ಹೊಸ ಆಲೋಚನೆ ಚಿಂತನೆಗಾಗಿ ರಾಹುಲ್ ವಿಶ್ವ ಪರ್ಯಟನ
ಕಾಂಗ್ರೆಸ್ ನ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ವಿಶ್ವದಾದ್ಯಂತ ಅಧ್ಯಯನ ಪ್ರವಾಸ ಕೈಗೊಳ್ಳಲಿದ್ದಾರೆ. 2019ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಪೂರ್ವಭಾವಿ ಸಿದ್ಧತೆಯಾಗಿ ಈ ಪ್ರವಾಸಕ್ಕೆ ಕಳುಹಿಸಲಾಗುತ್ತದೆ.
"ಈ ಅಧ್ಯಯನ ಪ್ರವಾಸದಿಂದ ರಾಹುಲ್ ಗಾಂಧಿ ಅವರಿಗೆ ಸಹಾಯವಾಗುತ್ತದೆ. ಜತೆಗೆ ಕಾಂಗ್ರೆಸ್ ಪಕ್ಷ ಹಾಗೂ ಇಡೀ ದೇಶಕ್ಕೆ ಅನುಕೂಲವಾಗುತ್ತದೆ" ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಪಿ.ಜೋಶಿ ಹೇಳಿದ್ದಾರೆ. ಹೊಸ ತಂತ್ರಜ್ಞಾನಕ್ಕೆ ತೆರೆದುಕೊಳ್ಳುವುದರಿಂದ ಹೊಸ ನೀತಿಯನ್ನು ರೂಪಿಸಲು ಅವರಿಗೆ ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ.

ರಾಹುಲ್ ಅವರಿಗೆ ಈ ದೇಶಕ್ಕಾಗಿ ಹೊಸ ಆಲೋಚನೆ, ಚಿಂತನೆಯನ್ನು ತರುವ ಉದ್ದೇಶವಿದೆ. ಬೇರೆ ಪಕ್ಷದ ನಾಯಕರು ಇನ್ನೂ ಭೂತಕಾಲದಲ್ಲೇ ಉಳಿದುಹೋಗಿದ್ದಾರೆ. ಆದರೆ ರಾಹುಲ್ ಭವಿಷ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಇದರಿಂದ ಇತರ ದೇಶಗಳಿಂದ ಭಾರತ ಏನು ಕಲಿಯಬಹುದು ಎಂಬ ಬಗ್ಗೆ ಅವರ ಜ್ಞಾನ ವೃದ್ಧಿಸುತ್ತದೆ ಎಂದಿದ್ದಾರೆ.
ಕಳೆದ ತಿಂಗಳು ರಾಹುಲ್ ಗಾಂಧಿ ನಾರ್ವೆಗೆ ತೆರಳಿದ್ದರು. ಅಲ್ಲಿ ಉದ್ಯಮಿಗಳನ್ನು ಮತ್ತು ಗಣ್ಯರನ್ನು ಭೇಟಿ ಮಾಡಿದ್ದರು. ಈ ತಿಂಗಳು ರಾಹುಲ್ ಅಮೆರಿಕದ ಸಿಲಿಕಾನ್ ವ್ಯಾಲಿಗೆ ತೆರಳುವ ಸಾಧ್ಯತೆ ಇದೆ. ಅಲ್ಲಿ ಆರ್ಟಿಫಿಷಿಯಲ್ ಇಂಟಲೆಜೆನ್ಸ್ ಬಗ್ಗೆ ಹೆಚ್ಚಿನ ವಿಷಯ ಕಲೆ ಹಾಕಲಿದ್ದಾರೆ.
ಸೆಪ್ಟೆಂಬರ್ ಇಪ್ಪತ್ತರಂದು ಸಂಜೆ ಆರು ಗಂಟೆಗೆ ಅಮೆರಿಕದ ಟೈಮ್ಸ್ ಸ್ಕ್ವಯರ್ ನಲ್ಲಿರುವ ಮೇರಿಯಟ್ ಮಾರ್ಕಿಸ್ ಹೋಟೆಲ್ ನಲ್ಲಿ ಇಂಡಿಯ ನ್ಯಾಷನಲ್ ಓವರ್ ಸೀಸ್ ಕಾಂಗ್ರೆಸ್ ಯುಎಸ್ ಎ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರಾಹುಲ್ ಭಾಗವಹಿಸಲಿದ್ದಾರೆ.
ಓವರ್ ಸೀಸ್ ಕಾಂಗ್ರೆಸ್ ನ ಮುಖ್ಯಸ್ಥ ಸ್ಯಾಮ್ ಪಿಟ್ರೋಡಾ, ಯುಎಸ್ ಎ ರಾಷ್ಟ್ರೀಯ ಅಧ್ಯಕ್ಷ ಶುದ್ಧ್ ಪ್ರಕಾಶ್ ಸಿಂಗ್ ಭಾಗವಹಿಸಲಿದ್ದಾರೆ.
ಈ ಎಲ್ಲ ಅಧ್ಯಯನ ಪ್ರವಾಸವು ಮುಂದಿನ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೈಗೊಳ್ಳಲಾಗುತ್ತಿದೆ. ನಲವತ್ತೇಳು ವರ್ಷದ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ನ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸುವ ನಿರೀಕ್ಷೆ ಇದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications