜನೆಯನ್ನು ಟೀಕಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಅದು ಸೀಮಿತ ಆರೋಗ್ಯ ಸಮಸ್ಯೆಗಳಿಗೆ ಮಾತ್ರವೇ ರಕ್ಷಣೆ ಒದಗಿಸುತ್ತದೆ ಎಂದರು.
ಚತ್ತೀಸ್ಘಡದ ರಾಯ್ಪುರದಲ್ಲಿ ಆರೋಗ್ಯ ಪರಿಣಿತರು, ಆಶಾ ಕಾರ್ಯಕರ್ತೆಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಆಯುಷ್ಮಾನ್ ಭಾರತ್ ಅನ್ನು ಶ್ರೀಮಂತರ ಜೇಬು ತುಂಬಿಸಲು ಮಾಡಲಾಗಿದೆ. ಅದರ ಒಪ್ಪಂದ ಶ್ರೀಮಂತರ ಪಾಲಾಗಿದೆ ಎಂದರು.
ಕಾಂಗ್ರೆಸ್ನ ಪ್ರಣಾಳಿಕೆಯಲ್ಲಿ ನಾವು ಆರೋಗ್ಯ ಸುರಕ್ಷಾ ಕಾಯ್ದೆ ತರುವ ಬಗ್ಗೆ ಉಲ್ಲೇಖಿಸುತ್ತಿದ್ದು, ಈ ಕಾಯ್ದೆಯು ದೇಶದ ಎಲ್ಲಾ ನಾಗರೀಕರಿಗೂ ಕನಿಷ್ಟ ಆರೋಗ್ಯ ಭದ್ರತೆಯನ್ನು ಒದಗಿಸುತ್ತದೆ. ಅಲ್ಲದೆ ಈ ಆರೋಗ್ಯ ಕಾಯ್ದೆಯಿಂದಾಗಿ ಜಿಡಿಪಿಯಲ್ಲಿ 3% ಏರಿಕೆಯೂ ಆಗುತ್ತದೆ ಎಂದು ರಾಹುಲ್ ಭರವಸೆ ನೀಡಿದರು.

ಆಸ್ಪತ್ರೆಗಳು ಅಥವಾ ಆರೋಗ್ಯ ತಜ್ಞರ ಸರಿಯಾದ ಒಳಗೊಳ್ಳುವಿಕೆ ಇಲ್ಲದೆ ಆಯುಷ್ಮಾನ್ ಭಾರತ ಯೋಜನೆಯು ಆರೋಗ್ಯ ರಕ್ಷಣೆಯನ್ನು ನೀಡುತ್ತದೆ, ಇದು ಉತ್ತಮ ಯೋಜನೆಯೊಂದರ ಲಕ್ಷಣವಲ್ಲ ಎಂದು ರಾಹುಲ್ ಹೇಳಿದರು.
ಆಶಾ ಕಾರ್ಯಕರ್ತೆಯು, ವೈದ್ಯರು, ಇತರ ವೈದ್ಯಕೀಯ ಸಿಬ್ಬಂದಿ, ವೈದ್ಯಕೀಯ ಉದ್ಯಮ ಇವೆಲ್ಲವನ್ನೂ ಒಳಗೊಂಡ ಆರೋಗ್ಯ ಯೋಜನೆ ಒಂದು ಪರಿಚಯಿಸುವ ಅಗತ್ಯ ಇದೆ. ಆರೋಗ್ಯಕ್ಕೆ ಸಂಬಂಧಿಸಿದ ಎಲ್ಲರ ಏಳಿಗೆಯನ್ನೂ ಒಳಗೊಂಡ ಯೋಜನೆ ಅದಾಗಿರಬೇಕಾಗುತ್ತದೆ ಎಂದು ರಾಹುಲ್ ಹೇಳಿದರು.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications