ರಾಹುಲ್ ಹೇಳಿದ ದಾಖಲೆಗಳು, ಅವೆಲ್ಲ ನಂಬಲ್ಲ ಎಂದಿರುವ ಸುಪ್ರೀಂ
ಎಐಸಿಸಿ ಉಪಾಧ್ಯಕ್ಷ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡಿದ ಭ್ರಷ್ಟಾಚಾರ ಆರೋಪಕ್ಕೆ ಇರುವ ಸಾಕ್ಷ್ಯವನ್ನು ಈಗಾಗಲೇ ಸುಪ್ರೀಂ ಕೋರ್ಟ್ ನಂಬಲರ್ಹವಲ್ಲ ಎಂದು ಹೇಳಿಯಾಗಿದೆ.
ಬೆಂಗಳೂರು, ಡಿಸೆಂಬರ್ 22: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಮೋದಿ ಗುಜರಾತ್ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಹಾರ ಹಾಗೂ ಬಿರ್ಲಾ ಸಮೂಹದಿಂದ ಹಣ ಪಡೆದಿದ್ದರು ಎಂಬುದು ರಾಹುಲ್ ಆರೋಪ.
ರಾಹುಲ್ ಈಗ ಪ್ರಸ್ತಾವ ಮಾಡುತ್ತಿರುವುದು ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿದ್ದ ದಾಖಲೆಗಳನ್ನು. ಅವುಗಳನ್ನು ಈಗಾಗಲೇ ಸುಪ್ರೀಂ ಕೋರ್ಟ್ 'ನಂಬಲರ್ಹವಲ್ಲ' ಎಂದು ಹೇಳಿಯಾಗಿದೆ. ಈ ಹಿಂದೆ ಮೋದಿ ಹಾಗೂ ಇತರ ರಾಜಕಾರಣಿಗಳು ಕಾರ್ಪೋರೇಟ್ ಕಂಪನಿಗಳಿಂದ ಹಣ ಪಡೆದಿದ್ದಾರೆ ಎಂದು ಆರೋಪಿಸಿ ವಕೀಲ ಪ್ರಶಾಂತ್ ಭೂಷಣ್ ಕೊರ್ಟ್ ಗೆ ಅರ್ಜಿ ಸಲ್ಲಿಸಿದ್ದರು.[ಮೋದಿಗೆ ಸಹಾರಾದಿಂದ 40 ಕೋಟಿ ಲಂಚ : ರಾಹುಲ್ ಆರೋಪ]
ನವೆಂಬರ್ 25ರಂದು ಇದರ ವಿಚಾರಣೆ ಕೈಗೆತ್ತಿಕೊಂಡ ನ್ಯಾ.ಜೆ.ಎಸ್.ಖೇಹರ್ ಹಾಗೂ ಅರುಣ್ ಮಿಶ್ರಾ ಅವರಿದ್ದ ಪೀಠವು, ಈ ದಾಖಲೆಗಳು ನಂಬಲು ಸಾಕಾಗುವಷ್ಟಿಲ್ಲ ಎಂದಿದ್ದರು. ಈ ಪೀಠವು ಅರ್ಜಿದಾರರ ಬಳಿ ಇನ್ನಷ್ಟು ವಿಶ್ವಾಸಾರ್ಹ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿತ್ತು. ಸಹಾರದವರ ದಾಖಲೆಗಳನ್ನು ಹೇಗೆ ನಂಬಲು ಸಾಧ್ಯ? ಅವರ ದಾಖಲೆಗಳು ಯಾವತ್ತೂ ಸಾಚಾ ಆಗಿಲ್ಲ ಎಂದು ಪೀಠ ಹೇಳಿದೆ.

ಸಹಾರ ದಾಖಲೆಗಳನ್ನು ಉಲ್ಲೇಖ ಮಾಡಿದ್ದ ಅರ್ಜಿದಾರರು, ಅಕ್ಟೋಬರ್ ಮತ್ತು ನವೆಂಬರ್ 2013ರಲ್ಲಿ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ದೊಡ್ಡ ಮೊತ್ತದ ಹಣ ಪಡೆದಿದ್ದಾರೆ ಎಂದು ಹೇಳಿದ್ದರು. ಯಾವುದೇ ಭ್ರಷ್ಟ ವ್ಯಕ್ತಿ ಪ್ರಧಾನಿ ಹೆಸರನ್ನು ಉಲ್ಲೇಖ ಮಾಡಿದ್ದಾನೆ ಅಂದರೆ ಅದನ್ನು ವಿಶ್ವಾಸಾರ್ಹ ಸಾಕ್ಷ್ಯ ಎಂದು ಪರಿಗಣಿಸುವುದಕ್ಕೆ ಸಾಧ್ಯವೇ ಎಂದು ಕೋರ್ಟ್ ಪ್ರಶ್ನಿಸಿತ್ತು.[ಭ್ರಷ್ಟಾಚಾರದಲ್ಲಿ ಸ್ವತಃ ಪ್ರಧಾನಿ ಭಾಗಿ, ನನ್ನ ಹತ್ರ ಸಾಕ್ಷ್ಯ ಇದೆ: ರಾಹುಲ್]
ನಮ್ಮ ಮುಂದೆ ನಂಬಬಹುದಾದ ಸಾಕ್ಷ್ಯ ತನ್ನಿ. ಬಿರ್ಲಾ, ಸಹಾರ ಅವರ ಬಳಿ ವಶಪಡಿಸಿಕೊಂಡ ದಾಖಲೆಗಳು ಏನೇನೂ ಅಲ್ಲ. ಜತೆಗೆ ಸಾಕ್ಷ್ಯ ನೀಡುವುದಕ್ಕೆ ಅರ್ಜಿದಾರರಿಗೆ ಕಾಲಾವಕಾಶ ಕೂಡ ನೀಡಿದೆ. ಡಿಸೆಂಬರ್ 16ಕ್ಕೆ ವಿಚಾರಣೆಗೆ ಬಂದಿದ್ದ ಪ್ರಕರಣವನ್ನು ಜನವರಿ 11ಕ್ಕೆ ಮುಂದೂಡಲಾಗಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications