ಟ್ವೀಟ್ ತಂದ ಆಪತ್ತು, ರಾಹುಲ್ ಗಾಂಧಿಗೆ ಮಕ್ಕಳ ಹಕ್ಕು ಆಯೋಗದಿಂದ ನೊಟೀಸ್
ಮುಂಬೈ, ಜೂನ್ 20: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮಹಾರಾಷ್ಟ್ರದ ಮಕ್ಕಳ ಹಕ್ಕು ಸಂರಕ್ಷಣಾ ಆಯೋಗ ನೊಟೀಸ್ ಜಾರಿ ಮಾಡಿದೆ.
ರಾಹುಲ್ ಗಾಂಧಿ ಅವರು ಅನ್ಯಾಯಕ್ಕೊಳಗಾಗಿರುವ ಮಕ್ಕಳ ಗುರುತು ಪತ್ತೆ ಆಗುವಂತೆ ಮಾಡಿದ್ದಾರೆಂದು ಆರೋಪಿಸಿರುವ ಮಹಾರಾಷ್ಟ್ರದ ಮಕ್ಕಳ ಹಕ್ಕು ಆಯೋಗವು ರಾಹುಲ್ ಗಾಂಧಿ ಅವರಿಗೆ ನೊಟೀಸ್ ಜಾರಿ ಮಾಡಿದೆ.
ಊರಿನ ಬಾವಿಯೊಳಗೆ ಈಜು ಹೊಡೆದರೆಂದು ಇಬ್ಬರು ಬಾಲಕರನ್ನು ವಿವಸ್ತ್ರಗೊಳಿಸಿ ಥಳಿಸುತ್ತಿರುವ ವಿಡಿಯೋ ಒಂದನ್ನು ರಾಹುಲ್ ಗಾಂಧಿ ಅವರು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು. ವಿಡಿಯೋದಲ್ಲಿ ಮಕ್ಕಳ ಮುಖ ಮರೆಮಾಚಿರಲಿಲ್ಲ ಇದೇ ಈಗ ವಿವಾದಕ್ಕೆ ಕಾರಣವಾಗಿದೆ.

ಮಕ್ಕಳು ವಿವಸ್ತ್ರರಾಗಿದ್ದರು, ಅಲ್ಲದೆ ಅವರನ್ನು ದಲಿತರು ಎಂದು ಗುರುತಿಸಲಾಗಿದೆ, ಹಾಗೂ ಅವರ ಮೇಲೆ ದೌರ್ಜನ್ಯ ನಡೆದಿದ್ದರೂ ಸಹ ಅವರ ಗುರುತನ್ನು ಮರೆಮಾಚದೆ ಹಾಗೆಯೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ ಎಂದು ಮಕ್ಕಳ ಕಲ್ಯಾಣ ಆಯೋಗ ಅಸಮಾಧಾನಗೊಂಡಿದೆ.
ಮುಂಬೈ ನಿವಾಸಿಯೊಬ್ಬರು ನೀಡಿರುವ ದೂರಿನ ಮೇಲೆ ಮಕ್ಕಳ ಹಕ್ಕು ಆಯೋಗವು ರಾಹುಲ್ ಗಾಂಧಿ ಹಾಗೂ ಟ್ವಿಟ್ಟರ್ ಸಂಸ್ಥೆಗೂ ನೊಟೀಸ್ ನೀಡಿದ್ದು, 10 ದಿನಗಳ ಒಳಗಾಗಿ ನೊಟೀಸ್ಗೆ ಉತ್ತರಿಸುವಂತೆ ಗಡುವು ನೀಡಿದೆ.

9400ಕ್ಕೂ ಅಧಿಕ ಶೇರ್ ಆಗಿದ್ದ ಈ ವಿಡಿಯೋ ಅನ್ನು ರಾಹುಲ್ ಗಾಂಧಿ ಅವರು ಜೂನ್ 15ರಂದು ಟ್ವೀಟ್ ಮಾಡಿದ್ದರು. ಇದೇ ವಿಡಿಯೋವನ್ನು ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ಸಹ ಟ್ವೀಟ್ ಮಾಡಿದ್ದರು.
ರಾಹುಲ್ ಗಾಂಧಿಗೆ ನೀಡಲಾಗಿರುವ ನೊಟೀಸ್ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ , 'ನೊಟೀಸ್ ಅನ್ನು ರಾಹುಲ್ ಗಾಂಧಿಗೆ ಅಲ್ಲ ಮಹಾರಾಷ್ಟ್ರದ ಮುಖ್ಯಮಂತ್ರಿಗೆ ಕಳುಹಿಸಬೇಕು, ದಲಿತ ಮಕ್ಕಳನ್ನು ರಕ್ಷಿಸುವ ಜವಾಬ್ದಾರಿಯನ್ನು ಅವರು ಮರೆತಿದ್ದಾರೆ' ಎಂದು ಹರಿಹಾಯ್ದಿದ್ದಾರೆ.
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ












Click it and Unblock the Notifications