ಕಾಂಗ್ರೆಸ್ಸಿಗೆ ಮೋಸ ಮಾಡಿದ ನಿತೀಶ್ : ರಾಹುಲ್ ವಾಗ್ದಾಳಿ
ನವದೆಹಲಿ, ಜುಲೈ 27 : ಸಂಜೆಗೆ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿ, ಮರುದಿನ ಬೆಳಿಗ್ಗೆಯೇ ಬಿಜೆಪಿ ಬೆಂಬಲದಿಂದ ನಿತೀಶ್ ಕುಮಾರ್ ಹೊಸ ಸರಕಾರ ರಚಿಸುತ್ತಿರುವುದು ಕಾಂಗ್ರೆಸ್ಸಿಗೆ ಮುಟ್ಟಿಕೊಂಡು ನೋಡುವಂಥ ಆಘಾತ ನೀಡಿದೆ.
ನಿತೀಶ್ ಕುಮಾರ್ ಅವರು ನನಗೆ ಮೋಸ ಮಾಡಿದ್ದಾರೆ. ಕೆಲ ಎರಡೇ ಎರಡು ದಿನಗಳ ಹಿಂದೆ ಭೇಟಿ ಮಾಡಿದ್ದಾಗಲೂ ರಾಜೀನಾಮೆ ನೀಡುವ ಬಗ್ಗೆ ಒಂದು ಮಾತನ್ನೂ ಹೇಳಿರಲಿಲ್ಲ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜೀನಾಮೆ ನೀಡಿ ಇಡೀ ಘಟಬಂಧನಕ್ಕೆ ನಿತೀಶ್ ಕುಮಾರ್ ಮೋಸ ಮಾಡಿದ್ದಾರೆ, ಘಟಬಂಧನಕ್ಕೆ ಬೆಂಬಲ ನೀಡಿದ್ದ ಕಾಂಗ್ರೆಸ್ಸಿನ ಬೆನ್ನಿಗೆ ನಿತೀಶ್ ಕುಮಾರ್ ಚೂರಿ ಹಾಕಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿಯನ್ನು ನಡೆಸಿದ್ದಾರೆ.

ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಮತ್ತು ಅವರನ್ನು ಬೆಂಬಲಿಸಿದ ಇತರ ಪಕ್ಷಗಳಿಗೆ ಮಾತ್ರ ಮೋಸ ಮಾಡಿಲ್ಲ, ಇಡೀ ಬಿಹಾರಕ್ಕೆ ಮೋಸ ಮಾಡಿದ್ದಾರೆ. ನಮ್ಮ ಬೆನ್ನ ಹಿಂದೆ ನಮ್ಮ ವಿರೋಧಿಗಳೊಂದಿಗೆ ಕೈಜೋಡಿಸಿದ್ದಾರೆ ಎಂದು ವಾಗ್ಬಾಣ ಬಿಟ್ಟಿದ್ದಾರೆ.
ಕೋಮುವಾದಿಗಳನ್ನು ಮಟ್ಟಹಾಕಲೆಂದು ಬಿಹಾರದ ಜನತೆ ನಿತೀಶ್ ಕುಮಾರ್ ಅವರ ನೇತೃತ್ವದ ಮಹಾಘಟಬಂಧನಕ್ಕೆ ಬಹುಮತ ನೀಡಿದ್ದರು. ಆದರೆ, ಜನರು ತಮ್ಮ ಸ್ವಾರ್ಥಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ ಎಂಬುದಕ್ಕೆ ಈ ಬೆಳವಣಿಗೆಯೇ ಸಾಕ್ಷಿ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಇದಕ್ಕೆ ಪ್ರತ್ಯುತ್ತರ ನೀಡಿರುವ ಜೆಡಿಯು, ರಾಹುಲ್ ಗಾಂಧಿ ಸುಳ್ಳು ಹೇಳುತ್ತಿದ್ದಾರೆ, ನಿತೀಶ್ ಕುಮಾರ್ ರಾಜೀನಾಮೆ ನೀಡಿ ಘಟಬಂಧನದಿಂದ ಹೊರಬರುವ ಬಗ್ಗೆ ರಾಹುಲ್ ಗಾಂಧಿಗೆ ಮೊದಲೇ ತಿಳಿಸಲಾಗಿತ್ತು ಎಂದು ತಿರುಗೇಟು ನೀಡಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications