ಚೀನಾಕ್ಕೆ ಸಹಾಯ ಮಾಡುತ್ತಿರುವ ಸಿಂಗ್ರನ್ನು ಸಚಿವ ಸ್ಥಾನದಿಂದ ಕಿತ್ತೊಗೆಯಿರಿ: ರಾಹುಲ್ ಗಾಂಧಿ
ನವದೆಹಲಿ, ಫೆಬ್ರವರಿ 9: ಚೀನಾದೊಂದಿಗಿನ ಗಡಿ ವಾಸ್ತವ ನಿಯಂತ್ರಣ ರೇಖೆ (ಎಲ್ಎಸಿ) ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸೇನಾ ಮುಖ್ಯಸ್ಥ ವಿ.ಕೆ. ಸಿಂಗ್ ಅವರನ್ನು ಕೇಂದ್ರದ ಸಚಿವ ಸ್ಥಾನದಿಂದ ಕಿತ್ತು ಹಾಕುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ವಿ.ಕೆ ಸಿಂಗ್ ಅವರು ಭಾರತದ ವಿರುದ್ಧವೇ ಚೀನಾಕ್ಕೆ ನೆರವು ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಸಿಂಗ್ ಹೇಳಿಕೆಗೆ ಚೀನಾ ಪ್ರತಿಕ್ರಿಯೆ ಇರುವ ಪತ್ರಿಕಾ ವರದಿಯನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ, 'ಭಾರತದ ವಿರುದ್ಧವಾಗಿ ಬಿಜೆಪಿ ಸಚಿವರು ಚೀನಾಕ್ಕೆ ಏಕೆ ನೆರವು ನೀಡುತ್ತಿದ್ದಾರೆ? ಅವರನ್ನು ಕಿತ್ತು ಹಾಕಬೇಕು. ಅವರನ್ನು ಕಿತ್ತು ಹಾಕದೆ ಇರುವುದು ಎಂದರೆ ಭಾರತದ ಪ್ರತಿ ಯೋಧರನ್ನೂ ಅವಮಾನಿಸಿದಂತೆ' ಎಂದು ಟ್ವೀಟ್ ಮಾಡಿದ್ದಾರೆ.
ಕಳೆದ ಭಾನುವಾರ ಮಧುರೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ರಾಜ್ಯ ಸಚಿವ ವಿ.ಕೆ ಸಿಂಗ್, ಚೀನಾಕ್ಕಿಂತಲೂ ಹೆಚ್ಚು ಬಾರಿ ಭಾರತದ ಸೇನೆಯು ಎಲ್ಎಸಿ ಗಡಿಯನ್ನು ದಾಟಿ ಅತಿಕ್ರಮಣ ಮಾಡಿದೆ ಎಂದು ಹೇಳಿಕೆ ನೀಡಿದ್ದರು. ಮುಂದೆ ಓದಿ.

ವಿಕೆ ಸಿಂಗ್ ಹೇಳಿದ್ದೇನು?
'ಚೀನಾ ಎಲ್ಎಸಿ ಕುರಿತಾದ ತನ್ನದೇ ಗ್ರಹಿಕೆಯೊಂದಿಗೆ ಅನೇಕ ಬಾರಿ ಅತಿಕ್ರಮಣ ಮಾಡಿದೆ. ಅದೇ ರೀತಿ ನಮ್ಮ ಗ್ರಹಿಕೆಗೆ ಅನುಗುಣವಾಗಿ ನಾವು ಕೂಡ ಅನೇಕ ಬಾರಿ ಮಾಡಿದ್ದೇವೆಯೋ ನಿಮಗೆ ತಿಳಿದಿಲ್ಲ. ಚೀನಾದ ಮಾಧ್ಯಮಗಳು ಇದನ್ನು ವರದಿ ಮಾಡುವುದಿಲ್ಲ. ನಿಮಗೆ ಭರವಸೆ ನೀಡುತ್ತೇನೆ, ಚೀನಾ ಹತ್ತು ಬಾರಿ ಗಡಿ ದಾಟಿ ಬಂದಿದ್ದರೆ, ನಾವು ಕನಿಷ್ಠ 50 ಬಾರಿ ಅದನ್ನು ಮಾಡಿರುತ್ತೇವೆ' ಎಂದು ವಿಕೆ ಸಿಂಗ್ ತಿಳಿಸಿದ್ದರು.
|
ಭಾರತೇ ಮೂಲ ಕಾರಣ
'ಇದು ಭಾರತದ ಕಡೆಯಿಂದ ಅರಿವಿಲ್ಲದೆ ಮಾಡಿರುವ ತಪ್ಪೊಪ್ಪಿಗೆ. ಬಹಳ ಕಾಲದಿಂದ ಭಾರತವು ಚೀನಾದ ಭಾಗಗಳನ್ನು ಅತಿಕ್ರಮಿಸುವ ಪ್ರಯತ್ನವಾಗಿ ಗಡಿಯನ್ನು ದಾಟಿ ಬರುವ ಕೃತ್ಯಗಳನ್ನು ಮಾಡಿದೆ. ಈ ಮೂಲಕ ನಿರಂತರವಾಗಿ ವಿವಾದ ಹಾಗೂ ಘರ್ಷಣೆಗಳನ್ನು ಸೃಷ್ಟಿಸುತ್ತಲೇ ಇದೆ. ಇದು ಚೀನಾ-ಭಾರತ ಗಡಿ ವಿವಾದಕ್ಕೆ ಮೂಲ ಕಾರಣ' ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್ ಪ್ರತಿಕ್ರಿಯೆ ನೀಡಿದ್ದರು.

ಭಾರತ ಒಪ್ಪಂದ ಪಾಲಿಸಲಿ
'ಚೀನಾದೊಂದಿಗೆ ಮಾಡಿಕೊಂಡಿರುವ ಒಮ್ಮತ, ಒಪ್ಪಂದಗಳು ಹಾಗೂ ಕರಾರುಗಳನ್ನು ಭಾರತ ಪಾಲಿಸಬೇಕು ಮತ್ತು ಪ್ರಬಲ ಕ್ರಿಯೆಯ ಮೂಲಕ ಗಡಿ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಎತ್ತಿಹಿಡಿಯಬೇಕು' ಎಂದು ಅವರು ಆಗ್ರಹಿಸಿದ್ದರು.

ಗಡಿಯಲ್ಲಿ ಶಾಂತಿ ಇಲ್ಲ
ಚೀನಾ ತೆಗೆದುಕೊಂಡಿರುವ ನಿರ್ಧಾರದಿಂದಾಗಿ ಗಡಿಯಲ್ಲಿ ಶಾಂತಿಯೇ ಇಲ್ಲದಂತಾಗಿದೆ. ಪೂರ್ವ ಲಡಾಖ್ನಲ್ಲಿ ವಾಸ್ತವ ಗಡಿ ರೇಖೆಯ ಯಥಾಸ್ಥಿತಿ ಬದಲಿಸುವ ಚೀನಾ ಯತ್ನವು ಗಡಿಯಲ್ಲಿ ನೆಮ್ಮದಿಯನ್ನು ಕದಡಿದೆ. ಭಾರತೀಯ ಸೇನೆಯು ಇದಕ್ಕೆ ತಕ್ಕ ಉತ್ತರವನ್ನು ನೀಡಿದೆ, ಯಥಾಸ್ಥಿತಿಯನ್ನು ಬದಲಿಸುವ ಯಾವುದೇ ಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ವಿ ಮುರಳೀಧರನ್ ಹೇಳಿದ್ದರು.
-
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications