ಆರೆಸ್ಸೆಸ್ಗೆ ಸತ್ಯ ಗೊತ್ತಿದೆ, ಆದರೆ ಹೇಳಲು ಭಯ: ರಾಹುಲ್ ಗಾಂಧಿ ಟೀಕೆ
ನವದೆಹಲಿ, ಅಕ್ಟೋಬರ್ 26: ನಾಗಪುರದಲ್ಲಿ ನಡೆದ ವಿಜಯದಶಮಿ ಉತ್ಸವದ ವೇಳೆ ಚೀನಾ ಕುರಿತು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿದ ಹೇಳಿಕೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.
'ಒಳಭಾಗದಲ್ಲಿ ಭಾಗವತ್ ಅವರಿಗೆ ಸತ್ಯ ಏನೆಂಬುದು ತಿಳಿದಿದೆ. ಆದರೆ ಅದನ್ನು ಎದುರಿಸಲು ಅವರು ಹೆದರಿದ್ದಾರೆ. ಸತ್ಯವೇನೆಂದರೆ ಚೀನಾವು ನಮ್ಮ ಭೂಮಿಯನ್ನು ವಶಪಡಿಸಿಕೊಂಡಿದೆ ಮತ್ತು ಸರ್ಕಾರ ಹಾಗೂ ಆರೆಸ್ಸೆಸ್ ಅದಕ್ಕೆ ಅವಕಾಶ ನೀಡಿದೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
'ಸೇನಾ ಸಿದ್ಧತೆಗಳ ವಿಚಾರದಲ್ಲಿ ಭಾರತವು ಚೀನಾವನ್ನು ಮೀರಿ ಬೆಳೆಯಬೇಕಿದೆ. ಚೀನಾದ ವಿಸ್ತರಣಾ ನೀತಿಗಳ ಬಗ್ಗೆ ಜಗತ್ತಿಗೆ ಅರಿವಿದೆ. ಚೀನಾದ ವಿಸ್ತರಣಾ ಆಕ್ರಮಣಗಳಿಗೆ ತೈವಾನ್ ಮತ್ತು ವಿಯೆಟ್ನಾಂ ಉದಾಹರಣೆ. ಅನೇಕ ದೇಶಗಳು ಈಗ ಚೀನಾ ವಿರುದ್ಧ ಸಿಡಿದೆದ್ದಿವೆ' ಎಂದು ಮೋಹನ್ ಭಾಗವತ್ ಹೇಳಿದ್ದರು.

'ನಮ್ಮ ರಕ್ಷಣಾ ಪಡೆಗಳು, ಸರ್ಕಾರ ಮತ್ತು ಜನರು ನಮ್ಮ ಪ್ರದೇಶಗಳನ್ನು ಅತಿಕ್ರಮಣ ಮಾಡುವ ಚೀನಾದ ಪ್ರಯತ್ನಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ತನ್ನ ನುಸುಳುವಿಕೆಯ ಪ್ರಯತ್ನಕ್ಕೆ ಭಾರತದ ಪ್ರತಿಕ್ರಿಯೆ ಕಂಡು ಚೀನಾ ದಂಗಾಗಿದೆ' ಎಂದು ಶ್ಲಾಘಿಸಿದ್ದರು.
'ಅದು ಹೇಗೆ ಪ್ರತಿಕ್ರಿಯಿಸುತ್ತದೆ ಎನ್ನುವುದು ನಮಗೆ ಗೊತ್ತಿಲ್ಲ. ಹೀಗಾಗಿ ನಮ್ಮ ಮುಂದೆ ಇರುವ ಗುರಿ ಎಚ್ಚರಿಕೆಯಿಂದ ಇರುವುದು ಮತ್ತು ಸಿದ್ಧರಾಗಿರುವುದು. ಚೀನಾ ವಿರುದ್ಧ ನಾವು ಸೇನಾ ಸಿದ್ಧತೆ, ಆರ್ಥಿಕ ಸನ್ನಿವೇಶ, ಅಂತಾರಾಷ್ಟ್ರೀಯ ಸಂಬಂಧಗಳು ಮತ್ತು ನೆರೆಯ ದೇಶಗಳೊಂದಿಗಿನ ಸಂಬಂಧಗಳ ವಿಚಾರಗಳಲ್ಲಿ ಹೆಚ್ಚು ಶಕ್ತಿಶಾಲಿಯಾಗಬೇಕು' ಎಂದಿದ್ದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications