ಅಜ್ಜಿ ಹತ್ಯೆಗೆ ಕಾರಣವಾಗಿದ್ದ ಸ್ವರ್ಣ ಮಂದಿರಕ್ಕೆ ರಾಹುಲ್ ಭೇಟಿ: ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಲಿದೆ ಭಾರತ್ ಜೋಡೋ ಯಾತ್ರೆ
ನವದೆಹಲಿ, ಜನವರಿ 10: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯು ಅಪರೂಪದ ಹಾಗೂ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗುತ್ತಿದೆ. ದಿನಗಳೆದಂತೆ ಭಾರತ್ ಜೋಡೋ ಯಾತ್ರೆಗೆ ವ್ಯಾಪಕ ಬೆಂಬಲ ಸಿಗುತ್ತಿದೆ. ಜನರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ. ಹರಿಯಾಣದಲ್ಲಿ ಸಾಗುತ್ತಿರುವ ಯಾತ್ರೆಯಲ್ಲಿ ರೈತ ಮುಖಂಡರು, ಯುವಕ-ಯುವತಿಯರು ಮಹಿಳೆಯರು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದಾರೆ.

ಬುಧವಾರ ಪಂಜಾಬ್ಗೆ ಭಾರತ್ ಜೋಡೋ ಯಾತ್ರೆ
ಈಗ ಹರಿಯಾಣದಲ್ಲಿರುವ ಭಾರತ್ ಜೋಡೋ ಯಾತ್ರೆಯು 116 ದಿನಗಳನ್ನು ಪೂರೈಸಿದೆ. 2500 ಕಿಮೀಗೂ ಅಧಿಕ ದೂರ ಕ್ರಮಿಸಿದೆ. ಇಂದು ಹರಿಯಾಣದಲ್ಲಿ ಭಾರತ್ ಜೋಡೋ ಯಾತ್ರೆ ಮುಕ್ತಾಯವಾಗಲಿದೆ. ನಾಳೆ ಪಂಜಾಬ್ ಪ್ರವೇಶಿಸಲಿರುವ ಭಾರತ್ ಜೋಡೋ ಯಾತ್ರೆಗೆ ಅಪಾರ ಪ್ರಮಾಣದ ಜನರು ಬರುವ ನಿರೀಕ್ಷೆ ಇದೆ. ಪಂಜಾಬ್ ಪ್ರವೇಶಕ್ಕೂ ಮುನ್ನ ರಾಹುಲ್ ಗಾಂಧಿ ಅವರು ಅಮೃತಸರದ ಸ್ವರ್ಣ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥಿಸಲಿದ್ದಾರೆ.
ಈ ಕುರಿತುವ ಟ್ವೀಟ್ ಮಾಡಿರುವ ಪಕ್ಷದ ನಾಯಕ ಜೈರಾಮ್ ರಮೇಶ್, 'ಭಾರತ್ ಜೋಡೋ ಯಾತ್ರೆಯು ಈಗ ಅಂಬಾಲಾದಲ್ಲಿದೆ. ಹರಿಯಾಣದಲ್ಲಿ ಇಂದು ಕೊನೆಗೊಳ್ಳಲಿದೆ. ನಾಳೆ ಬೆಳಿಗ್ಗೆ ಪಂಜಾಬ್ ಅನ್ನು ಪ್ರವೇಶಿಸಲಿದೆ. ಅಮೃತಸರದಲ್ಲಿರುವ ಅತ್ಯಂತ ಪವಿತ್ರವಾದ ಗೋಲ್ಡನ್ ಟೆಂಪಲ್ಗೆ ರಾಹುಲ್ ಭೇಟಿ ನೀಡಲಿದ್ದಾರೆ. ಯಾತ್ರೆಯೊಂದರ ಆರಂಭ ಇದಕ್ಕಿಂತ ಉತ್ತಮವಾಗಿರುವುದಕ್ಕೆ ಸಾಧ್ಯವಿಲ್ಲ. ಸ್ವರ್ಣ ಮಂದಿರದಲ್ಲಿ ರಾಹುಲ್ ಗಾಂಧಿ ಪ್ರಾರ್ಥನೆ ಸಲ್ಲಿಸಲಿದ್ದಾರೆ' ಎಂದು ತಿಳಿಸಿದ್ದಾರೆ.

ಇಂದಿರಾ ಗಾಂಧಿ ಹತ್ಯೆಗೆ ಕಾರಣವಾಗಿದ್ದ ಸ್ವರ್ಣ ಮಂದಿರ
ಅಮೃತಸರದಲ್ಲಿರುವ ಸ್ವರ್ಣ ಮಂದಿರ ಸಿಕ್ಖರ ಅತ್ಯಂತ ಪವಿತ್ರ ಸ್ಥಳ. ಇದಕ್ಕೆ ರಕ್ತಸಿಕ್ತ ಇತಿಹಾಸವೂ ಇದೆ. ಖಲಿಸ್ತಾನ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಇಟ್ಟು ಸ್ವರ್ಣ ಮಂದಿರದಲ್ಲಿ ಅಡಗಿಕೊಂಡಿದ್ದ ಜರ್ನೈಲ್ ಸಿಂಗ್ ಭಿಂದ್ರನ್ ವಾಲೆನನ್ನು ಕೊಲ್ಲಿಸಲು ಇಂದಿರಾ ಗಾಂಧಿ ಸೈನ್ಯವನ್ನು ಕಳಿಸುತ್ತಾರೆ. ಇದಕ್ಕೆ ಆಪರೇಶನ್ ಬ್ಯೂ ಸ್ಟಾರ್ ಎಂದು ಹೆಸರಿಡಲಾಗಿತ್ತು. ಮಂದಿರದಲ್ಲೇ ಅಡಗಿದ್ದ ಪ್ರತ್ಯೇಕವಾದಿಗಳನ್ನು ಹತ್ಯೆಗೈಯಲು ಭಾರತದ ಸೇನೆ ಯಶಸ್ವಿಯಾಗಿತ್ತು. ಈ ಪವಿತ್ರ ಸ್ಥಳದಲ್ಲಿ ನಡೆದಿದ್ದ ಘಟನೆ ಸಿಕ್ಖರನ್ನು ಕೆರಳಿಸಿತ್ತು ಎಂದು ಇತಿಹಾಸದಲ್ಲಿ ಉಲ್ಲೇಖವಾಗಿದೆ. ಈ ಕಾರಣಕ್ಕಾಗಿಯೇ, ಅಂದಿನ ಪ್ರಧಾನಿ ಇಂದಿರಾಗಾಂಧಿ ಅವರನ್ನು ಇಬ್ಬರು ಬಾಡಿಗಾರ್ಡ್ಗಳು ಹತ್ಯೆಮಾಡಿದ್ದರು. ಈ ಸ್ಥಳಕ್ಕೆ ರಾಹುಲ್ ಭೇಟಿ ಪ್ರಾರ್ಥಿಸುತ್ತಿರುವುದು ಎಲ್ಲರ ಕುತೂಹಕ್ಕೆ ಗ್ರಾಸವಾಗಿದೆ.

ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ರಾಹುಲ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಆರ್ಎಸ್ಎಸ್ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ನಿನ್ನೆ ಹರಿಯಾಣದ ಕುರುಕ್ಷೇತ್ರದಲ್ಲಿ ಮಾತನಾಡಿದ್ದ ಅವರು, ಆರ್ಎಸ್ಎಸ್ಗೆ ಕೌರವರ ಸೈನ್ಯವೆಂದು ಕರೆದಿದ್ದರು. 21 ನೇ ಶತಮಾನದಲ್ಲಿ ಕೌರವರು ಖಾಕಿ ಚಡ್ಡಿ ಧರಿಸಿ, ಕೈಯಲ್ಲಿ ಲಾಠಿ ಹಿಡಿದು ನಿಂತಿದ್ದಾರೆ ಎಂದು ಮೂದಲಿಸಿದ್ದಾರೆ.
ಮಹಾಭಾರತವು ಹರಿಯಾಣದಲ್ಲಿ ನಡೆದಿದೆ. ಇದು ಮಹಾಭಾರತದ ಪುಣ್ಯಭೂಮಿ. ಈಗ ಅಂದರೆ 21 ನೇ ಶತಮಾನದಲ್ಲಿ ಕೌರವರು ಯಾರೆಂದು ನಿಮಗೆ ಹೇಳುತ್ತೇನೆ. ಅವರು ಖಾಕಿ ಚಡ್ಡಿ ಧರಿಸಿರುತ್ತಾರೆ. ಕೈಯಲ್ಲಿ ಲಾಠಿ ಹಿಡಿದು ನಿಂತಿರುತ್ತಾರೆ. ಶಾಖೆ ನಡೆಸುತ್ತಾರೆ ಎಂದು ಹೇಳಿದ್ದಾರೆ.

ಕಾಶ್ಮೀರದಲ್ಲಿ ಕೊನೆಗೊಳ್ಳಲಿರುವ ಭಾರತ್ ಜೋಡೋ ಯಾತ್ರೆ
ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಆರಂಭವಾಗಿದೆ. ಇದು ಕೇರಳ, ತಮಿಳುನಾಡು, ಕರ್ನಾಟಕದ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ, ದೆಹಲಿ, ಉತ್ತರ ಪ್ರದೇಶಗಳಲ್ಲಿ ಕ್ರಮಿಸಿದೆ. ನಾಳೆ ಪಂಜಾಬ್ ಪ್ರವೇಶಿಸಲಿದೆ. ಆ ನಂತರ ಕಾಶ್ಮೀರದ ಶ್ರೀನಗರ ಪ್ರವೇಶಿಸಿ ಅಲ್ಲಿ ಕೊನೆಗೊಳ್ಳಲಿದೆ. ಯಾತ್ರೆ 3500 ಕಿಮೀ ಅಧಿಕವಾಗಿ ಕ್ರಮಿಸಲಿದೆ. ಯಾತ್ರೆಯಲ್ಲಿ ಈಗಾಗಲೇ ಲಕ್ಷಾಂತರ ಜನರು ಭಾಗವಹಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತರು, ಹೋರಾಟಗಾರರು, ರೈತ ಮುಖಂಡರು, ವಿವಿಧ ಪಕ್ಷಗಳ ನಾಯಕರು, ಯುವಕ-ಯುವತಿಯರು, ಆಟಗಾರರು, ಸಿನಿಮಾ ನಟರು, ಕಲಾವಿದರು, ಪ್ರಗತಿಪರರು ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications