ಪಾದಯಾತ್ರೆಯ ಮೂಲಕ ಮೋದಿ ವಿರುದ್ದ ರಾಹುಲ್
ನವದೆಹಲಿ, ಫೆ 6: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಗುಜರಾತ್ ನಲ್ಲಿ ಪ್ರದೇಶ ಯುವ ಕಾಂಗ್ರೆಸ್ ಘಟಕ ಆಯೋಜಿಸಿರುವ ಪಾದಯಾತ್ರೆಯಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ.
ಗುಜರಾತ್ ಪ್ರದೇಶ ಯುವ ಕಾಂಗ್ರೆಸ್ ಘಟಕ ಆಯೋಜಿಸಿರುವ ' ವಿಕಾಸ್ ಖೋಜ್' ಪಾದಯಾತ್ರೆಯು ಶನಿವಾರ (ಫೆ 8) ದಕ್ಷಿಣ ಗುಜರಾತಿನ ಬರ್ದೋಲಿಯಲ್ಲಿ ಮುಕ್ತಾಯಗೊಳ್ಳಲಿದೆ. ಅಂದು ರಾಹುಲ್ ಗಾಂಧಿ ಪಾದಯತ್ರೆಯಲ್ಲಿ ಭಾಗವಹಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆಂದು ವರದಿಯಾಗಿದೆ.
ಈ ಪಾದಯಾತ್ರೆಯನ್ನು ಕಾಂಗ್ರೆಸ್ ಯುವ ಘಟಕ, ನರೇಂದ್ರ ಮೋದಿಯವರು ನರ್ಮದಾ ನದಿಯಲ್ಲಿ ಪ್ರತಿಷ್ಠಾಪಿಸಲು ಹೊರಟಿರುವ ಸರ್ದಾರ್ ಪಟೇಲ್ ಪುತ್ಥಳಿ ಕಾರ್ಯಕ್ರಮಕ್ಕೆ ವಿರುದ್ದವಾಗಿ ಹಮ್ಮಿಕೊಂಡಿದೆ. (ವಿಷಕಾರಿದ ಸೋನಿಯಾ ಮೇಲೆ ಕೆಂಡಕಾರಿದ ಮೋದಿ)

1928ರಲ್ಲಿ ವಲ್ಲಭಭಾಯಿ ಪಟೇಲ್ ನೇತೃತ್ವದಲ್ಲಿ ಗಾಂಧಿ ತತ್ವಕ್ಕೆ ವಿರುದ್ದವಾಗಿ ಬರ್ದೋಲಿ ಕಿಶಾನ್ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ಅಂದಿನಿಂದ ಪಟೇಲ್ ಸರ್ದಾರ್ ಪಟೇಲ್ ಎಂದು ಹೆಸರುವಾಸಿಯಾದರು. ಮೋದಿ ಈಗ ಸರ್ದಾರ್ ಪಟೇಲ್ ಹೆಸರಿನಲ್ಲಿ ಪುತ್ಥಳಿ ಪ್ರತಿಷ್ಠಾಪಿಸಲು ದೇಶಾದ್ಯಂತ ಜನತೆಯಿಂದ ಉಕ್ಕು ಸಂಗ್ರಹಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ಮೋದಿ ಅವರ ಈ ಕಾರ್ಯಕ್ರಮದ ವಿರುದ್ದ ಆಯೋಜಿಸಲಾಗಿರುವ ಪಾದಯಾತ್ರೆಯ ಅಂತಿಮ ಘಟ್ಟದಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಯುವಕರನ್ನು ಕಾಂಗ್ರೆಸ್ ನತ್ತ ಸೆಳೆಯಲು ಸಂವಾದ ಕಾರ್ಯಕ್ರಮ ನಡೆಸುವ ಸಾಧ್ಯತೆಯಿದೆ. (ಪ್ರಣಬ್ ಗೆ 2 ಬಾರಿ ಪಿಎಂ ಸ್ಥಾನ ತಪ್ಪಿಸಿದ ಕಾಂಗ್ರೆಸ್)
ಪಾದಯಾತ್ರೆ ಅಂತಿಮ ಘಟ್ಟ ತಲುಪುವ ಐದು ಕಿಲೋಮೀಟರ್ ಮುನ್ನ ರಾಹುಲ್ ಇದರಲ್ಲಿ ಭಾಗಿಯಾಗಲಿದ್ದಾರೆ. 2005ರ ನಂತರ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ಗುಜರಾತಿನಲ್ಲಿ ಪಾದಯಾತ್ರೆಯೊಂದರಲ್ಲಿ ಪಾಲ್ಗೊಳ್ಳಲಿದ್ದಾರೆಂದು ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಮಾಡಿದೆ.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications