ದಲಿತರ ಮನೇಲಿ ವೆರೈಟಿ ಅಡುಗೆ ತಯಾರಿಗೆ ರಾಹುಲ್ ಹೆಲ್ಪ್!
ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದಲಿತರ ಮನೆಗೆ ಭೇಟಿ ನೀಡಿ ಭೋಜನ ತಯಾರಿಯಲ್ಲಿ ಜೊತೆಯಾಗಿದ್ದಾರೆ.
ಮಹಾರಾಷ್ಟ್ರದ ಕೊಲ್ಲಾಪುರದ ಅಜಯ್ ತುಕಾರಾಂ ಸನಡೆ ಮತ್ತು ಅಂಜನಾ ತುಕಾರಾಂ ಸನಡೆ ದಂಪತಿಯ ನಿವಾಸಕ್ಕೆ ಇತ್ತೀಚೆಗೆ ರಾಹುಲ್ ಭೋಜನಕ್ಕೆ ತೆರಳಿದ್ದರು. ಈ ವೇಳೆ ದಲಿತರ ಮನೆಯಲ್ಲಿ ಅವರು ಊಟ ಮಾಡಿರುವ ಬಗ್ಗೆ ಸಂವಾದದಲ್ಲಿ ಮಾತನಾಡಿ, ತಮ್ಮ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಮೊದಲಿಗೆ ರಾಹುಲ್ ಗಾಂಧಿ ಕೊಲ್ಲಾಪುರದಲ್ಲಿ ದಲಿತ ಕುಟುಂಬವನ್ನು ಭೇಟಿಯಾಗಿ ಖುದ್ದು ಅವರ ಅಡುಗೆ ಮನೆಗೆ ತೆರಳಿ, ಅಡುಗೆ ಮನೆಯಲ್ಲಿ ಅಡುಗೆಯೂ ಮಾಡಿ ಸವಿದಿದ್ದಾರೆ. ಈ ವೇಳೆ ಅವರು ಜಾತಿ ತಾರತಮ್ಯ, ಅಸ್ಪೃಶ್ಯತೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆಯೂ ನಡೆಸಿದ್ದಾರೆ.
दलित किचन के बारे में आज भी बहुत कम लोग जानते हैं। जैसा शाहू पटोले जी ने कहा, “दलित क्या खाते हैं, कोई नहीं जानता।”
— Rahul Gandhi (@RahulGandhi) October 7, 2024
वो क्या खाते हैं, कैसे पकाते हैं, और इसका सामाजिक और राजनीतिक महत्व क्या है, इस जिज्ञासा के साथ, मैंने अजय तुकाराम सनदे जी और अंजना तुकाराम सनदे जी के साथ एक दोपहर… pic.twitter.com/yPjXUQt9te
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರಾಹುಲ್ ಗಾಂಧಿ, ದಲಿತರ ಅಡುಗೆ ಮನೆಗಳ ಬಗ್ಗೆ ಇಂದಿಗೂ ಕೇವಲ ಕೆಲವೇ ಮಂದಿಗೆ ತಿಳಿದಿದೆ. ದಲಿತರು ಏನು ತಿನ್ನುತ್ತಾರೆ? ಅವರು ಅಡುಗೆ ಹೇಗೆ ಮಾಡುತ್ತಾರೆ? ಎನ್ನುವುದು ಅನೇಕರಿಗೆ ತಿಳಿದೇ ಇಲ್ಲ.
ನಾನು ಅಜಯ್ ತುಕಾರಾಂ ಸನಡೆ-ಅಂಜನಾ ತುಕಾರಾಂ ಸನಡೆ ಅವರೊಂದಿಗೆ ಮಧ್ಯಾಹ್ನದ ಊಟ ಸವಿದೆ. ಇವರು ನನ್ನನ್ನು ಕೊಲ್ಲಾಪುರದ ತಮ್ಮ ಅಡುಗೆಮನೆಯಲ್ಲಿ ಸಹಾಯ ಮಾಡಲು ಅನುವು ಮಾಡಿಕೊಡುವ ಮೂಲಕ ನನಗೆ ಆತಿಥ್ಯ ನೀಡಿದರು ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ನಾವು ಈ ದಂಪತಿ ಜೊತೆಗೆ ಸೇರಿ ಸಬ್ಜಿ, ಹರಭಾರಿಯಾಚಿ ಭಾಜಿ ಮತ್ತು ಬದನೆ ಕಾಯಿಯ ದಾಲ್ ಖಾದ್ಯಗಳನ್ನು ಸಿದ್ಧಪಡಿಸಿದೆ. ಅದು ತುಂಬಾ ರುಚಿಕರವಾಗಿತ್ತು ಎಂದಿದ್ದಾರೆ. ಸಂವಿಧಾನವು ಜನರಿಗೆ ಹಕ್ಕುಗಳನ್ನು ನೀಡಿದೆ. ನಾವು ಆ ಸಂವಿಧಾನವನ್ನು ರಕ್ಷಿಸುತ್ತೇವೆ. ಪ್ರತಿಯೊಬ್ಬ ಭಾರತೀಯನೂ ತಮ್ಮ ಹೃದಯದಲ್ಲಿ ಸಹೋದರತ್ವದ ಮನೋಭಾವ ಇಟ್ಟುಕೊಂಡಾಗ ಸಮಾನತೆ ಸಾಧ್ಯ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಬಳಿಕ ರಾಹುಲ್ ಗಾಂಧಿ ಅವರು ಆ ಕುಟುಂಬದೊಂದಿಗೆ ಕುಳಿತು ರುಚಿಕರವಾದ ಖಾದ್ಯಗಳನ್ನು ಸವಿಯುತ್ತಾ ಚರ್ಚೆ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ರಾಹುಲ್ ಗಾಂಧಿ ಈ ವಿಡಿಯೋ ಹಂಚಿಕೊಂಡಿದ್ದು, ಬಹುತೇಕರು ಇದಕ್ಕೆ ಮೆಚ್ಚುಗೆಯೂ ವ್ಯಕ್ತಪಡಿಸಿದ್ದಾರೆ.
ಕೆಲವರು ದಲಿತರೆಂದರೆ ಅಸ್ಪೃಶ್ಯರು ಎಂದು ಪರಿಗಣಿಸುತ್ತಾರೆ. ರಾಜಕಾರಣಿಗಳು ಕೂಡ ದಲಿತರನ್ನು ನಿರ್ಲಕ್ಷಿಸುತ್ತಾರೆ. ಆದರೆ, ರಾಹುಲ್ ಗಾಂಧಿ ಅವರು ದಲಿತರ ಮನೆಗೆ ತೆರಳಿ, ಅಡುಗೆಯೂ ಮಾಡಿ ಸವಿಯುವ ಮೂಲಕ ಮಾದರಿಯಾಗಿದ್ದಾರೆ ಎಂದು ಹಲವರು ಕಾಮೆಂಟ್ ಮಾಡುತ್ತಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications