ಸತ್ಯ ಎಷ್ಟು ಸುಂದರವಾಗಿ ಹೊರಬರುತ್ತದೆ: ರಾಹುಲ್ ಗಾಂಧಿ ಲೇವಡಿ
ನವದೆಹಲಿ, ಫೆಬ್ರವರಿ 24: ಅಹಮದಾಬಾದ್ನ ಸರ್ದಾರ್ ಪಟೇಲ್ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಿದ್ದಕ್ಕಾಗಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಸತ್ಯ ತಾನಾಗಿಯೇ ಹೇಗೆ ಎಷ್ಟು ಸುಂದರವಾಗಿ ಬಹಿರಂಗವಾಗುತ್ತದೆ ನೋಡಿ ಎಂದಿರುವ ರಾಹುಲ್ ಗಾಂಧಿ, ಮೋದಿ ಸರ್ಕಾರವು ಕೆಲವು ಕೈಗಾರಿಕೋದ್ಯಮಿಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತದೆ ಎಂಬ ಆರೋಪವನ್ನು ಪರೋಕ್ಷವಾಗಿ ಪುನರುಚ್ಚರಿಸಿದ್ದಾರೆ.
Beautiful how the truth reveals itself.
— Rahul Gandhi (@RahulGandhi) February 24, 2021
Narendra Modi stadium
- Adani end
- Reliance end
With Jay Shah presiding.#HumDoHumareDo
'ಸತ್ಯ ತಾನಾಗಿಯೇ ಎಷ್ಟು ಸುಂದರವಾಗಿ ಬಹಿರಂಗವಾಗುತ್ತದೆ. ನರೇಂದ್ರ ಮೋದಿ ಕ್ರೀಡಾಂಗಣ. -ಅದಾನಿ ಎಂಡ್, -ರಿಲಯನ್ಸ್ ಎಂಡ್. ಜತೆಗೆ ಜೇ ಶಾ ಅಧ್ಯಕ್ಷತೆ' ಎಂದು ಬುಧವಾರ ಅಹಮದಾಬಾದ್ನ ಮೊಟೆರಾದಲ್ಲಿ ನಡೆದ ಕ್ರೀಡಾಂಗಣದ ಉದ್ಘಾಟನೆ ಬಳಿಕ ಟ್ವೀಟ್ ಮಾಡಿದ್ದಾರೆ. ಜತೆಗೆ 'ನಾವಿಬ್ಬರು, ನಮಗಿಬ್ಬರು' ಎಂಬ ತಮ್ಮ ಹಳೆಯ ಟೀಕೆಯನ್ನು ಹ್ಯಾಶ್ಟ್ಯಾಗ್ ರೂಪದಲ್ಲಿ ಬಳಸಿದ್ದಾರೆ.

'ಬಹುಶಃ ಬಿಜೆಪಿಯವರಿಗೆ ತಮ್ಮ ಪೋಷಕ ಸಂಸ್ಥೆ (ಆರೆಸ್ಸೆಸ್) ಅನ್ನು ನಿಷೇಧಿಸಿದ ಗೃಹಸಚಿವರ (ಸರ್ದಾರ್ ಪಟೇಲ್) ಹೆಸರು ಈ ಕ್ರೀಡಾಂಗಣಕ್ಕೆ ಇಡಲಾಗಿತ್ತು ಎನ್ನುವುದು ಈಗಷ್ಟೇ ಅರ್ಥವಾಗಿರಬೇಕು' ಎಂದು ಕಾಂಗ್ರೆಸ್ ಸಂಸದ ಶಸಿ ತರೂರ್ ವ್ಯಂಗ್ಯವಾಡಿದ್ದಾರೆ.
'ನರೇಂದ್ರ ಮೋದಿ ಸ್ಟೇಡಿಯಂ' ಎಂಬ ಹೊಸ ಹೆಸರು ಪಡೆದಿರುವ ಕ್ರೀಡಾಂಗಣದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ಮೂರನೇ ಕ್ರಿಕೆಟ್ ಟೆಸ್ಟ್ ಪಂದ್ಯ ನಡೆಯುತ್ತಿದ್ದು, ಇದು ಹಗಲು-ರಾತ್ರಿ ಪಂದ್ಯವಾಗಿದೆ. ಈ ಮೈದಾನದ ಒಂದು ಬೌಲಿಂಗ್ ತುದಿ 'ರಿಲಯನ್ಸ್ ಎಂಡ್' ಎಂದಿದ್ದರೆ ಇನ್ನೊಂದು ತುದಿ 'ಅದಾನಿ ಎಂಡ್' ಎಂದಿದೆ. ಇದು ವಿರೋಧಪಕ್ಷಗಳ ಟೀಕೆಗೆ ಗುರಿಯಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications