Get Updates
Get notified of breaking news, exclusive insights, and must-see stories!

ಪ್ರವಾಹಪೀಡಿತ ಕೇರಳಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ

Recommended Video

      ಕೇರಳದ ಪ್ರವಾಹ ಪೀಡಿತ ಸ್ಥಳಗಳಿಗೆ ಆಗಸ್ಟ್ 28ರಂದು ಭೇಟಿ ಕೊಡಲಿದ್ದಾರೆ ರಾಹುಲ್ ಗಾಂಧಿ | Oneindia Kannada

      ತಿರುವನಂತಪುರಂ, ಆಗಸ್ಟ್ 27: ಪ್ರವಾಹದಿಂದ ತತ್ತರಿಸಿರುವ ಕೇರಳಕ್ಕೆ ಆಗಸ್ಟ್ 28 ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ.

      ಮಂಗಳವಾರದಂದು ಕೇರಳ ರಾಜಧಾನಿ ತಿರುವನಂತಪುರಂ ಗೆ ಆಗಮಿಸಲಿರುವ ರಾಹುಲ್ ಗಾಂಧಿ, ನಂತರ ಪ್ರವಾಹಪೀಡಿತ ಸ್ಥಳಗಳಾದ ಚೆಂಗನ್ನೂರ್, ಆಲಪ್ಪಿ, ಅಂಗಮಲಿ ಮುಂತಾದೆಡೆ ಭೇಟಿ ನೀಡಲಿದ್ದಾರೆ.

      ಎರಡು ದಿನಗಳ ಕಾಲ ಕೇರಳದ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಲಿರುವ ರಾಹುಲ್ ಗಾಂಧಿ, ಆ.29 ರಂದು ವೈನಾಡಿಗೆ ತೆರಳಿ, ಪರಿಸ್ಥಿತಿ ಅವಲೋಕಸಲಿದ್ದಾರೆ. ಆಗಸ್ಟ್ 24 ರಂದೇ ರಾಹುಲ್ ಗಾಂಧಿ ಅವರ ಕೇರಳ ಪ್ರವಾಸ ನಿಗದಿಯಾಗಿತ್ತಾದರೂ, ಅವರು ವಿದೇಶಿ ಪ್ರವಾಸದಲ್ಲಿದ್ದಿದ್ದರಿಂದ ಅದನ್ನು ಮುಂದೂಡಲಾಗಿತ್ತು.

      Rahul Gandhi to visit flood-hit Kerala on August 28

      ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಕೇರಳಕ್ಕೆ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಿದ್ದರು. ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹಕ್ಕೆ ಇದುವರೆಗೂ ಸುಮಾರು 350 ಕ್ಕೂ ಹೆಚ್ಚು ಜನ ಮೃತರಾಗಿದ್ದು, ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+