EVM: ಎಲಾನ್ ಮಸ್ಕ್ ಹೇಳಿಕೆ ಬಳಿಕ ಇವಿಎಂ ಬಗ್ಗೆ ಭಾರಿ ಚರ್ಚೆ; ರಾಹುಲ್ ಗಾಂಧಿ ಹೇಳಿದ್ದೇನು?
ಇವಿಎಂ (ಎಲೆಕ್ಟ್ರಾನಿಕ್ ಮತಯಂತ್ರ) ಹ್ಯಾಕ್ ಆಗುವ ಬಗ್ಗೆ ಟೆಕ್ ಬಿಲಿಯನೇರ್ ಎಲಾನ್ ಮಸ್ಕ್ ಆತಂಕ ವ್ಯಕ್ತಪಡಿಸಿದ ಬಳಿಕ, ಭಾರತದಲ್ಲಿ ಕೂಡ ಇವಿಎಂ ಬಗ್ಗೆ ಚರ್ಚೆ ಮತ್ತೆ ಜೋರಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಈಗ ಚರ್ಚೆಗೆ ಧುಮುಕಿದ್ದು, ಇವಿಎಂಗಳನ್ನು "ಕಪ್ಪು ಪೆಟ್ಟಿಗೆ" ಎಂದು ಕರೆದಿದ್ದಾರೆ.
ಮುಂಬೈ ವಾಯುವ್ಯ ಲೋಕಸಭಾ ಕ್ಷೇತ್ರದ ಫಲಿತಾಂಶದ ಬಗ್ಗೆ ವರದಿಯನ್ನು ಉಲ್ಲೇಖಿಸಿದ್ದು, "ಭಾರತದಲ್ಲಿ ಇವಿಎಂಗಳು "ಕಪ್ಪು ಪೆಟ್ಟಿಗೆ", ಮತ್ತು ಅವುಗಳನ್ನು ಪರಿಶೀಲಿಸಲು ಯಾರಿಗೂ ಅವಕಾಶವಿಲ್ಲ. ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯ ಬಗ್ಗೆ ಗಂಭೀರ ಕಳವಳಗನ್ನು ವ್ಯಕ್ತಪಡಿಸಲಾಗುತ್ತಿದೆ" ಎಂದು ರಾಹುಲ್ ಗಾಂಧಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮುಂಬೈ ವಾಯುವ್ಯ ಲೋಕಸಭೆಯಲ್ಲಿ ವಿಜೇತ ಅಭ್ಯರ್ಥಿಯ ಸಂಬಂಧಿಕರು ಇವಿಎಂಗಳಿಗೆ ಸಂಪರ್ಕಗೊಂಡಿರುವ ಫೋನ್ ಬಳಸುತ್ತಿದ್ದಾರೆ ಎಂದು ಹೇಳಿದರು.
ಮುಂಬೈ ವಾಯವ್ಯ ಲೋಕಸಭೆಯಲ್ಲಿ 48 ಮತಗಳಿಂದ ಗೆದ್ದಿರುವ ರವೀಂದ್ರ ವಾಯ್ಕರ್ ಅವರ ಸೋದರ ಮಾವ ಮಂಗೇಶ್ ಪಾಂಡಿಲ್ಕರ್ ಜೂನ್ 4 ರಂದು ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಫೋನ್ ಬಳಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮತ ಎಣಿಕೆ ಕೇಂದ್ರದಲ್ಲಿ ಇವಿಎಂ ಯಂತ್ರವನ್ನು ಅನ್ಲಾಕ್ ಮಾಡಲು ಒಟಿಪಿ ಅಗತ್ಯ ಎಂದು ಮಿಡ್-ಡೇ ವರದಿ ಮಾಡಿದೆ. ಮೊಬೈಲ್ ಫೋನ್ ಕರೆ ದಾಖಲೆಗಳನ್ನು ಪರೀಕ್ಷಿಸಲು ಮತ್ತು ಅದನ್ನು ಇತರ ಉದ್ದೇಶಗಳಿಗೆ ಬಳಸಲಾಗಿದೆಯೇ ಎಂದು ಪರಿಶೀಲಿಸಲು ಫೊರೆನ್ಸಿಕ್ಸ್ಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎಲಾನ್ ಮಸ್ಕ್ ಹೇಳಿದ್ದೇನು?
ಎಲಾನ್ ಮಸ್ಕ್ ಅವರು ಇವಿಎಂಗಳ ಭದ್ರತೆಯನ್ನು ಪ್ರಶ್ನಿಸುವ ಮೂಲಕ ಚರ್ಚೆಯನ್ನು ಹುಟ್ಟುಹಾಕಿದರು. ನಾವು ವಿದ್ಯುನ್ಮಾನ ಮತಯಂತ್ರಗಳನ್ನು ತೊಡೆದುಹಾಕಬೇಕು. ಮಾನವರು ಅಥವಾ 'ಎಐ'ನಿಂದ ಹ್ಯಾಕ್ ಆಗುವ ಅಪಾಯವು ಚಿಕ್ಕದಾಗಿದ್ದರೂ ಸಹ ತುಂಬಾ ಹೆಚ್ಚಾಗಿರುತ್ತದೆ, ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದಕ್ಕೆ ಉತ್ತರ ನೀಡಿದ ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್, "ಭಾರತೀಯ ಇವಿಎಂಗಳು ಕಸ್ಟಮ್ ವಿನ್ಯಾಸ, ಸುರಕ್ಷಿತ ಮತ್ತು ಬ್ಲೂಟೂತ್, ವೈಫೈ, ಇಂಟರ್ನೆಟ್ ಯಾವುದೇ ನೆಟ್ವರ್ಕ್ ಅಥವಾ ಮಾಧ್ಯಮದಿಂದ ಪ್ರತ್ಯೇಕವಾಗಿರುತ್ತವೆ. ಫ್ಯಾಕ್ಟರಿ ಪ್ರೋಗ್ರಾಮ್ ಮಾಡಲಾದ ನಿಯಂತ್ರಕಗಳನ್ನು ಪುನರುತ್ಪಾದಿಸಲು ಸಾಧ್ಯವಿಲ್ಲ." ಎಂದು ಹೇಳಿದ್ದಾರೆ.
ಚಂದ್ರಶೇಖರ್ ಅವರು ಮಸ್ಕ್ಗೆ ಸುರಕ್ಷಿತ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಹೇಗೆ ವಿನ್ಯಾಸಗೊಳಿಸುವುದು ಮತ್ತು ನಿರ್ಮಿಸುವುದು ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. "ಯಾವುದನ್ನಾದರೂ ಹ್ಯಾಕ್ ಮಾಡಬಹುದು" ಎಂದು ಮಸ್ಕ್ ತನ್ನ ತನ್ನ ಆತಂಕವನ್ನು ವ್ಯಕ್ತಪಡಿಸಿದರು.
ಇವಿಎಂ ಬಳಕೆ ಬಗ್ಗೆ ಕಾಂಗ್ರೆಸ್ ಮೊದಲಿನಿಂದಲೂ ಆಕ್ಷೇಪ ವ್ಯಕ್ತಪಡಿಸುತ್ತಲೇ ಇದೆ. ಆದರೂ ಚುನಾವಣಾ ಆಯೋಗ, ಕಾಂಗ್ರೆಸ್ನ ಆರೋಪಗಳನ್ನು ತಳ್ಳಿಹಾಕಿದ್ದು, ಇವಿಎಂ ಹ್ಯಾಕ್ ಮಾಡುವುದನ್ನು ಸಾಬೀತು ಪಡಿಸುವಂತೆ ಕೇಳಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications