Get Updates
Get notified of breaking news, exclusive insights, and must-see stories!

Rahul Gandhi Speech: ನೀವು ಭಾರತ ಮಾತೆಯ ಹಂತಕರು: ಬಿಜೆಪಿ ನಾಯಕರ ವಿರುದ್ಧ ರಾಹುಲ್‌ ಗಾಂಧಿ ತೀವ್ರ ವಾಗ್ದಾಳಿ

ನವದೆಹಲಿ, ಆಗಸ್ಟ್‌ 09: ಮಣಿಪುರದ ವಿಚಾರವಾಗಿ ಸದನದಲ್ಲಿಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಾತನಾಡಿದ್ದಾರೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. 'ನೀವು ಭಾರತ ಮಾತೆಯ ಹಂತಕರು' ಎಂದು ಹೇಳುವ ಮೂಲಕ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಲೋಕಸಭೆಯಲ್ಲಿ ವಾಗ್ಯುದ್ಧಕ್ಕೆ ಕಾರಣವಾಗಿದೆ.

'ಭಾರತ ಒಂದು ಧ್ವನಿಯಾಗಿದೆ. ಅದು ಹೃದಯದ ಧ್ವನಿ. ನೀವು ಮಣಿಪುರದಲ್ಲಿ ಆ ಧ್ವನಿಯನ್ನು ಕೊಂದಿದ್ದೀರಿ. ನೀವು ಮಣಿಪುರದಲ್ಲಿ ಭಾರತ ಮಾತೆಯನ್ನು ಕೊಂದಿದ್ದೀರಿ. ನೀವು ದೇಶದ್ರೋಹಿಗಳು. ನನ್ನ ತಾಯಿ ಇಲ್ಲಿ ಕುಳಿತಿದ್ದಾರೆ. ನನಗೆ ಇನ್ನೊಂದು ತಾಯಿ ಭಾರತ ಮಾತಾ. ನೀವು ಮಣಿಪುರದಲ್ಲಿ ಅವಳನ್ನು ಕೊಂದಿದ್ದೀರಿ. ಆದ್ದರಿಂದಲೇ ಪ್ರಧಾನಿ ಮಣಿಪುರಕ್ಕೆ ಭೇಟಿ ನೀಡುವುದಿಲ್ಲ. ನೀವು ಭಾರತ ಮಾತೆಯ ರಕ್ಷಕರಲ್ಲ, ನೀವು ಆಕೆಯ ಹಂತಕರು' ಎಂದು ರಾಹುಲ್‌ ಹೇಳಿದ್ದಾರೆ.

rahul-gandhi-speech-in-lok-sabha

'ಪ್ರಧಾನಿ ಅವರು ಮಣಿಪುರಕ್ಕೆ ಹೋಗಿಲ್ಲ ಏಕೆಂದರೆ ಅವರು ಅದನ್ನು ಭಾರತದ ಭಾಗವೆಂದು ಪರಿಗಣಿಸುವುದಿಲ್ಲ. ನೀವು (ಬಿಜೆಪಿ) ಮಣಿಪುರವನ್ನು ವಿಭಜಿಸಿದ್ದೀರಿ' ಎಂದು ತಿಳಿಸಿದ್ದಾರೆ.

ರಾವಣನನ್ನು ರಾಮ ಕೊಲ್ಲಲಿಲ್ಲ. ಆದರೆ, ಆತನ ದುರಹಂಕಾರವೇ ರಾವಣನನ್ನು ಕೊಂದಿತು. ನೀವು ಎಲ್ಲೆಡೆ ಸೀಮೆಎಣ್ಣೆ ಎರಚಿದ್ದೀರಿ, ನೀವು ಮಣಿಪುರಕ್ಕೆ ಬೆಂಕಿ ಹಚ್ಚಿದ್ದೀರಿ, ನೀವು ಈಗ ಹರಿಯಾಣದಲ್ಲಿ ಅದೇ ಪ್ರಯತ್ನ ಮಾಡುತ್ತಿದ್ದೀರಿ ಎಂದು ತಿಳಿಸಿದ್ದಾರೆ.

ಈ ದೇಶವು ದುರಹಂಕಾರವನ್ನು ಸಹಿಸುವುದಿಲ್ಲ. ಕೆಲವೇ ದಿನಗಳಲ್ಲಿ, ಹಳೆಯ ಗಾಯವು ಮರುಕಳಿಸಿದೆ. ನಾನು ನೋವು ಅನುಭವಿಸುತ್ತಿದ್ದೇನೆ ಎಂದು ಅವರು ಹೇಳಿದರು.

ಇದೇ ವೇಳೆ, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ನಿರಾಶ್ರಿತರಾದವರಿಗೆ ಆಶ್ರಯ ನೀಡಲು ಸ್ಥಾಪಿಸಲಾದ ಪರಿಹಾರ ಶಿಬಿರಗಳಲ್ಲಿ ಇಬ್ಬರು ಮಹಿಳೆಯರೊಂದಿಗೆ ನಡೆಸಿದ ಸಂವಾದದ ಕುರಿತು ರಾಹುಲ್‌ ಗಾಂಧಿ ಮಾತನಾಡಿದರು.

ರಾಷ್ಟ್ರದ ಧ್ವನಿಯನ್ನು ಕೇಳಲು, ನಾವು ದುರಹಂಕಾರ ಮತ್ತು ದ್ವೇಷವನ್ನು ತ್ಯಜಿಸಬೇಕಾಗುತ್ತದೆ ಎಂದು ಬಿಜೆಪಿ ನಾಯಕರಿಗೆ ರಾಹುಲ್‌ ಗಾಂಧಿ ಹೇಳಿದರು.

rahul-gandhi-speech-in-lok-sabha

ಹಿಂಸಾಚಾರ ಪೀಡಿತ ಮಣಿಪುರಕ್ಕೆ ನಮ್ಮ ಪ್ರಧಾನಿ ಮೋದಿ ಭೇಟಿ ನೀಡಿಲ್ಲ. ಅವರಿಗೆ ಮಣಿಪುರ ಭಾರತದ ಭಾಗವಲ್ಲ ಎಂದು ಇದೇ ವೇಳೆ ಹರಿಹಾಯ್ದರು.

ಮಣಿಪುರ ಎರಡು ಹೋಳಾಗಿದೆ. ಸರ್ಕಾರದ ರಾಜಕೀಯ ಮಣಿಪುರದಲ್ಲಿ ಭಾರತವನ್ನು ಕೊಲೆ ಮಾಡಿದೆ ಎಂದು ರಾಹುಲ್‌ ಟೀಕಿಸಿದರು.

ಮಣಿಪುರದ ಜನರನ್ನು ಕೊಲ್ಲುವ ಮೂಲಕ, ನೀವು ಭಾರತ ಮಾತೆಯ ಹಂತಕರಾಗಿದ್ದೀರಿ. ನೀವು ದೇಶದ್ರೋಹಿಗಳು, ದೇಶಭಕ್ತರಲ್ಲ ಎಂದು ರಾಹುಲ್‌ ಕಿಡಿ ಕಾರಿದರು.

ನೀವು ಯಾತ್ರೆಯನ್ನು (ಭಾರತ್ ಜೋಡೋ ಯಾತ್ರೆ) ಏಕೆ ಆರಂಭಿಸಿದ್ದೀರಿ ಎಂದು ಜನರು ನನ್ನನ್ನು ಕೇಳುತ್ತಿದ್ದರು. ನಾನು ಈ ದೇಶವನ್ನು ಅರ್ಥಮಾಡಿಕೊಳ್ಳಲು ಯಾತ್ರೆಯನ್ನು ಪ್ರಾರಂಭಿಸಿದೆ ಎಂದು ಜನರಿಗೆ ಹೇಳುತ್ತಿದ್ದೆ. 10 ವರ್ಷಗಳಿಂದ ನನ್ನನ್ನು ಏಕೆ ನಿಂದಿಸಲಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾನು ಬಯಸುತ್ತೇನೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಅವಿಶ್ವಾಸ ಗೊತ್ತುವಳಿ ಮೇಲಿನ ಮೂರು ದಿನಗಳ ಚರ್ಚೆ ಮಂಗಳವಾರದಂದು ಬಿರುಸಿನ ಚರ್ಚೆಗಳ ಮೂಲಕ ಆರಂಭಗೊಂಡಿದೆ. ವಿರೋಧ ಪಕ್ಷಗಳ ಪರ ಚರ್ಚೆ ಆರಂಭಿಸಿದ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು 'ಒನ್ ಇಂಡಿಯಾ' ಕುರಿತು ಮಾತನಾಡಿದರು. ಒನ್‌ ಇಂಡಿಯಾದಲ್ಲಿ 'ಎರಡು ಮಣಿಪುರ'ಗಳನ್ನು ಬಿಜೆಪಿ ಸರ್ಕಾರ ಹುಟ್ಟುಹಾಕಿದೆ ಎಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+