ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರವಾಹಪೀಡಿತ ಕೇರಳಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ

|
Google Oneindia Kannada News

Recommended Video

ಕೇರಳದ ಪ್ರವಾಹ ಪೀಡಿತ ಸ್ಥಳಗಳಿಗೆ ಆಗಸ್ಟ್ 28ರಂದು ಭೇಟಿ ಕೊಡಲಿದ್ದಾರೆ ರಾಹುಲ್ ಗಾಂಧಿ | Oneindia Kannada

ತಿರುವನಂತಪುರಂ, ಆಗಸ್ಟ್ 27: ಪ್ರವಾಹದಿಂದ ತತ್ತರಿಸಿರುವ ಕೇರಳಕ್ಕೆ ಆಗಸ್ಟ್ 28 ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ.

ಮಂಗಳವಾರದಂದು ಕೇರಳ ರಾಜಧಾನಿ ತಿರುವನಂತಪುರಂ ಗೆ ಆಗಮಿಸಲಿರುವ ರಾಹುಲ್ ಗಾಂಧಿ, ನಂತರ ಪ್ರವಾಹಪೀಡಿತ ಸ್ಥಳಗಳಾದ ಚೆಂಗನ್ನೂರ್, ಆಲಪ್ಪಿ, ಅಂಗಮಲಿ ಮುಂತಾದೆಡೆ ಭೇಟಿ ನೀಡಲಿದ್ದಾರೆ.

ಕೇರಳ ಪ್ರವಾಹ: ಹವಾಮಾನ ವೈಪರೀತ್ಯದ ಗಂಡಾಂತರದ ಮುನ್ಸೂಚನೆಯೇ?ಕೇರಳ ಪ್ರವಾಹ: ಹವಾಮಾನ ವೈಪರೀತ್ಯದ ಗಂಡಾಂತರದ ಮುನ್ಸೂಚನೆಯೇ?

ಎರಡು ದಿನಗಳ ಕಾಲ ಕೇರಳದ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಲಿರುವ ರಾಹುಲ್ ಗಾಂಧಿ, ಆ.29 ರಂದು ವೈನಾಡಿಗೆ ತೆರಳಿ, ಪರಿಸ್ಥಿತಿ ಅವಲೋಕಸಲಿದ್ದಾರೆ. ಆಗಸ್ಟ್ 24 ರಂದೇ ರಾಹುಲ್ ಗಾಂಧಿ ಅವರ ಕೇರಳ ಪ್ರವಾಸ ನಿಗದಿಯಾಗಿತ್ತಾದರೂ, ಅವರು ವಿದೇಶಿ ಪ್ರವಾಸದಲ್ಲಿದ್ದಿದ್ದರಿಂದ ಅದನ್ನು ಮುಂದೂಡಲಾಗಿತ್ತು.

ಸಂತ್ರಸ್ತರಿಗೆ ಪಿಗ್ಗಿ ಬ್ಯಾಂಕ್ ಮುಡುಪಿಟ್ಟ ಕಂದಮ್ಮಗಳು ಸಂತ್ರಸ್ತರಿಗೆ ಪಿಗ್ಗಿ ಬ್ಯಾಂಕ್ ಮುಡುಪಿಟ್ಟ ಕಂದಮ್ಮಗಳು

Rahul Gandhi to visit flood-hit Kerala on August 28

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಕೇರಳಕ್ಕೆ ಭೇಟಿ ನೀಡಿ ವೈಮಾನಿಕ ಸಮೀಕ್ಷೆ ನಡೆಸಿದ್ದರು. ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹಕ್ಕೆ ಇದುವರೆಗೂ ಸುಮಾರು 350 ಕ್ಕೂ ಹೆಚ್ಚು ಜನ ಮೃತರಾಗಿದ್ದು, ಲಕ್ಷಾಂತರ ಜನ ನಿರಾಶ್ರಿತರಾಗಿದ್ದಾರೆ.

English summary
Congress president Rahul Gandhi will pay a two-day visit to flood-affected areas of Kerala from August 28. Rahul will reach the capital city of Kerala, Thiruvananthapuram on August 28 following which he will visit the flood-affected areas of Chengannur, Alappuzha and Angamaly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X