ರೈತರ ಗದ್ದೆಯಲ್ಲಿ ಟ್ರ್ಯಾಕ್ಟರ್ ಓಡಿಸಿ ನಾಟಿ ಮಾಡಿದ ರಾಹುಲ್ ಗಾಂಧಿ
ಚಂಡೀಗಢ, ಜುಲೈ 8: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹರಿಯಾಣದ ಸೋನಿಪತ್ ಜಿಲ್ಲೆಗೆ ದಿಢೀರ್ ಭೇಟಿ ನೀಡಿ ರೈತ ಜನರೊಂದಿಗೆ ಸಂವಾದ ನಡೆಸಿದರು. ಬಳಿಕ ಕೃಷಿ ಭೂಮಿಯಲ್ಲಿ ಕೆಲಸ ಮಾಡುವ ರೈತರೊಂದಿಗೆ ಟ್ರ್ಯಾಕ್ಟರ್ ಓಡಿಸಿ ನಾಟಿ ಮಾಡಿದರು.
ಶನಿವಾರ ಮುಂಜಾನೆ ಸೋನಿಪತ್ ಜಿಲ್ಲೆಯ ಮದೀನಾ ಗ್ರಾಮಕ್ಕೆ ರಾಹುಲ್ ಗಾಂಧಿ ಆಗಮಿಸಿದ್ದರು. ಆಗ ಅನಿರೀಕ್ಷಿತವಾಗಿ ಗದ್ದೆಗೆ ಭೇಟಿ ನೀಡಿದರು. ರಾಹುಲ್ ಅವರು ಗ್ರಾಮಸ್ಥರು ಮತ್ತು ಹೊಲಗಳಲ್ಲಿ ಕೆಲಸ ಮಾಡುವ ರೈತರೊಂದಿಗೆ ಸಂವಾದ ನಡೆಸಿದರು. ಆಗ ರಾಹುಲ್ ಸಹ ಭತ್ತ ನಾಟಿ ಮಾಡಿ ಟ್ರ್ಯಾಕ್ಟರ್ ಓಡಿಸಿದರು ಎಂದು ಸೋನಿಪತ್ನ ಗೊಹಾನದ ಕಾಂಗ್ರೆಸ್ ಶಾಸಕ ಜಗ್ಬೀರ್ ಸಿಂಗ್ ಮಲಿಕ್ ಪಿಟಿಐಗೆ ತಿಳಿಸಿದರು.

ರಾಹುಲ್ ಗಾಂಧಿ ಬಹುಶಃ ದೆಹಲಿಯಿಂದ ಹಿಮಾಚಲ ಪ್ರದೇಶಕ್ಕೆ ಹೋಗುತ್ತಿದ್ದರು. ಕಾಂಗ್ರೆಸ್ನ ಅಧಿಕೃತ ಹ್ಯಾಂಡಲ್ನಿಂದ ಟ್ವೀಟ್ ಮಾಡಿದ ಚಿತ್ರಗಳಲ್ಲಿ, ಗಾಂಧಿಯವರು ತಮ್ಮ ಪರಿಚಿತ ಬಿಳಿ ಟೀ ಶರ್ಟ್ ಮತ್ತು ಪ್ಯಾಂಟ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರೂ ಗ್ರಾಮಸ್ಥರೊಂದಿಗೆ ಗದ್ದೆಗೆ ಹೆಜ್ಜೆ ಹಾಕುತ್ತಿದ್ದರು ಕಂಡು ಬಂದಿದೆ.
ಶುಕ್ರವಾರ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಹೈಕೋರ್ಟ್ ಮೋದಿ ಉಪನಾಮ ಹೇಳಿಕೆಯ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿದೆ. ಟ್ರಕ್ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಲು ಗಾಂಧಿಯವರು ಮೇ 23 ರಂದು ದೆಹಲಿಯಿಂದ ಚಂಡೀಗಢಕ್ಕೆ ಟ್ರಕ್ನಲ್ಲಿ ಪ್ರಯಾಣಿಸಿದ್ದರು.
ಇತ್ತೀಚೆಗೆ ರಾಹುಲ್ ಗಾಂಧಿ ರಾತ್ರಿಯ ಸಮಯದಲ್ಲಿ ಬಿಳಿ ಟೀ ಶರ್ಟ್ ಧರಿಸಿ, ಟ್ರಕ್ನೊಳಗೆ ಕುಳಿತು ಪ್ರಯಾಣವನ್ನು ಕೈಗೊಂಡಿದ್ದರು. ಈ ದೃಶ್ಯಗಳು ಮತ್ತು ವೀಡಿಯೊಗಳಲ್ಲಿ ಮಾಜಿ ಕಾಂಗ್ರೆಸ್ ಮುಖ್ಯಸ್ಥ ರಾಹುಲ್ ಗಾಂಧಿ ತಮ್ಮ ಬಿಳಿ ಟಿಶರ್ಟ್ ತೊಟ್ಟು ಡ್ರೈವರ್ನೊಂದಿಗೆ ಪ್ರಯಾಣಿಸಿದರು. ಬಳಿಕ ಸ್ಥಳೀಯ ಡಾಬಾದಲ್ಲಿ ಚಾಲಕರೊಂದಿಗೆ ಸಂವಾದ ನಡೆಸಿದ್ದರು.

ಇದಲ್ಲದೆ ದೆಹಲಿ ಮ್ಯಾಕನಿಕ್ ಶಾಪ್ ಒಂದಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಅಲ್ಲಿನ ಮೆಕಾನಿಕ್ಗಳೊಂದಿಗೆ ಕೆಲಸವನ್ನೂ ಮಾಡಿದ್ದರು. ಬಳಿಕ ಅವರೊಂದಿಗೆ ಸಂವಾದ ನಡೆಸಿ ಅವರ ಕಷ್ಟಗಳನ್ನು ಆಲಿಸಿದ್ದರು.
-
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications