ಸೂಟು ಬೂಟಿನ ಮೋದಿ ಸರ್ಕಾರಕ್ಕೆ ಧಿಕ್ಕಾರ: ರಾಹುಲ್
ನವದೆಹಲಿ, ಏ.20: ಭಾನುವಾರ ರೈತರ ಸಮಾವೇಶದಲ್ಲಿ ಗುಡುಗಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಮತ್ತೊಮ್ಮೆ ಅಬ್ಬರಿಸಿದ್ದಾರೆ. ಸುರ್ಮಾರು ಎರಡು ತಿಂಗಳುಗಳ ನಂತರ ಸಂಸತ್ ಪ್ರವೇಶಿಸಿದ ರಾಹುಲ್ ಅವರು ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದರು.
ಬಜೆಟ್ ಅಧಿವೇಶನದಲ್ಲಿ ಭೂಸ್ವಾಧೀನ ತಿದ್ದುಪಡಿಗೆ ಮೋದಿ ಅವರ ಎನ್ ಡಿಎ ಸರ್ಕಾರ ಲೋಕಸಭೆಯಲ್ಲಿ ಅಂಗೀಕಾರ ಪಡೆಯುವಲ್ಲಿ ಯಶಸ್ವಿಯಾಗಿತ್ತು. ಆದರೆ, ರಾಜ್ಯಸಭೆಯಲ್ಲಿ ಸೂಕ್ತ ಬೆಂಬಲ ಸಿಗದ ಕಾರಣ ಏ. 23 ರಿಂದ ಆರಂಭವಾಗುವ ರಾಜ್ಯಸಭೆಯಲ್ಲಿ ಅದಕ್ಕೆ ಅಂಗೀಕಾರ ಪಡೆಯುವ ನಿರೀಕ್ಷೆ ಹೊತ್ತಿದೆ. ["ಮೋದಿಗೆ ಸಿಕ್ತು ಮೌಕಾ ಮಾಡಿದ್ದೆಲ್ಲ ದೋಖಾ"]
ಅದರೆ, ಇದಕ್ಕೂ ಮೊದಲು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ ಭಾರಿ ವಿರೋಧ ವ್ಯಕ್ತಪಡಿಸಿದೆ. ಇದಕ್ಕೆ ಜನತಾ ಪರಿವಾರದ 6 ಪಕ್ಷಗಳು ಬೆಂಬಲ ಸೂಚಿಸಿವೆ.
16ನೇ ಲೋಕಸಭೆ ಕಲಾಪದಲ್ಲಿ ಮೊದಲ ಬಾರಿಗೆ ಭಾಷಣ ಮಾಡಿದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಮೊಟ್ಟ ಮೊದಲ ಭಾಷಣದಲ್ಲೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು. ಸೂಟು- ಬೂಟುಧಾರಿಗಳ ಶ್ರೀಮಂತರ ಪರ ಸರ್ಕಾರದಿಂದ ರೈತರ ಏಳಿಗೆ ಎಂದಿಗೂ ಸಾಧ್ಯವಿಲ್ಲ ಎಂದರು.

ಸಂಸತ್ತಿನಲ್ಲಿ ರಾಹುಲ್ ಮಾತಾಡಿದ್ದೇ ಕಡಿಮೆ
ಸೋಮವಾರ(ಏ.20) ಭೂಸ್ವಾಧೀನ ತಿದ್ದುಪಡಿ ಮಸೂದೆಗೆ ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತದ ಚರ್ಚೆ ವೇಳೆ ರಾಹುಲ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. 11ವರ್ಷಗಳ ಅವಧಿಯಲ್ಲಿ ರಾಹುಲ್ ಗಾಂಧಿಯ 3ನೇ ಸುದೀರ್ಘ ಭಾಷಣ ಇದಾಗಿದೆ.

ಕಾರ್ಪೋರೇಟ್ ವಲಯಕ್ಕಾಗಿ ಸರ್ಕಾರ ದುಡಿಯುತ್ತಿದೆ
ಕಾರ್ಪೋರೇಟ್ ವಲಯಕ್ಕಾಗಿ ಸರ್ಕಾರ ದುಡಿಯುತ್ತಿದೆ. ರೈತರ ಭೂಮಿ ಉದ್ಯಮಿಗಳು, ಕಾರ್ಪೊರೇಟ್ ಗಳ ಪಾಲಾಗುತ್ತಿದೆ. ರೈತರಿಗೆ ಅನ್ಯಾಯವಾಗುತ್ತಿದೆ. ರೈತರ ಕಷ್ಟವನ್ನು ಸರ್ಕಾರದ ಪ್ರತಿನಿಧಿಗಳು ಕಣ್ಣಾರೆ ಕಾಣಬೇಕು. ರೈತರು ಯಾರ ಮೇಲೂ ನಂಬಿಕೆ ಇಡಬೇಡಿ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದು ನಿಮಗೆ ನೆನಪಿರಬಹುದು. ರೈತರೇ ಈ ಕೇಂದ್ರ ಸರ್ಕಾರದ ಮೇಲೂ ನಂಬಿಕೆ ಇಡಬೇಡಿ ಎಂದು ರಾಹುಲ್ ಕರೆ ನೀಡಿದರು.

ಬೆಳೆ ಹಾನಿ ಕುರಿತ ವರದಿ ಎಲ್ಲಿದೆ?
ಸರ್ಕಾರ ಏಕೆ ಬೆಳೆ ಹಾನಿ ಕುರಿತ ವರದಿಯನ್ನು ತಿರಸ್ಕರಿಸುತ್ತಿದೆ ಎಂದು ರಾಹುಲ್ ಪ್ರಶ್ನಿಸಿದರು. ನಿಮ್ಮ ಪ್ರಧಾನಿ ಎಂದು ಎನ್ ಡಿಎ ಸದಸ್ಯರತ್ತ ಬೊಟ್ಟು ಮಾಡಿ ತೋರಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತವಾದಾಗ. ಅಫ್ ಕೋರ್ಸ್ ಅವರು ದೇಶದ ಪ್ರಧಾನಿ ಹಾಗೆ ನಿಮ್ಮ ಪ್ರಧಾನಿ ಕೂಡಾ ಎಂದು ಹಾಸ್ಯದ ನಗೆ ಉಕ್ಕಿಸಿದರು.
ರೈತರು ಮತ್ತು ಕಾರ್ಮಿಕರನ್ನು ನಿರ್ಲಕ್ಷಿಸುತ್ತಿದೆ
ರೈತರಿಂದ ದೇಶದಲ್ಲಿ ಹಸಿರು ಕ್ರಾಂತಿ ನಡೆದಿದೆ. ಆದರೆ ಕೇಂದ್ರ ಸರ್ಕಾರ ರೈತರು ಮತ್ತು ಕಾರ್ಮಿಕರನ್ನು ನಿರ್ಲಕ್ಷಿಸುತ್ತಿದೆ ಎಂದು ರಾಹುಲ್ ಪ್ರಶ್ನಿಸಿದರು.
|
ಮತ್ತೆ ಟ್ರೆಂಡಿಂಗ್ ನಲ್ಲಿ ರಾಹುಲ್ ಗಾಂಧಿ
ಮತ್ತೆ ಟ್ವಿಟ್ಟರ್ ಟ್ರೆಂಡಿಂಗ್ ನಲ್ಲಿ ರಾಹುಲ್ ಗಾಂಧಿ #rahulroar ಎಂದು ಹ್ಯಾಶ್ ಟ್ಯಾಗ್ ಜನಪ್ರಿಯ ಪಡೆದುಕೊಂಡಿದೆ.
|
ತಮ್ಮ ಭಾಷಣದ ಬಗ್ಗೆ ರಾಹುಲ್ ಹೇಳಿದ್ದೇನು?
ಭಾಷಣ ಚೆನ್ನಾಗಿತ್ತು ಆದರೆ, ನನ್ನ ಪ್ರಶ್ನೆಗಳಿಗೆ ಉತ್ತರ ಸಿಗಲಿಲ್ಲ
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications