ಬಿಜೆಪಿ ವಿರುದ್ಧ ಸಿಡಿದು ನಿಂತ ಮಮತಾಗೆ ರಾಹುಲ್ ಗಾಂಧಿ ಪತ್ರ ಬೆಂಬಲ
ನವದೆಹಲಿ, ಜನವರಿ 18: ವಿರೋಧ ಪಕ್ಷಗಳನ್ನೆಲ್ಲಾ ಒಟ್ಟು ಸೇರಿಸಿ ಭಾರಿ ಸಮಾವೇಶದ ಮೂಲಕ ಬಿಜೆಪಿ ವಿರುದ್ಧ ರಣಕಹಳೆ ಊದಲು ಸಿದ್ದವಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ರಾಹುಲ್ ಗಾಂಧಿ ಬೆಂಬಲ ಸೂಚಿಸಿದ್ದಾರೆ.
ಮಮತಾ ಬ್ಯಾನರ್ಜಿ ಅವರಿಗೆ ಬಹಿರಂಗ ಪತ್ರ ಬರೆದಿರುವ ರಾಹುಲ್ ಗಾಂಧಿ ಅವರು, ಬಿಜೆಪಿ ವಿರುದ್ಧ, ಅದರ ಕೋಮುವಾದದ ವಿರುದ್ಧ ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ರಾಹುಲ್ ಹೇಳಿದ್ದಾರೆ.
ದೇಶದಾದ್ಯಂತ ಬಿಜೆಪಿಯ ಕೋಮುವಾದಿ ಧೋರಣೆಯ ಬಗ್ಗೆ ಕೋಟ್ಯಂತರ ಜನರಿಗೆ ಅಸಮಾಧಾನವಿದೆ. ಮೋದಿ ಅವರ ಆಡಳಿತದ ಬಗ್ಗೆ ರೋಸಿ ಹೋಗಿದ್ದಾರೆ. ಅವರಿಗೆ ವಿರೋಧ ಪಕ್ಷಗಳ ಒಗ್ಗೂಡುವಿಕೆ ಹೊಸ ಆಶಾಕಿರಣ ನೀಡಿದೆ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಕೊಲ್ಕತ್ತದ ಜನರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ, ನಮ್ಮ ಚಿಂತನೆಗೆ ಅವರು ಅಭೂತಪೂರ್ವ ಬೆಂಬಲ ಸೂಚಿಸುತ್ತಿದ್ದಾರೆ ಎಂದರು. ಮಮತಾ ದೀದಿ ಅವರಿಗೆ ಈ ನಿಟ್ಟಿನಲ್ಲಿ ನಾನು ಬೆಂಬಲ ಸೂಚಿಸುತ್ತಿದ್ದು, ಅವರು ಗಟ್ಟಿಯಾದ ಸಂದೇಶವನ್ನು ನೀಡಲಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ.
ಮಮತಾ ಬ್ಯಾನರ್ಜಿ ಅವರು ವಿರೋಧ ಪಕ್ಷಗಳನ್ನು ಒಟ್ಟು ಸೇರಿಸಿ ಭಾರಿ ಸಮಾವೇಶವನ್ನು ನಾಳೆ ಕೊಲ್ಕತ್ತದಲ್ಲಿ ಆಯೋಜಿಸಿದ್ದಾರೆ. ಎಸ್ಪಿ ಮುಖಂಡ ಅಖಿಲೇಶ್ ಯಾದವ್, ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಆರ್ಜೆಡಿ ಮುಖಂಡ ತೇಜಸ್ವಿ ಯಾದವ್, ಡಿಎಂಕೆ ಮುಖಂಡ ಎಂ.ಕೆ.ಸ್ಟಾಲಿನ್, ಎನ್ಸಿಪಿ ಮುಖಂಡ ಶರದ್ ಪವಾರ್, ರಾಜ್ಯದಿಂದ ದೇವೇಗೌಡ, ಕುಮಾರಸ್ವಾಮಿ ಅವರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಪರವಾಗಿ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ.
ಇದರ ಹೊರತಾಗಿ ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ, ಮಾಜಿ ಕೇಂದ್ರ ಸಚಿವ ಯಶವಂತ ಸಿನ್ಹಾ, ಅರುಣ್ ಶೌರಿ, ಪಾಟೀದಾರ್ ಮುಖಂಡ ಹಾರ್ದಿಕ್ ಪಟೇಲ್, ದಲಿತ ಮುಖಂಡ ಜಿಗ್ನೇಶ್ ಮೆವಾನಿ, ಜಾರ್ಖಂಡ್ ವಿಕಾಸ ಮೋರ್ಚಾದ ಬಾಬುಲಾಲ್ ಮರಾಂಡಿ ಅವರು ಸಹ ಸಮಾವೇಶದಲ್ಲಿ ಇರಲಿದ್ದಾರೆ.
-
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ -
ಅಮೆರಿಕ ಮತ್ತು ಬ್ರಿಟನ್ ನಡುವೆ ಬಿರುಕು, ಡೊನಾಲ್ಡ್ ಟ್ರಂಪ್ ತೀವ್ರ ಅಸಮಾಧಾನ | Operation Roaring Lion












Click it and Unblock the Notifications