Rahul Gandhi Nyay Yatra: ಇಂದಿನಿಂದ ಆರಭವಾದ 'ನ್ಯಾಯ್ ಯಾತ್ರೆ' ಬಗ್ಗೆ 'ರಾಗಾ' ಹೇಳಿದ್ದೇನು?
ಬೆಂಗಳೂರು, ಜನವರಿ 14: ಲೋಕಸಭಾ ಚುನಾವಣೆಗೂ ಮೊದಲು ರಾಮ ಮಂದಿರ ಉದ್ಘಾಟನೆಯಲ್ಲಿ ಬಿಜೆಪಿ ನಿರತವಾದರೆ, ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇಂದಿನಿಂದ ಮಣಿಪುರದಿಂದ ಮುಂಬೈವರೆಗೆ 'ಭಾರತ್ ಜೋಡೋ ನ್ಯಾಯ್ ಯಾತ್ರೆ' ಆರಂಭಿಸಿದ್ದಾರೆ. ಈ ಕುರಿತು ಭಾನುವಾರ ಸಂಜೆ ಅವರು ಧ್ವಜ ಹಿಡಿದು ಸಾಮಾಜಿಕ ಜಾಲತಾಣ X ನಲ್ಲಿ ಟ್ವೀಟ್ ಮಾಡಿದ್ದಾರೆ.
ಮಣಿಪುರದಿಂದ ಮುಂಬೈವರೆಗೆ ಒಟ್ಟು ಸುಮಾರು 6713 ಕಿಲೋ ಮೀಟರ್ ವರೆಗೆ ಯಾತ್ರೆ ಕೈಗೊಂಡಿರುವ ಅವರು, ಆ ಬಗ್ಗೆ ಮಾತನಾಡಿದ್ದಾರೆ. ''ದೇಶಾದ್ಯಂತ ನಡೆಯುತ್ತಿರುವ ಭೀಕರ ಅನ್ಯಾಯದ ವಿರುದ್ಧ ನ್ಯಾಯಕ್ಕಾಗಿ ಕೂಗಿ, ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದಿನಿಂದ ಆರಂಭವಾಗಿದೆ''

ಜನರ ನೋವು-ನಲಿವು ಜತೆ ಸಂಹವನ
''ನಾವು ಜನರ ಮಾತು ಕೇಳಲು ಬರುತ್ತಿದ್ದೇವೆಯೇ ಹೊರತು ನಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಅಲ್ಲ. ಜನರ ನೋವು-ನಲಿವುಗಳನ್ನು ಅರಿತು ಅವರೊಂದಿಗೆ ಸಂವಹನ ನಡೆಸಲಿದ್ದೇವೆ. ಅಲ್ಲದೇ ತಳಮಟ್ಟದ ಸಂವಾದದಿಂದ ಶಾಂತಿಯುತ, ಸಮೃದ್ಧ ಮತ್ತು ಶಕ್ತಿಯುತ ಭಾರತವನ್ನು ನಿರ್ಮಿಸುವ ದೃಷ್ಟಿ ಹೊಂದಿದ್ದೇವೆ'' ಎಂದರು.
'ಭಾರತದ ದೃಷ್ಟಿ'- ಇದು ಸಮಾನತೆ, ಸಹೋದರತ್ವ ಮತ್ತು ಸಾಮರಸ್ಯವನ್ನು ಆಧರಿಸಿದ್ದಾಗದೆ. ಇದರಲ್ಲಿ ದ್ವೇಷ, ಹಿಂಸೆ ಮತ್ತು ಏಕಸ್ವಾಮ್ಯಕ್ಕೆ ಸ್ಥಳವಿಲ್ಲ ಎಂದು ಅವರು ತಿಳಿಸಿದ್ದಾರೆ.
न्याय की हुंकार के रूप में, देश भर में हो रहे भयंकर अन्याय के विरुद्ध, आज से भारत जोड़ो न्याय यात्रा की शुरुआत हो चुकी है।
— Rahul Gandhi (@RahulGandhi) January 14, 2024
हम जन की बात सुनने आ रहे हैं, मन की बात सुनाने नहीं।
हम जनता का दुख-दर्द समझने, उनसे संवाद करने आ रहे हैं।
और इसी ज़मीनी संवाद से निकलेगा शांतिपूर्ण,… pic.twitter.com/E6R7NZUz0N
ಯಾತ್ರೆಯಿಂದ ಕಾಂಗ್ರೆಸ್ಗೆ ಪ್ರಯೋಜನ
ಈ ಮೂಲಕ ರಾಹುಲ್ ಗಾಂಧಿಯವರು ಮಣಿಪುರ ದಲ್ಲಿ ತಿಂಗಳುಗಳ ಕಾಲ ನಡೆ ಹಿಂಸಾಚಾರ, ಸಾವು, ನೋವು, ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಕುರಿತು ಸರ್ಕಾರದ ವಿರುದ್ಧ ಪ್ರಶ್ನೆ ಮಾಡಲು ಸಜ್ಜಾಗಿದ್ದಾರೆ. ಕೇಂದ್ರ ಆಡಳಿತದ ವಿರುದ್ಧ ಪಕ್ಷ ಗ್ಯಾರೆಂಟಿಗಳನ್ನು, ಅಭಿವೃದ್ಧಿ ಬಗ್ಗೆ ತಿಳಿಸಲಿದ್ದಾರೆ. ಜನರ ಅಹವಾಲು, ಸಮಸ್ಯೆಗಳನ್ನು ಸ್ಥಳದಲ್ಲಿದ್ದುಕೊಂಡು ತಿಳಿದುಕೊಳ್ಳಲಿದ್ದಾರೆ.

ರಾಹುಲ್ ಗಾಂಧಿಯವರು ಈ ಯಾತ್ರೆಯು ಪಾದಯಾತ್ರೆ ಮತ್ತು ವಾಹನ ಸಂಚಾರವು ಇದೆ. ಈ ಯಾತ್ರೆಯಿಂದ ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಕಾಂಗ್ರೆಸ್ಗೆ ವರದಾನ ವಾಗಲಿದೆ ಎಂಬ ವಿಶ್ವಾಸ ಕಾಂಗ್ರೆಸ್ಸಿಗರಲ್ಲಿ ಮನೆ ಮಾಡಿದೆ.
ಈ ಹಿಂದೆ ಕನ್ಯಾಕುಮಾರಿಯಿಂದ ಶ್ರೀನಗರವರೆಗೆ ರಾಹುಲ್ ಗಾಂಧಿಯವರು ಪಾದಯಾತ್ರೆ ಮಾಡಿದ್ದರು. ಅನೇಕ ರಾಜ್ಯಗಳ ಜನರನ್ನು ಭೇಟಿ ಮಾಡಿದ್ದರು. ಇದೀಗ ಮಣಿಪುರದಿಂದ ಮುಂಬೈವರೆಗೆ ಯಾತ್ರೆ. 2.0 ಆರಂಭಿಸಿದ್ದಾರೆ. ಇಂದು ಮಣಿಪುರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಧ್ವಜಾರೋಹಣ ಮೂಲಕ ಚಾಲನೆ ನೀಡಿದರು. ಸದ್ಯ ಎಲ್ಲರ ಚಿತ್ರ ರಾಹುಲ್ ಗಾಂಧಿಯವರು ಯಾತ್ರೆ, ಕಾರ್ಯಕ್ರಮ, ಭಾಷಣ ಮೇಲೆ ನೆಟ್ಟಿದೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications