Rahul Gandhi: ತಾಯಿಯ ಕ್ಷೇತ್ರ ಉಳಿಸಿಕೊಂಡು ವಯನಾಡು ಬಿಡ್ತಾರೆ ರಾಹುಲ್! ಹಾಗಾದ್ರೆ ಕೇರಳ ಸೀಟು ಯಾರ ಪಾಲು?
ತಿರುವನಂತಪುರಂ, ಜೂನ್. 06: ಸಕ್ರಿಯ ರಾಜಕೀಯ ತ್ಯಜಿಸುವಂಥ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ನ ಹಿರಿಯ ನಾಯಕ ಕೆ ಮುರಳೀಧರನ್ ಅವರನ್ನು ಸಮಾಧಾನಪಡಿಸಲು ಪಕ್ಷ ಹೊಸ ಕ್ರಮ ಕೈಗೊಳ್ಳುತ್ತಿದೆ. ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್ಬರೇಲಿಯ ಕುಟುಂಬದ ಸ್ಥಾನವನ್ನು ಉಳಿಸಿಕೊಂಡು ವಯನಾಡ್ ಅನ್ನು ಬಿಟ್ಟುಕೊಡುವ ಸಾಧ್ಯತೆಯಿದೆ. ಹೀಗಾಗಿ ಈ ಸ್ಥಾನವನ್ನು ಅವರಿಗೆ ನೀಡಲು ಯೋಚಿಸಲಾಗಿದೆ.
ಕೇರಳ ಕಾಂಗ್ರೆಸ್ನ ಹಿರಿಯ ನಾಯಕ ಕೆ ಮುರುಳೀಧರನ್ ಅವರನ್ನು ಸಮಾಧಾನಪಡಿಸುವುದು ಮತ್ತು ಚುನಾವಣಾ ಫಲಿತಾಂಶದ ಅವಲೋಕನಕ್ಕಾಗಿ ಪಕ್ಷದ ಸಭೆಗೆ ಹಾಜರಾಗುವುದನ್ನು ಖಚಿತಪಡಿಸಿಕೊಳ್ಳುವುದು ಕೇರಳ ಕಾಂಗ್ರೆಸ್ನ ಮೊದಲ ಆದ್ಯತೆಯಾಗಿದೆ. ಇದೆ ಕಾರಣಕ್ಕೆ ವಯನಾಡು ಕ್ಷೇತ್ರವನ್ನು ಅವರಿಗೆ ನೀಡಲು ಚಿಂತಿಸಲಾಗುತ್ತಿದೆ. ಜೂನ್ 10 ರಂದು ಕೇರಳ ವಿಧಾನಸಭೆ ಅಧಿವೇಶನ ಪ್ರಾರಂಭವಾಗುವ ಮುನ್ನ ಅವರನ್ನು ಸಕ್ರಿಯ ರಾಜಕಾರಣದಲ್ಲಿ ಕಟ್ಟಿಹಾಕಲು ಚಿಂತಿಸುತ್ತಿದೆ.

ಪ್ರಿಯಾಂಕಾ ಗಾಂಧಿ ಇಲ್ಲದಿದ್ದರೇ ಮುರಳೀಧರನ್!
ಈಗಾಗಲೇ ರಾಹುಲ್ ಗಾಂಧಿ ರಾಯ್ಬರೇಲಿಯನ್ನು ಉಳಿಸಿಕೊಳ್ಳು ಯೋಚಿಸುತ್ತಿರುವ ಬಗ್ಗೆ ಹಲವು ಚರ್ಚೆಗಳಾಗುತ್ತಿವೆ. ಕಳೆದ ಬಾರಿ ವಯನಾಡಿನಿಂದ ಸಂಸದರಾಗಿದ್ದ ಅವರು, ತಮ್ಮ ಅಜ್ಜಿ ಮತ್ತು ತಾಯಿಯ ಕ್ಷೇತ್ರ ಉತ್ತರ ಪ್ರದೇಶದ ರಾಯ್ಬರೇಲಿಯನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ. ಹಿಂದಿ ಮತದಾರರಿರುವ ಉತ್ತರ ಭಾರತದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಜೀವ ತರುವ ಕೆಲಸಕ್ಕಾಗಿ ರಾಹುಲ್ ಈ ನಿರ್ಧಾರ ಕೈಗೊಂಡಿದ್ದಾರೆ.
ಹೀಗಾಗಿ ವಯನಾಡು ಉಪಚುನಾವಣೆಯಲ್ಲಿ ಒಂದು ವೇಳೆ ಪ್ರಿಯಾಂಕಾ ಗಾಂಧಿ ಅವರು ವಯನಾಡ್ನಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ತೋರದಿದ್ದರೆ, ಮುರಳೀಧರನ್ ಅವರು ಅಲ್ಲಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂಬ ಊಹಾಪೋಹಗಳು ದಟ್ಟವಾಗಿವೆ. ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಅನಿರೀಕ್ಷಿತ ಸೋಲಿನಿಂದ ಆಘಾತಕ್ಕೊಳಗಾಗಿರುವ ಅವರನ್ನು ಸಮಾಧಾನ ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.
ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಮುರಳೀಧರನ್ ಅವರು ಈ ಬಾರಿಯೂ ವಡಕರ ಕ್ಷೇತ್ರದಿಂದ ಸ್ಪರ್ಧಿಸಿದರೆ ಗೆಲ್ಲುತ್ತಿದ್ದೆ ಎಂದು ಹೇಳಿದ್ದಾರೆ. ಬಳಿಕ ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಮತ್ತು ಸ್ವಲ್ಪ ಸಮಯದವರೆಗೆ ಸಾರ್ವಜನಿಕ ಜೀವನದಿಂದ ದೂರ ಉಳಿಯುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ಮಧ್ಯಸ್ಥಿಕೆ ವಹಿಸುತ್ತಿದ್ದಾರೆ.

ಕಳೆದ 36 ಗಂಟೆಗಳಲ್ಲಿ ಮುರಳೀಧರನ್ಗೆ ಸಾಂತ್ವನ ಹೇಳಲು ಕಾಂಗ್ರೆಸ್ನ ಹಿರಿಯ ನಾಯಕರು ಪರಸ್ಪರ ಪೈಪೋಟಿ ನಡೆಸಿದ್ದಾರೆ. ಆದರೆ, ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಕ್ಷದ ಟಿಕೆಟ್ ಸೇರಿದಂತೆ ಯಾವುದೇ ಭರವಸೆಯನ್ನು ಕಾಂಗ್ರೆಸ್ ರಾಜ್ಯ ನಾಯಕತ್ವವು ನೀಡಿಲ್ಲ ಎಂದು ಅವರು ತಿಳಿಸಿದ್ದಾರೆ.
ತ್ರಿಶೂರ್ನಲ್ಲಿ ಬಿಜೆಪಿಯ ಸುರೇಶ್ ಗೋಪಿ ಮುನ್ನಡೆ ನಡುವೆಯೂ ಮುರಳೀಧರನ್ ಅವರು ಕ್ರಿಶ್ಚಿಯನ್ ಮತ್ತು ಅಲ್ಪಸಂಖ್ಯಾತ ಮತದಾರರ ಬೆಂಬಲವನ್ನು ನಿರೀಕ್ಷಿಸಿದ್ದರಿಂದ ತ್ರಿಶೂರ್ನಿಂದ ಗೆಲ್ಲುವ ಭರವಸೆಯನ್ನು ಹೊಂದಿದ್ದರು. ಆದರೆ, ಸಿಪಿಎಂ ಭದ್ರಕೋಟೆ ಎಂದು ಕರೆಯಲ್ಪಡುವ ಒಲ್ಲೂರು ಮತ್ತು ಮಡಕತ್ತಾರದಲ್ಲಿ ಸುರೇಶ್ ಗೋಪಿ ಮುನ್ನಡೆ ಸಾಧಿಸಿದ್ದರಿಂದ ಅವರು ಸ್ವ ಪಕ್ಷದ ಮೇಲೆ ಆರೋಪ ಮಾಡಿದ್ದರು.
ಇತ್ತೀಚೆಗೆ ಬಿಜೆಪಿಗೆ ಸೇರಿರುವ ಕಾಂಗ್ರೆಸ್ ಮುಖಂಡ ದಿವಂಗತ ಕೆ ಕರುಣಾಕರನ್ ಅವರ ಪುತ್ರಿ ಪದ್ಮಜಾ ವೇಣುಗೋಪಾಲ್ ಅವರು, ತ್ರಿಶೂರ್ನಲ್ಲಿ ಎನ್ಡಿಎ ಗೆಲುವಿಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಕಾಂಜಿಲ್ಲಾ ಕಾಂಗ್ರೆಸ್ ಸಮಿತಿಯ ನಾಯಕರ ಗುಂಪು ನನ್ನನ್ನು ದುರ್ಬಲಗೊಳಿಸಿದೆ ಎಂದು ಆರೋಪಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications