ಕಾಶ್ಮೀರಿ ಪಂಡಿತರ 'ಅವಸ್ಥೆ' ಕುರಿತು ಪ್ರಧಾನಿಗೆ ಪತ್ರ ಬರೆದ ರಾಹುಲ್: ಆಡಳಿತದ 'ಅಸೂಕ್ಷ್ಮ' ಧೋರಣೆ ಎಂದದ್ದೇಕೆ ಕಾಂಗ್ರೆಸ್ ನಾಯಕ?
ಭದ್ರತೆಯ ಭರವಸೆಯಿಲ್ಲದೆ ಕಾಶ್ಮೀರಿ ಕಣಿವೆಗೆ ಮರಳಲು ಇಷ್ಟಪಡದ ಕಾಶ್ಮೀರಿ ಪಂಡಿತರ ಸಂಕಟವನ್ನು ಪರಿಶೀಲಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರ ಬರೆದಿದ್ದಾರೆ.
ನವದೆಹಲಿ, ಫೆಬ್ರವರಿ 03: ಭದ್ರತೆಯ ಭರವಸೆಯಿಲ್ಲದೆ ಕಾಶ್ಮೀರಿ ಕಣಿವೆಗೆ ಮರಳಲು ಇಷ್ಟಪಡದ ಕಾಶ್ಮೀರಿ ಪಂಡಿತರ ಸಂಕಟವನ್ನು ಪರಿಶೀಲಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶವಾದ ಕಾಶ್ಮೀರದ ಆಡಳಿತವು ಅಸೂಕ್ಷ್ಮ ದೋರಣೆಯನ್ನು ಅನುಸರಿಸುತ್ತಿದೆ ಎಂದು ರಾಹುಲ್ ಆರೋಪಿಸಿದ್ದಾರೆ.
ಮೋದಿಗೆ ಬರೆದ ಪತ್ರದಲ್ಲಿ, ಇತ್ತೀಚೆಗೆ ಭಯೋತ್ಪಾದಕರು ಕಾಶ್ಮೀರಿ ಪಂಡಿತರು ಮತ್ತು ಇತರರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿರುವ ವಿಚಾರದ ಬಗ್ಗೆ ರಾಹುಲ್ ಹೇಳಿದ್ದಾರೆ. ಇದು ಕಣಿವೆಯಲ್ಲಿ ಭಯ ಮತ್ತು ಆತಂಕದ ವಾತಾವರಣವನ್ನು ಸೃಷ್ಟಿಸಿದೆ ಎಂದು ಅವರು ತಿಳಿಸಿದ್ದಾರೆ.
ಇಡೀ ಭಾರತವನ್ನು ಪ್ರೀತಿ ಮತ್ತು ಏಕತೆಯ ಎಳೆಯಲ್ಲಿ ಒಂದುಗೂಡಿಸುವ ಉದ್ದೇಶದಿಂದ ಭಾರತ್ ಜೋಡೋ ಯಾತ್ರೆಯನ್ನು ಕೈಗೊಂಡಿದ್ದೆ. ಆ ವೇಳೆ, ಕಾಶ್ಮೀರಿ ಪಂಡಿತರ ನಿಯೋಗವು ತಮ್ಮನ್ನು ಭೇಟಿ ಮಾಡಿದೆ ಎಂದು ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ.

'ಅವರು (ಕಾಶ್ಮೀರಿ ಪಂಡಿತರು) ಸರ್ಕಾರಿ ಅಧಿಕಾರಿಗಳು ತಮ್ಮನ್ನು ಕಾಶ್ಮೀರ ಕಣಿವೆಯಲ್ಲಿ ಕೆಲಸಕ್ಕೆ ಹಿಂತಿರುಗುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಹೇಳಿದರು. ಈ ಪರಿಸ್ಥಿತಿಯಲ್ಲಿ, ಅವರ ಸುರಕ್ಷತೆ ಮತ್ತು ಭದ್ರತೆಯ ಯಾವುದೇ ಖಾತರಿಯಿಲ್ಲದೆ ಅವರನ್ನು ಕಣಿವೆಗೆ ಹಿಂತಿರುಗುವಂತೆ ಒತ್ತಾಯಿಸುವುದು ಕ್ರೂರ ಕ್ರಮವಾಗಿದೆ' ಎಂದು ರಾಹುಲ್ ತಿಳಿಸಿದ್ದಾರೆ.
ಪರಿಸ್ಥಿತಿ ಸುಧಾರಿಸುವವರೆಗೆ, ಸರ್ಕಾರವು ಈ ಕಾಶ್ಮೀರಿ ಪಂಡಿತ್ ಉದ್ಯೋಗಿಗಳಿಂದ ಇತರ ಆಡಳಿತ ಮತ್ತು ಸಾರ್ವಜನಿಕ ಸೌಲಭ್ಯಗಳಲ್ಲಿ ಸೇವೆಗಳನ್ನು ಪಡೆಯಬಹುದು ಎಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥರು ಹಿಂದಿಯಲ್ಲಿ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
'ಕಾಶ್ಮೀರಿ ಪಂಡಿತರು ತಮ್ಮ ಸುರಕ್ಷತೆ ಮತ್ತು ಕುಟುಂಬದ ಕಾಳಜಿಗಾಗಿ ಮನವಿ ಮಾಡುತ್ತಿರುವಾಗ ಮತ್ತು ಸರ್ಕಾರದಿಂದ ಸಹಾನುಭೂತಿ ಮತ್ತು ವಾತ್ಸಲ್ಯವನ್ನು ನಿರೀಕ್ಷಿಸುತ್ತಿರುವ ಸಮಯದಲ್ಲಿ, ಅವರಿಗೆ ಲೆಫ್ಟಿನೆಂಟ್ ಗವರ್ನರ್ 'ಭಿಕ್ಷುಕರು' ಎಂಬ ಪದಗಳನ್ನು ಬಳಸುವುದು ಬೇಜವಾಬ್ದಾರಿಯಾಗಿದೆ. ಪ್ರಧಾನಿಯವರೇ, ಆಡಳಿತದ ಈ ಸಂವೇದನಾರಹಿತ ಶೈಲಿಯ ಬಗ್ಗೆ ನಿಮಗೆ ಪರಿಚಯವಿಲ್ಲದಿರಬಹುದು' ಎಂದು ರಾಹುಲ್ ಹೇಳಿದ್ದಾರೆ.

'ನಾನು ಕಾಶ್ಮೀರಿ ಪಂಡಿತ್ ಸಹೋದರ ಸಹೋದರಿಯರಿಗೆ ಅವರ ಕಾಳಜಿ ಮತ್ತು ಬೇಡಿಕೆಗಳನ್ನು ನಿಮಗೆ ತಿಳಿಸಲು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದ್ದೇನೆ. ಈ ಮಾಹಿತಿ ಸಿಕ್ಕ ತಕ್ಷಣ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವ ಭರವಸೆ ಇದೆ' ಎಂದು ಗುರುವಾರ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಕಾಶ್ಮೀರಿ ಪಂಡಿತ್ ನಿಯೋಗವು ಸಾಂಬಾ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿತ್ತು. ಭಯೋತ್ಪಾದಕರ ಉದ್ದೇಶಿತ ಹತ್ಯೆಗಳು ಮತ್ತು ಪ್ರಧಾನ ಮಂತ್ರಿಯ ಪ್ಯಾಕೇಜ್ ಅಡಿಯಲ್ಲಿ ಉದ್ಯೋಗಿಗಳ ಪರಿಣಾಮವಾಗಿ ಪ್ರತಿಭಟನೆ ಸೇರಿದಂತೆ ಅವರ ಸಮಸ್ಯೆಗಳ ಬಗ್ಗೆ ರಾಹುಲ್ ಅವರಿಗೆ ವಿವರಿಸಿದ್ದರು.
ಸುಮಾರು 4,000 ಕಾಶ್ಮೀರಿ ಪಂಡಿತರು ಕಾಶ್ಮೀರ ಕಣಿವೆಯಲ್ಲಿ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. 2008 ರಲ್ಲಿ ಘೋಷಿಸಲಾದ ಪ್ರಧಾನ ಮಂತ್ರಿಯವರ ಉದ್ಯೋಗ ಪ್ಯಾಕೇಜ್ ಅಡಿಯಲ್ಲಿ ಅವರ ಆಯ್ಕೆಯ ನಂತರ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ಯಾಕೇಜ್ ಎರಡು ಪ್ರಮುಖ ಅಂಶಗಳನ್ನು ಹೊಂದಿದೆ. ಸಮುದಾಯದ ಯುವಕರಿಗೆ 6,000 ಉದ್ಯೋಗಗಳು ಮತ್ತು ನೇಮಕಗೊಂಡವರಿಗೆ ವಸತಿ ಘಟಕಗಳನ್ನು ನಿರ್ಮಿಸುವುದು.












Click it and Unblock the Notifications