Rahul Gandhi: ಸುಪ್ರೀಂ ಕೊರ್ಟ್ ಆದೇಶ ಬೆನ್ನಲ್ಲೆ 'ರಾಗಾ' ಲೋಕಸಭಾ ಅನರ್ಹತೆ ಆದೇಶ ವಾಪಾಸ್
ಬೆಂಗಳೂರು, ಆಗಸ್ಟ್ 07: ಮೋದಿ ಸರ್ನೇಮ್ ವಿವಾದದಿಂದಾಗಿ ಹೊರಡಿಸಲಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಅನರ್ಹತೆ ಆದೇಶವನ್ನು ಸಚಿವಾಲಯ ಸೋಮವಾರ ವಾಪಾಸ್ ಪಡೆದಿದೆ. ಈ ಮೂಲಕ ರಾಹುಲ್ ಗಾಂಧಿ ಅವರು ಸಂಸದರಾಗಿ ಮುಂದುವರಿಯಲಿದ್ದಾರೆ.
Lok Sabha Secretariat restores membership of Wayanad MP Rahul Gandhi after the Supreme Court on Friday (August 4) stayed his conviction in the ‘Modi’ surname remark case.
— ANI (@ANI) August 7, 2023
He was disqualified from the lower house in March 2023. pic.twitter.com/UBE3FvCGEN
ಭಾಷಣವೊಂದರಲ್ಲಿ ಪ್ರಧಾನಿ ಮೋದಿಯವರು ಸರ್ನೇಮ್ ಕುರಿತು ರಾಹುಲ್ ಗಾಂಧಿ ಅವರು ಟೀಕಿಸಿದ್ದರು. ಈ ಪ್ರಕರಣ ಸೂರತ್ ಹೈಕೋರ್ಟ್ ಮೆಟ್ಟಿಲೇರುತ್ತಿದ್ದಂತೆ ರಾಜಕೀಯ ಕಾವು ಪಡೆದುಕೊಂಡಿತು. ಬಳಿಕ ತೀರ್ಪಿನ ಮೇರೆಗೆ ಅವರಿಗೆ ಸಚಿವಾಲಯವು ಲೋಕಸಭಾ ಸದಸ್ಯ ಸ್ಥಾನಕ್ಕೆ ಅನರ್ಹರು ಎಂದು ಹೇಳಿ ಆದೇಶ ಹೊರಡಿಸಿತು. ರಾಹುಲ್ ಗಾಂಧಿ ಶಿಕ್ಷೆಗೂ ಗುರಿಯಾದರು.

ಈ ಶಿಕ್ಷೆ ಆದೇಶಿ ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಇತ್ತೀಚೆಗೆ ಸುಪ್ರೀಂ ಕೋರ್ಟ್ ನ್ಯಾಯಪೀಠವು ಸೂರತ್ ಹೈಕೋರ್ಟ್ ನೀಡಿದ್ದ ಜೈಲು ಶಿಕ್ಷೆ ಆದೇಶಕ್ಕೆ ತಡೆಯಾಜ್ಞೆ ನೀಡಿತು. ಇದರಿಂದ ರಾಹುಲ್ ಗಾಂಧಿ ಬಿಗ್ ರಿಲೀಫ್ ಸಿಕ್ಕಂತಾಯಿತು. ಇದರ ಬೆನ್ನಲ್ಲೆ ಅವರ ಸದಸ್ಯತ್ವ ಅನರ್ಹಗೊಳಿಸಿದ್ದನ್ನು ರದ್ದು ಮಾಡುವಂತೆ ಆಗ್ರಹ ಕೇಳಿ ಬಂದಿತ್ತು. ಅದರಂತೆ ಕೇಂದ್ರ ಸಚಿವಾಲಯವು ಸೋಮವಾರ ತನ್ನ ಅರ್ಹತೆ ಆದೇಶವನ್ನು ವಾಪಸ್ ಪಡೆದಿದೆ.
ಅರ್ಹತೆ ಆದೇಶ ವಾಪಾಸ್ ಪಡೆಯುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ (ಟ್ವಿಟ್ಟರ್ X ನಲ್ಲಿ) #Rahul is Back ಎಂದು ಟ್ರೆಂಡ್ ಸೃಷ್ಟಿಯಾಗಿತ್ತು. ಅಲ್ಲದೇ ಸುಪ್ರೀಂ ಕೋರ್ಟ್ ಆದೇಶ ಹೊರ ಬೀಳುತ್ತಿದ್ದಂತೆ ಕರ್ನಾಟಕದ ನಾಯಕರ ಆದಿಯಾಗಿ ದೆಹಲಿ ಹೈಕಮಾಂಡ್ ವರೆಗೂ ಅನೇಕ ನಾಯಕರು ಆದಷ್ಟು ಶೀಘ್ರವೇ ರಾಹುಲ್ ಗಾಂಧಿಯವರ ಅನರ್ಹತೆ ಆದೇಶ ವಾಪಾಸಾತಿಗೆ ಒತ್ತಾಯಿಸಿದ್ದರು. ಇದೆಲ್ಲ ಬೆಳವಣಿಗೆಯಿಂದ ಕೇಂದ್ರ ಬಿಜೆಪಿಗೆ ಭಾರಿ ಮುಖಭಂಗವಾಗಿದೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications