ಯಮುನಾ ನದಿ ನೀರು ಕುಡಿತಿರಾ!: ಅರವಿಂದ್ ಕೇಜ್ರಿವಾಲ್ಗೆ 'ರಾಗಾ' ಸವಾಲ್, ಪ್ರಧಾನಿ ವಿರುದ್ಧ ವಾಗ್ದಾಳಿ
ನವದೆಹಲಿ, ಜನವರಿ 30: ದೆಹಲಿ ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗುತ್ತಿದೆ. ಚುನಾವಣೆ ಮೊದಲ ರಾಜಕೀಯ ಪಕ್ಷಗಳ ಪ್ರಮುಖ ನಾಯಕರ ಮಧ್ಯ ವಾಕ್ಸಮರ ಮುಂದುವರಿದಿದೆ. ಕಾಂಗ್ರೆಸ್ ಲೋಕಸಭಾ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಎಎಪಿ ಅರವಿಂದ್ ಕೇಜ್ರಿವಾಲ್ ಅವರು ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಕಾರ್ಯಕರ್ತ ಸಭೆ ಉದ್ದೇಶಿಸಿ ಮಾತನಾಡಿದ ಅರಾಹುಲ್ ಗಾಂಧಿ ಅವರು, ದೆಹಲಿಯ ಮಾಜಿ ಮುಖ್ಯಮಂತ್ರಿ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಕೇಜ್ರಿವಾಲ್ ಅವರಿಗೆ ಯಮುನಾ ನದಿಯ ನೀರು ಕುಡಿಯಲು ಸವಾಲು ಹಾಕಿದರು. ಕಾಂಗ್ರೆಸ್ ಅವಧಿಯಲ್ಲಿ ಶೀಲಾ ದೀಕ್ಷಿತ್ ನೇತೃತ್ವದಲ್ಲಿ ದೆಹಲಿಯಲ್ಲಿ ಒಂದೂವರೆ ದಶಕದಲ್ಲಿ ನಡೆದ ಅಭಿವೃದ್ಧಿ ಚಟುವಟಿಕೆ ಪ್ರಸ್ತಾಪಿಸಿ ಕುಟುಕಿದರು ಎಂದು ಎಎನ್ಐ ವರದಿ ಮಾಡಿದೆ.

ದೆಹಲಿ ಜನರಿಗೆ ಕೇಜ್ರಿವಾಲ್ ಮತ್ತು ಪ್ರಧಾನಿ ಮೋದಿ ಅವರು ಇಬ್ಬರೂ ಸುಳ್ಳು ಭರವಸೆಗಳನ್ನು ಘೋಷಿಸುತ್ತಿದ್ದಾರೆ. ಯಮುನಾ ನದಿಯಲ್ಲಿ ವಿಷ ಬೆರೆಸಿದ್ದಾರೆ. ಅದನ್ನು ಸ್ವಚ್ಛ ಮಾಡಿ ಕುಡಿಯುವುದಾಗಿ ಎಎಪಿ ನಾಯಕ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಃಏಳಿದ್ದರು. ನದಿ ಸ್ವಚ್ಛಗೊಳಿಸಿ ಅದರ ನೀರನ್ನು ಕುಡಿಯುವುದಾಗಿ ಭರವಸೆ ಕೊಟ್ಟಿದ್ದರು. ಐದು ವರ್ಷವಾದರೂ ಭರವಸೆ ಇಡೇರಿಲ್ಲ. ಈಗ ಯಮುನಾ ನದಿ ನೀರು ಕುಡಿಯುತ್ತಾರೆ ಎಂದು ಸವಾಲು ಹಾಕಿದರು.
ದೆಹಲಿಯಲ್ಲಿನ ಅಭಿವೃದ್ಧೀ, ಉದ್ಯೋಗ ಬಗ್ಗೆ ಮಾತನಾಡುವುದಾದರೆ, ಕಾಂಗ್ರೆಸ್ ಅವಧಿಯಲ್ಲಿ ಇಲ್ಲಿನ ರಸ್ತೆ ನಿರ್ಮಿಸಲಾಗಿದೆ. ಅಂದು ಮಹತ್ವದ ಅಭಿವೃದ್ಧಿ ಕೆಲಸಗಳು ನಡೆದಿವೆ. ಎಎಪಿ ನಾಯಕ ಕೇಜ್ರಿವಾಲ್ ಅವರು 'ಸ್ವಚ್ಛ ರಾಜಕೀಯ' ತರುವುದಾಗಿ ಘೋಷಿಸಿದ್ದರು. ಹೇಳಿಕೆಯ ವಿರುದ್ಧವಾಗಿ "ಅತಿದೊಡ್ಡ ಮದ್ಯ ಹಗರಣ"ವನ್ನು ಈ ರಾಜ್ಯದಲ್ಲಿ ನಡೆಸಿದ್ದಾರೆ ಎಂದು ಅವರು ಎಎಪಿ ಆಡಳಿತ ವೈಖರಿ ವಿವರಿಸಿದರು.
ದೆಹಲಿಯಲ್ಲಿ ಸ್ವಚ್ಛ ರಾಜಕೀಯ ತರುವುದಾಗಿ ಹೇಳುತ್ತಿದ್ದದ್ದ ಅರವಿಂದ್ ಕೇಜ್ರಿವಾಲ್ ಅವರು ರಾಜ್ಯದ ಅತಿದೊಡ್ಡ ಹಗರಣಕ್ಕೆ ಅವರು, ಅವರ ಪಕ್ಷ ತೊಡಗಿಕೊಂಡಿದೆ ಎಂಬಾ ಆರೋಪದಲ್ಲಿ ಸಿಲುಕಿದರು. ತನಿಖೆ ಎದುರಿಸಬೇಕಾಯಿತು. ಕೇಜ್ರಿವಾಲರು ಕಾರ್ಪೊರೇಟ್ ಸರ್ಕಾರ ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಇತ್ತ ರಾಜ್ಯದ ಜನರು ಕೊಳಕು ನೀರು ಕುಡಿಯುವ ವಿಚಾರದ ಬಂದಾಗ ಕೇಜ್ರಿವಾಲ್ 'ಶೀಶ್ ಮಹಲ್'ನಲ್ಲಿ ವಾಸಿಸುತ್ತಿದ್ದರು. ಸದ್ಯ ಚಿಕ್ಕ ಕಾರಿನಲ್ಲಿ ಓಡಾಡುತ್ತಿದ್ದ ಕೇಜ್ರಿವಾಲ್ ಇಂದು ಐಶಾರಾಮ ಮನೆ ಕಟ್ಟಿದ್ದಾರೆ. ಈಗ ದೆಹಲಿ ಚುನಾವಣೆಯಲ್ಲಿ ಮತ್ತೆ ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದರು.
ದೆಹಲಿಯಲ್ಲಿ ಫೆಬ್ರವರಿ 5ರಂದು ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 8ರಂದು ಚುನಾವಣಾ ಕಣದಲ್ಲಿರುವ 699 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಕಳೆದ ಎರಡು ಬಾರಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನ ಗೆದ್ದಿಲ್ಲ. ಈ ಬಾರಿ ಗೆಲುವಿನಗೆ ಹರಸಾಹ ಪಡುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications