ರೈನ್ ಕೋಟ್ ಟೀಕಾಸ್ತ್ರ: ಪ್ರಧಾನಿ ಹೇಳಿಕೆ ನಾಚಿಕೆಗೇಡು ಎಂದ ರಾಹುಲ್
ಪ್ರಸಕ್ತ ವರ್ಷದ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳು ಮಾಡಿದ್ದ ಭಾಷಣಕ್ಕೆ ವಂದನಾ ನಿರ್ಣಯಕ್ಕಾಗಿ ಕರೆಯಲಾಗಿದ್ದ ಲೋಕಸಭೆಯ ಅಧಿವೇಶದಲ್ಲಿ ಮೋದಿ,ರೈನ್ ಕೋಟ್ ಹಾಕಿಕೊಂಡು ಸ್ನಾನ ಮಾಡವುದು ಡಾ. ಸಿಂಗ್ ಅವರಿಗೆ ಚೆನ್ನಾಗಿ ಗೊತ್ತು ಎಂದಿದ್ದರು.
ನವದೆಹಲಿ, ಫೆಬ್ರವರಿ 9: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು 'ರೈನ್ ಕೋಟ್ ಹಾಕಿಕೊಂಡು ಸ್ನಾನ ಮಾಡಬಲ್ಲ ಕಲೆಯುಳ್ಳವರು' ಎಂದು ಹಗುರವಾಗಿ ಹಂಗಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನ ಘನತೆ, ಗೌರವಗಳಿಗೆ ಚ್ಯುತಿ ತಂದಿದ್ದಾರೆ. ಅವರ ನಡೆ, ನಾಚಿಕೆಗೇಡಿನದ್ದಾಗಿದೆ ಎಂದು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ವಯಸ್ಸಿನಲ್ಲಿ, ಅನುಭವದಲ್ಲಿ ತಮಗಿಂತ ಹಿರಿಯರಾದ ರಾಜಕಾರಣಿಯೊಬ್ಬರನ್ನು, ಅದರಲ್ಲೂ ಮಾಜಿ ಪ್ರಧಾನಿಯೊಬ್ಬರನ್ನು ಹಾಲಿ ಪ್ರಧಾನಿಯೊಬ್ಬರು ಹೀಗೆ ತುಚ್ಛವಾಗಿ ಲೇವಡಿ ಮಾಡಿದ್ದು ಭಾರತದ ಇತಿಹಾಸದಲ್ಲೇ ಇಲ್ಲ. ಮಾಜಿ ಪ್ರಧಾನಿಯೊಬ್ಬರನ್ನು ಹೀಗೆ ಅವಹೇಳನ ಮಾಡುವ ಮೂಲಕ ಪ್ರಧಾನಿ ಸ್ಥಾನಕ್ಕೂ ಅವರು ಅಪಮಾನ ಮಾಡಿದ್ದಾರೆ'' ಎಂದು ರಾಹುಲ್ ಗಾಂಧಿ ಕಿಡಿಕಾರಿದರು.[ರೈನ್ ಕೋಟ್ ಹಾಕ್ಕೊಂಡು ಸ್ನಾನ ಮಾಡೋದು ಸಿಂಗ್ ಗೆ ಗೊತ್ತು: ಮೋದಿ]

ಪ್ರಸಕ್ತ ವರ್ಷದ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳು ಮಾಡಿದ್ದ ಭಾಷಣಕ್ಕೆ ವಂದನಾ ನಿರ್ಣಯಕ್ಕಾಗಿ ಕರೆಯಲಾಗಿದ್ದ ಲೋಕಸಭೆಯ ಅಧಿವೇಶದಲ್ಲಿ ಮಾತನಾಡಿದ್ದ ಮೋದಿ, ಅಪನಗದೀಕರಣದ ಹಿನ್ನೆಲೆಯಲ್ಲಿ ರಾಷ್ಟ್ರದ ಹಣಕಾಸು ಪರಿಸ್ಥಿತಿ ಹಿನ್ನೆಡೆ ಕಂಡಿದ್ದನ್ನು ವಿರೋಧಿಸಿ ಆರೋಪ ಮಾಡಿದ್ದ ಡಾ. ಮನಮೋಹನ್ ಸಿಂಗ್ ಹಾಗೂ ಇನ್ನಿತರ ಕಾಂಗ್ರೆಸ್ಸಿಗರ ವಿರುದ್ಧ ಅವರು ಹರಿಹಾಯ್ದಿದ್ದರು.['ಕ್ಷಮೆ ಕೇಳೋ ತನಕ ಮೋದಿಯನ್ನು ಸಂಸತ್ ಪ್ರವೇಶಿಸಲು ಬಿಡೆವು']
ರೈನ್ ಕೋಟ್ ಹಾಕಿಕೊಂಡು ಮೈಗೆ ಒಂದು ಚೂರೂ ನೀರು ತಾಗದಂತೆ ಸ್ನಾನ ಮಾಡವುದು ಹೇಗೆಂಬುದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗಿಂತ ಚೆನ್ನಾಗಿ ಬಲ್ಲವರು ಮತ್ಯಾರೂ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
ಈ ಬಗ್ಗೆ ಕಾಂಗ್ರೆಸ್ಸಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಪ್ರಧಾನಿ ಕ್ಷಮೆ ಕೋರುವವರೆಗೂ ಅವರನ್ನು ಸಂಸತ್ತಿನೊಳಕ್ಕೆ ಕಾಲಿಡಲು ಬಿಡುವುದಿಲ್ಲ ಎಂದು ಘೋಷಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications