Hindenburg Research: ಹಿಂಡೆನ್ಬರ್ಗ್ ರಿಸರ್ಚ್ ಹಿಂದೆ ರಾಹುಲ್ ಗಾಂಧಿ- ಗಿರಿರಾಜ್ ಸಿಂಗ್
ದೆಹಲಿ ಆಗಸ್ಟ್ 13: ಹಿಂಡೆನ್ಬರ್ಗ್ ರಿಸರ್ಚ್ ದೇಶಕ್ಕೆ ಕೆಟ್ಟ ಹೆಸರು ತಂದಿದೆ. ಅಲ್ಲದೆ ಹಿಂಡೆನ್ಬರ್ಗ್ ರಿಸರ್ಚ್ ಕಾಂಗ್ರೆಸ್ನೊಂದಿಗೆ ಸೇರಿಕೊಂಡು ಇಂತಹ ಕೆಲಸ ಮಾಡುತ್ತಿದೆ. ಇದರಿಂದಾಗಿ ಹಿಂಡೆನ್ಬರ್ಗ್ ರಿಸರ್ಚ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.
ಹಿಂಡೆನ್ಬರ್ಗ್ ರಿಸರ್ಚ್ ದೇಶಕ್ಕೆ ಕೆಟ್ಟ ಹೆಸರು ತಂದ ತಂಡ. ಇದರಲ್ಲಿ ರಾಹುಲ್ ಗಾಂಧಿ ಹಾಗೂ ಜೈರಾಮ್ ರಮೇಶ್ ಇದ್ದಾರೆ. ಹಿಂಡನ್ ಬರ್ಗ್ ತಂಡದಿಂದ ದೇಶಕ್ಕಾದ ಅವಮಾನವನ್ನು ನಾವು ಸಹಿಸುವುದಿಲ್ಲ. ಇವರು ದೇಶದ ಶತ್ರುಗಳು. ಇದರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರಿಗೆ ರಾಜ್ಯ ಹಾಗೂ ದೇಶದ ನಿರ್ದೇಶನದ ಕುರಿತು ಯಾವುದೇ ತಿಳುವಳಿಕೆ ಇಲ್ಲ. ರಾಹುಲ್ ಗಾಂಧಿ ಅವರು 'ಶ್ರೀಮಂತನ ಮಗ' ಎಂದು ಗಿರಿರಾಜ್ ಸಿಂಗ್ ಕರೆದರು. ಅಲ್ಲದೆ, ಗೊಂದಲ ಹಾಗೂ ಭೀತಿ ಹುಟ್ಟಿಸಲು ಪ್ರಯತ್ನಿಸುವ ಇಂತಹ ಜನರ ಬಗ್ಗೆ ಜನರು ಎಚ್ಚರಿಕೆಯಿಂದಿರಬೇಕು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಹಿಂಡೆನ್ಬರ್ಗ್ ಹಿಂದಿದೆ. ಹಿಂಡೆನ್ಬರ್ಗ್ ಭಾರತವನ್ನು ನಾಶ ಮಾಡುವ ಟೂಲ್ ಕಿಟ್ ಆಗಿದೆ. ಇದರ ರೂವಾರಿ ರಾಹುಲ್ ಗಾಂಧಿ ಎಂದು ಅವರು ಆರೋಪಿಸಿದ್ದಾರೆ. ರಾಹುಲ್ ವಿದೇಶಕ್ಕೆ ಹೋಗಿ ದೇಶಕ್ಕೆ ಕಳಂಕ ತರುತ್ತಾರೆ. ಇವರು ಗೊಂದಲ ಹುಟ್ಟಿಸುತ್ತಾರೆ. ದೇಶಕ್ಕೆ ಇಂಥವರು ಕಂಟಕ, ಹೀಗಾಗಿ ಜನರು ಇಂಥವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications