ರಾಹುಲ್ ಗಾಂಧಿ, ಸ್ಟಾಲಿನ್, ಪ್ರಶಾಂತ್ ಕಿಶೋರ್ ಕೂಡ "ಪೆಗಾಸಸ್" ಗುರಿ...
ನವದೆಹಲಿ, ಜುಲೈ 20: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಹಾಗೂ ಮಾಹಿತಿ ತಂತ್ರಜ್ಞಾನದ ನೂತನ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಕೂಡ ಇಸ್ರೇಲ್ ಮೂಲದ ಗೂಢಚರ್ಯೆ "ಪೆಗಾಸಸ್" ಗುರಿಯಾಗಿಸಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ.
ಭಾರತದ ಪತ್ರಕರ್ತರು, ರಾಜಕಾರಣಿಗಳು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಇಸ್ರೇಲ್ನ ಪೆಗಾಸಸ್ ತಂತ್ರಾಂಶದ ಮೂಲಕ ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿಯನ್ನು "ದಿ ವೈರ್" ಸೋಮವಾರ ಬಹಿರಂಗಪಡಿಸಿತ್ತು.
ಕೆಲವು ಸಚಿವರು, ವಿರೋಧ ಪಕ್ಷಗಳ ನಾಯಕರು, ಕಾನೂನು ಕ್ಷೇತ್ರದವರು ಉದ್ಯಮಿಗಳು, ಅಧಿಕಾರಿಗಳು, ವಿಜ್ಞಾನಿಗಳು, ಮಾನವ ಹಕ್ಕುಗಳ ಕಾರ್ಯಕರ್ತರು ಸೇರಿ ಸುಮಾರು 300 ಭಾರತೀಯರ ಮೊಬೈಲ್ಗಳು ಹ್ಯಾಕ್ ಆಗಿವೆ ಎಂದು ವರದಿ ತಿಳಿಸಿತ್ತು.

ಈ ವರದಿ ಬೆನ್ನಲ್ಲೇ ವಿರೋಧ ಪಕ್ಷಗಳ ಮೂವರು ರಾಜಕಾರಣಿಗಳು, ಇಬ್ಬರು ಕೇಂದ್ರ ಸಚಿವರು, ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ, ನಲವತ್ತು ಪತ್ರಕರ್ತರು ಹಾಗೂ ಚುನಾವಣಾ ಆಯೋಗದ ಆಯುಕ್ತರ ಮೊಬೈಲ್ಗಳ ಮೇಲೆ ಪೆಗಾಸಸ್ ತಂತ್ರಾಂಶ ಬಳಸಿ ಕಣ್ಗಾವಲು ನಡೆಸುವ ಗುರಿ ಇತ್ತು ಎನ್ನುವ ಅಂಶ ತಿಳಿದುಬಂದಿದೆ.
ರಾಜಕಾರಣಿಗಳ ಪಟ್ಟಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಹೆಸರು ಕೇಳಿಬಂದಿದೆ. ನಿವೃತ್ತ ಚುನಾವಣಾ ಆಯುಕ್ತರಾದ ಅಶೋಕ್ ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಹಾಗೂ ಅಶ್ವನಿ ವೈಷ್ಣವ್ ಅವರನ್ನು ಗುರಿಯಾಗಿಸಿ ಕಣ್ಗಾವಲು ಇಡುವ ಪ್ರಯತ್ನ ನಡೆದಿತ್ತು ಎಂಬ ಮಾಹಿತಿ ತಿಳಿದುಬಂದಿದೆ.
ಈ ಸಾಫ್ಟ್ವೇರ್ ಅನ್ನು ಇಸ್ರೇಲ್ ಮೂಲದ ಎನ್ಎಸ್ಒ ತಯಾರಿಸಿದ್ದು, ಇದನ್ನು ಸರ್ಕಾರಗಳಿಗೆ ಮಾತ್ರ ಸರಬರಾಜು ಮಾಡಲಾಗುತ್ತದೆ ಎಂಬ ದೂರು ಕೂಡ ಕೇಳಿಬಂದಿದೆ.
ಆದರೆ ಇದಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರ, "ಭಾರತದಲ್ಲಿ ಪ್ರಭಾವಿಗಳನ್ನು ಗುರಿಯಾಗಿಸಿಕೊಂಡು ಬೇಹುಗಾರಿಗೆ ನಡೆಯುತ್ತಿದೆ ಎನ್ನುವ ಆರೋಪ ಆಧಾರರಹಿತ" ಎಂದು ಹೇಳಿತ್ತು.
2018-19ರ ಅವಧಿಯಲ್ಲಿ ಈ ಬೇಹುಗಾರಿಕೆ ಚಟುವಟಿಕೆ ನಡೆದಿರುವ ಸಾಧ್ಯತೆಯಿದೆ ಎಂದು "ದಿ ವೈರ್" ತಿಳಿಸಿದೆ.
ಫ್ರಾನ್ಸ್ನ ಫಾರ್ಬಿಡನ್ ಸ್ಟೋರೀಸ್ ಹಾಗೂ ಅಮ್ನೆಸ್ಟಿ ಇಂಟರ್ನ್ಯಾಷನಲ್ ನಡೆಸಿರುವ ತನಿಖಾ ಪತ್ರಿಕೋದ್ಯಮದ ಭಾಗವಾಗಿ ಈ ದತ್ತಾಂಶವನ್ನು ಹದಿನೈದು ಮಾಧ್ಯಮ ಸಂಸ್ಥೆಗಳ ಜೊತೆ ಹಂಚಿಕೊಳ್ಳಲಾಗಿದ್ದು, ದಿ ವೈರ್ ವರದಿಯನ್ನು ಪ್ರಕಟಿಸುತ್ತಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications