ಮೋದಿ ಉಪನಾಪ ಪ್ರಕರಣ: ಕೆಳ ನ್ಯಾಯಾಲಯದ ಆದೇಶಕ್ಕೆ ಪಾಟ್ನಾ ಹೈಕೋರ್ಟ್ ತಡೆ
ಪಾಟ್ನಾ, ಏಪ್ರಿಲ್. 24 : 'ಮೋದಿ ಉಪನಾಮ' ಮಾನನಷ್ಟ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಆದೇಶವನ್ನು ಮೇ 15 ರವರೆಗೆ ತಡೆಹಿಡಿಯುವ ಮೂಲಕ ಪಾಟ್ನಾ ಹೈಕೋರ್ಟ್ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ರಿಲೀಫ್ ನೀಡಿದೆ.
Bihar | Patna High Court grants relief to Congress leader Rahul Gandhi staying the order of the lower court till May 15, 2023, in the 'Modi surname' case
— ANI (@ANI) April 24, 2023
The lower court of Patna had asked him to appear in court on April 12 and present his case. Against that order of the lower… pic.twitter.com/uKcwPLsZz7
ಇದಕ್ಕೂ ಮೊದಲು, 'ಮೋದಿ ಉಪನಾಮ' ಕುರಿತು 2019 ರ ರಾಹುಲ್ ಗಾಂಧಿಯವರ ಹೇಳಿಕೆಗಳ ವಿರುದ್ಧ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಕೆಳ ನ್ಯಾಯಾಲಯ ರಾಹುಲ್ ಗಾಂಧಿಗೆ ಖುದ್ದು ಹಾಜರಾಗುವಂತೆ ಸೂಚಿಸಿತ್ತು. ಏಪ್ರಿಲ್ 12 ರಂದು ನ್ಯಾಯಾಲಯಕ್ಕೆ ಹಾಜರಾಗಲು ಮತ್ತು ಅವರ ವಾದವನ್ನು ಮಂಡಿಸುವಂತೆ ಪಾಟ್ನಾದ ಕೆಳ ನ್ಯಾಯಾಲಯವು ಕಾಂಗ್ರೆಸ್ ನಾಯಕರಿಗೆ ಆದೇಶಿಸಿತ್ತು.

ಆದರೆ, ಏಪ್ರಿಲ್ 22 ರಂದು, ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುಶೀಲ್ ಕುಮಾರ್ ಮೋದಿ ಅವರು ತಮ್ಮ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ಕೆಳ ನ್ಯಾಯಾಲಯವು ಹೊರಡಿಸಿದ ಸಮನ್ಸ್ ಅನ್ನು ರದ್ದುಗೊಳಿಸುವಂತೆ ಕೋರಿ ರಾಹುಲ್ ಗಾಂಧಿ ಅವರು ಪಾಟ್ನಾ ಹೈಕೋರ್ಟ್ಗೆ ಮೊರೆ ಹೋಗಿದ್ದರು.
"ನಾವು ಸಮನ್ಸ್ ರದ್ದುಪಡಿಸುವ ಅರ್ಜಿಯನ್ನು ಸಲ್ಲಿಸಿದ್ದೇವೆ. ಒಂದು ವಿಷಯವು ಈಗಾಗಲೇ ಸೂರತ್ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗ, ಅದೇ ವಿಷಯದಲ್ಲಿ ಬೇರೆ ನ್ಯಾಯಾಲಯದಲ್ಲಿ ಮತ್ತೊಂದು ವಿಚಾರಣೆಯನ್ನು ನಡೆಸಲಾಗುವುದಿಲ್ಲ. ಇದು ಕಾನೂನುಬಾಹಿರವಾಗಿದೆ. ಮುಂದಿನ ವಿಚಾರಣೆ ಮೇ 15 ರಂದು ನಡೆಯಲಿದ್ದು, ಅಲ್ಲಿಯವರೆಗೆ ಕೆಳ ನ್ಯಾಯಾಲಯದ ಎಲ್ಲಾ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ" ಎಂದು ರಾಹುಲ್ ಗಾಂಧಿ ಪರ ವಕೀಲ ವೀರೇಂದ್ರ ರಾಥೋಡ್ ಎಎನ್ಐಗೆ ತಿಳಿಸಿದ್ದಾರೆ.
ರಾಹುಲ್ ಗಾಂಧಿಯವರ ಹೇಳಿಕೆಗಳ ಮೇಲೆ ಈಗಾಗಲೇ ಸೂರತ್ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ. ನಂತರ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಯಿತು. ಪ್ರೋಟೋಕಾಲ್ಗಳ ಪ್ರಕಾರ ಅವರು ಶನಿವಾರ ತಮ್ಮ ಅಧಿಕೃತ ತುಘಲಕ್ ಲೇನ್ನಲ್ಲಿರುವ ಬಂಗಲೆಯನ್ನು ಖಾಲಿ ಮಾಡಿದ್ದಾರೆ. 2004ರ ಲೋಕಸಭೆ ಚುನಾವಣೆಯಲ್ಲಿ ಅಮೇಠಿಯಿಂದ ಗೆದ್ದ ನಂತರ ಅವರಿಗೆ ಮೊದಲು ಬಂಗಲೆ ಮಂಜೂರು ಮಾಡಲಾಗಿತ್ತು.

ಕಾಂಗ್ರೆಸ್ ನಾಯಕ ತಮ್ಮ ಬಂಗಲೆಯನ್ನು ಖಾಲಿ ಮಾಡಿ ದೆಹಲಿಯಲ್ಲಿರುವ ತಾಯಿ ಸೋನಿಯಾ ಗಾಂಧಿಯವರ ನಿವಾಸಕ್ಕೆ ಸ್ಥಳಾಂತರಗೊಂಡಿದ್ದು, "ಸತ್ಯವನ್ನು ಮಾತನಾಡುವುದಕ್ಕೆ ಬೆಲೆ ತೆತ್ತಿರುವುದಾಗಿ" ಹೇಳಿದ್ದಾರೆ.
-
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications