BMC Election 2026: ರಾಹುಲ್ ಗಾಂಧಿಗೆ ಸೋಲಿನ ಭೀತಿ: ಪ್ರಜಾಪ್ರಭುತ್ವ ಅಸ್ತ್ರ ಬಳಕೆ
ನವದೆಹಲಿ: ಮಹಾರಾಷ್ಟ್ರದ ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಗೆ ಬಹುಮತ ಸಿಗಲಿದೆ ಎಂಬ ಎಕ್ಸಿಟ್ ಪೋಲ್ 2026 ಫಲಿತಾಂಶ ಬೆನ್ನಲ್ಲೆ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರು ಮತ ಕಳ್ಳತನ ಬಗ್ಗೆ ಮತ್ತೆ ಮಾತನಾಡಿದ್ದಾರೆ. ಚುನಾವಣಾ ಆಯೋಗದ ಮೇಲೆ ಗರಂ ಆಗಿರುವ ಅವರು, ಪ್ರಜಾಪ್ರಭುತ್ವದ ಮೇಲಿನ ಜನರ ನಂಬಿಕೆ ಕುಸಿದಿದೆ ಎಂದು ವಾಗ್ದಾಳಿ ನಡೆಸಿದರು.
ಬೃಹನ್ ಮುಂಬೈ ಮಹನಗರ ಪಾಲಿಕೆ ಸೇರಿ 28 ನಾಗರಿಕ ಸಂಸ್ಥೆಗಳ ಚುನಾವಣೆ ಫಲಿತಾಂಶ ಇಂದು ಜನವರಿ 16ರಂದು ಶುಕ್ರವಾರ ಹೊರ ಬೀಳಲಿದೆ. ನೆನ್ನೆ ಗುರುವಾರ ಚುನಾವಣೆ ನಡೆದಿದ್ದು, ಮತದಾನ ಮಾಡುವ ಮತದಾರರಿಗೆ ಕೈಗೆ ಹಾಕುವ ಶಾಹಿ ಗುರುತು ಅಳಿಸಬಹುದಾಗಿದೆ ಎಂಬ ಆರೋಪಗಳು ಕೇಳಿ ಬಂದವು. ಇದಕ್ಕೆ ಸಂಬಂಧಿಸಿದಂತೆ ಮಾಧ್ಯಮ ವರದಿಗಳನ್ನು ರಾಹುಲ್ ಗಾಂಧಿ ಅವರು ಎಕ್ಸ್ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಪಾರದರ್ಶಕತೆ, ಚುನಾವಣೆ ಆಯೋಗದ ವೈಫಲ್ಯ ಹೀಗೆ ಹಲವು ವಿಚಾರಗಳ ಕುರಿತು ಮಾತನಾಡಿದ್ದಾರೆ. ಚುನಾವಣೆ ಆಯೋಗ ಅಳಿಸಬಹುದಾದ ಶಾಹಿಯನ್ನು ಬಿಎಂಸಿ ಚುನಾವಣೆಯಲ್ಲಿ ಬಳಸಿದೆ. "ವೋಟ್ ಚೋರಿ" ಒಂದು ರಾಷ್ಟ್ರವಿರೋಧಿ ಕೃತ್ಯವಾಗಿದೆ. ಚುನಾವಣೆ ಆಯೋಗದ ಈ ಕೆಲಸವು ಪ್ರಜಾಪ್ರಭುತ್ವದ ಮೇಲಿನ ನಂಬಿಕೆ ಕುಸಿಯಲು ಪ್ರಮುಖ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ಈ ಚುನಾವಣೆ ಹೊತ್ತಿನಲ್ಲಿ ಕೆಲವು ನಾಯಕರು ಅಳಿಸಬಹುದಾದ ಶಾಹಿ ಕುರಿತು ಆರೋಪಿಸಿದ್ದರು. ಸದರಿ ಪಾಲಿಕೆ ಚುನಾವಣೆಯಲ್ಲಿ ಅಳಿಸಬಹುದಾದ ಶಾಯಿಯನ್ನು ಬಳಸಲಾಗಿದೆ ಎಂಬ ದೂರುಗಳ ಬಂದಿವೆ. ಹೀಗಾಗಿ ಮಹಾರಾಷ್ಟ್ರ ರಾಜ್ಯ ಚುನಾವಣಾ ಆಯೋಗ (SEC) ಗುರುವಾರ ತನಿಖೆಗೆ ಆದೇಶಿಸಿತು. ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ ಈ ವಿಷಯ ಪ್ರಸ್ತಾಪಿಸಿ "ಗೊಂದಲ ಸೃಷ್ಟಿಸುವವರ" ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಚುನಾವಣಾ ಆಯುಕ್ತರ ಅಮಾನತಿಗೆ ಆಗ್ರಹ
ರಾಜ್ಯ ಚುನಾವಣಾ ಆಯುಕ್ತ ದಿನೇಶ್ ವಾಘ್ಮೋರೆ ಅವರು ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದೊಂದಿಗೆ "ಬಹಿರಂಗವಾಗಿ ಒಲವು ತೋರುತ್ತಿದ್ದಾರೆ" ಎಂದು ಉದ್ಧವ್ ಠಾಕ್ರೆ ನೇರ ಆರೋಪ ಮಾಡಿದರು. ಇಂತಹ ಅಧಿಕಾರಿಗಳನ್ನು ಅಮಾನತುಗೊಳಿಸಬೇಕೆಂದು ಅವರು ಒತ್ತಾಯಿಸಿದರು.
ತನಿಖೆಗೆ ಚುನಾವಣೆ ಆಯುಕ್ತರ ಘೋಷಣೆ
ಇದೆಲ್ಲ ಆರೋಪ, ಗೊಂದಲಗಳ ಬಳಿಕ ವಾಘ್ಮೋರೆ ಅವರು ಅಳಿಸಬಹುದಾದ ಚುನಾವಣಾ ಶಾಯಿಯ ಕುರಿತ ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುವುದೆಂದು ತಿಳಿಸಿದರು. ಈ ಶಾಹಿಯನ್ನು ಅಸಿಟೋನ್ ಅಥವಾ ಉಗುರು ಬಣ್ಣವು ಅದನ್ನು ತೆಗೆದು ಹಾಕಬಹುದು ಎಂಬ ಆರೋಪಗಳನ್ನು ಅವರು ನಿರಾಕರಿಸಿದರು. ಶಾಯಿಯನ್ನು ತೆಗೆದುಹಾಕಲು ಅಥವಾ ಮತದಾರರಲ್ಲಿ ಗೊಂದಲ ಉಂಟು ಮಾಡಿದರೆ ಯಾರೇ ಆಗಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದರು.
ಬಿಎಂಸಿ ಚುನಾವಣೆಯಲ್ಲಿ ಒಟ್ಟು 227 ಸೀಟುಗಳಲ್ಲಿ 131-151 ಸ್ಥಾನಗಳನ್ನು ಬಿಜೆಪಿ ನೇತೃತ್ವದ ಎನ್ಡಿಎ ಗೆಲ್ಲುವ ಸಾಧ್ಯತೆ ಇದೆ ಎಂದ ಬಳಿಕ ರಾಹುಲ್ ಗಾಂಧಿ ಅವರು ಆರೋಪ ಹೇಳಿಕೆಯು ಮಹತ್ವ ಪಡೆದುಕೊಂಡಿದೆ. ಚುನಾವಣೆಯ ಮತ ಎಣಿಕೆ ಇಂದು ಶುಕ್ರವಾರ ಆರಂಭವಾಗಿದೆ. ಇಂದೇ ಅಧಿಕೃತ ಫಲಿತಾಂಶ ಬೀಳಲಿದೆ.
-
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications