ರಾಹುಲ್ ಗಾಂಧಿ ನೈಟ್ಕ್ಲಬ್ ವಿಚಾರ: ಬಿಜೆಪಿಗೆ ಮಹುವಾ ಮೊಯಿತ್ರಾ ಕ್ಲಾಸ್
ಕಠ್ಮಂಡು ಮೇ 04: ನೇಪಾಳದಲ್ಲಿ ರಾಹುಲ್ ಗಾಂಧಿ ಪಾರ್ಟಿ ಮಾಡುತ್ತಿರುವ ವಿಡಿಯೋ ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿದೆ. ಈ ವಿಡಿಯೋವನ್ನು ಟ್ವೀಟ್ ಮಾಡಿ ರಾಜಕೀಯ ಗದ್ದಲ ಸೃಷ್ಟಿಸಲು ಬಿಜೆಪಿ ಯತ್ನಿಸಿದ ಬೆನ್ನಲ್ಲೇ ತೃಣಮೂಲ ಸಂಸದೆ ಮಹುವಾ ಮೊಯಿತ್ರಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲಕ್ಕೆ ಮುಂದಾಗಿದ್ದಾರೆ.
Recommended Video
"ರಾಹುಲ್ ಗಾಂಧಿ ಅಥವಾ ಬೇರೆ ಯಾರಾದರೂ ಖಾಸಗಿ ಸಮಯದಲ್ಲಿ ನೈಟ್ಕ್ಲಬ್ನಲ್ಲಿದ್ದರೂ ಅಥವಾ ಮದುವೆಯಲ್ಲಿದ್ದರೂ ಅದು ತಪ್ಪೇ?," ಎಂದು ತೃಣಮೂಲ ಸಂಸದೆ ಟ್ವೀಟ್ ಮಾಡಿದ್ದಾರೆ. 2008ರ ಮುಂಬೈ ಸ್ಫೋಟದ ಸಂದರ್ಭದಲ್ಲೂ ರಾಹುಲ್ ಗಾಂಧಿ ನೈಟ್ಕ್ಲಬ್ನಲ್ಲಿ ಭಾಗಿಯಾಗಿದ್ದರು ಎಂದು ವಿಡಿಯೋ ಹಂಚಿಕೊಂಡಿರುವ ಬಿಜೆಪಿ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರನ್ನು ಮಹುವಾ ಮೊಯಿತ್ರಾ ಟೀಕಿಸಿದ್ದಾರೆ. "ಉತ್ತಮ ಕೆಲಸಗಳನ್ನು BJP ಟ್ರೋಲ್ ಮಾಡಲು ಮುಂದಾಗಬೇಕು. ಇದು ವ್ಯವಹರಿಸುವ ವಿಧಾನವೇ?" ಎಂದು ಪ್ರಶ್ನೆ ಮಾಡಿದ್ದಾರೆ.
How on earth is it anybody’s business whether @RahulGandhi or anybody else is in nightclub or at wedding in private time?
— Mahua Moitra (@MahuaMoitra) May 3, 2022
Sick @BJP trolls in charge should stick to doing what they do best- leading double lives with beer in teapots.
ಸ್ನೇಹಿತರೊಬ್ಬರ ಮದುವೆಗೆ ಆಹ್ವಾನದ ಮೇರೆಗೆ ರಾಹುಲ್ ಗಾಂಧಿ ನೇಪಾಳಕ್ಕೆ ತೆರಳಿದ್ದರು ಎಂದು ವಿಡಿಯೋ ವೈರಲ್ ಆದ ಬಳಿಕ ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿಕೆ ನೀಡಿ ವಿಡಿಯೋದ ಬಗ್ಗೆ ಸ್ಪಷ್ಟಪಡಿಸಿದ್ದರು. "ಆಕಸ್ಮಿಕವಾಗಿ, ಸ್ನೇಹಿತ ಕೂಡ ಪತ್ರಕರ್ತನಾಗುತ್ತಾನೆ" ಎಂದು ಸುರ್ಜೇವಾಲಾ ಹೇಳಿಕೆ ನೀಡಿದ್ದಾರೆ. "ಕೊನೆಯದಾಗಿ ನಾನು ಪರಿಶೀಲಿಸಿದ್ದೇನೆ, ಈ ದೇಶದಲ್ಲಿ ಕುಟುಂಬವನ್ನು ಹೊಂದುವುದು ಮತ್ತು ಸ್ನೇಹಿತರನ್ನು ಹೊಂದುವುದು, ಮದುವೆ ಮತ್ತು ನಿಶ್ಚಿತಾರ್ಥ ಸಮಾರಂಭಗಳಲ್ಲಿ ಪಾಲ್ಗೊಳ್ಳುವುದು ನಮ್ಮ ಸಂಸ್ಕೃತಿ ಮತ್ತು ನಾಗರಿಕತೆಯ ವಿಷಯವಾಗಿದೆ.
ಈ ದೇಶದಲ್ಲಿ ಮದುವೆಯಾಗುವುದು, ಯಾರೊಂದಿಗಾದರೂ ಸ್ನೇಹಿತರಾಗುವುದು ಇನ್ನೂ ಅಪರಾಧವಾಗಿಲ್ಲ. ರಾಹುಲ್ ಗಾಂಧಿ ಅವರು ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದಾರೆ. ಆದರೆ ಇನ್ಮುಂದೆ ಪ್ರಧಾನಿ ಮೋದಿ ಅಥವಾ ಬಿಜೆಪಿ ಮದುವೆಯಲ್ಲಿ ಭಾಗವಹಿಸುವುದು ಕಾನೂನುಬಾಹಿರ ಎಂದು ನಿರ್ಧರಿಸಬಹುದು. ಅವರು ಸ್ನೇಹಿತರನ್ನು ಹೊಂದಿರುವುದು ಅಥವಾ ಕುಟುಂಬದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಅಪರಾಧ ಎಂದು ಹೇಳಬಹುದು" ಎಂದು ಕುಟುಕಿದ್ದಾರೆ.

ನೇಪಾಳದ ದಿ ಕಠ್ಮಂಡು ಪೋಸ್ಟ್ ಪ್ರಕಾರ, ರಾಹುಲ್ ಗಾಂಧಿ ಸುಮ್ನಿನಾ ಉದಾಸ್ ಅವರ ಮದುವೆಯ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಮಾಜಿ ಸಿಎನ್ಎನ್ ವರದಿಗಾರ್ತಿ ಸುಮ್ನಿಮಾ ಅವರು ನಿಮಾ ಮಾರ್ಟಿನ್ ಶೆರ್ಪಾ ಅವರನ್ನು ವಿವಾಹವಾಗಲಿದ್ದಾರೆ. ಮಂಗಳವಾರದಂದು ಮದುವೆ ಕಾರ್ಯಕ್ರಮವನ್ನು ಯೋಜಿಸಲಾಗಿದ್ದು, ಮೇ 5 ರಂದು ಬೌದ್ದದಲ್ಲಿರುವ ಹಯಾತ್ ರೀಜೆನ್ಸಿ ಹೋಟೆಲ್ನಲ್ಲಿ ಆರತಕ್ಷತೆ ನಡೆಯಲಿದೆ. ಸುನ್ಮಿನಾ ದಾಸ್ ಅವರ ತಂದೆ ಮ್ಯಾನ್ಮಾರ್ನಲ್ಲಿ ನೇಪಾಳದ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು.

ವಿಡಿಯೊ ವೈರಲ್ ಆದ ತಕ್ಷಣ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರವನ್ನು ಪೋಸ್ಟ್ ಮಾಡಿದ್ದಾರೆ ಮತ್ತು "ಒಂದು ಕಾಲದಲ್ಲಿ ಭಾರತದಲ್ಲಿ ಮಾಜಿ ಪ್ರಧಾನಿ, ಭಾರತ ರತ್ನ, ದಿವಂಗತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರು ಪಾಕ್ ಅಧ್ಯಕ್ಷರೊಂದಿಗೆ ಪಾನೀಯವನ್ನು ಟೇಸ್ಟ್ ಮಾಡುತ್ತಿದ್ದುದನ್ನು ಗಮನಿಸಿದ್ದೇವೆ" ಎಂದು ಬರೆದಿದ್ದಾರೆ.

ಬಾಂಗ್ಲಾದೇಶದ ಲೇಖಕಿ ತಸ್ಲೀಮಾ ನಸ್ರೀನ್, "ರಾಜಕಾರಣಿಯೊಬ್ಬರು ನೈಟ್ಕ್ಲಬ್ಗೆ ಹೋದರೆ ಏನೂ ತಪ್ಪಿಲ್ಲ. ಸಂಸತ್ತಿನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡುವುದಕ್ಕಿಂತ ಇದು ಉತ್ತಮವಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications